Advertisement

ಹವಮಾನ ವೈಪರಿತ್ಯ: ಬೆಂಗಳೂರಿನಲ್ಲಿ ಲ್ಯಾಂಡ್ ಆದ ದುಬೈ-ಮಂಗಳೂರು ವಿಮಾನ

09:55 AM Feb 16, 2020 | Mithun PG |

ಮಂಗಳೂರು: ಕರಾವಳಿಯಲ್ಲಿ ಹವಾಮಾನ ವೈಪರೀತ್ಯದಿಂದಾಗಿ ದುಬೈನಿಂದ ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಶನಿವಾರ ಮುಂಜಾನೆ ಬಂದಿಳಿಯಬೇಕಾಗಿದ್ದ ಸ್ಪೈಸ್ ಜೆಟ್  ವಿಮಾನ ಮಾರ್ಗ ಬದಲಿಸಿ ಬೆಂಗಳೂರಿನಲ್ಲಿ ಲ್ಯಾಂಡ್ ಆಗಿದೆ.

Advertisement

ದಮ್ಮಾಮ್ ಮತ್ತು ದುಬೈ ನಿಂದ ಬಂದಿದ್ದ ಏರ್ ಇಂಡಿಯಾ ವಿಮಾನ ಮುಂಜಾವು 4:30ಕ್ಕೆ ಮಂಗಳೂರು ವಿಮಾನ ನಿಲ್ದಾಣದಲ್ಲಿ ಲ್ಯಾಂಡ್ ಆಗಿದ್ದು, ಆದರೆ 8:30 ಕ್ಕೆ ಬಂದಿದ್ದ ಮತ್ತೊಂದು ವಿಮಾನ ನೇರವಾಗಿ ಬೆಂಗಳೂರಿನಲ್ಲಿ ಇಳಿದಿದೆ.

ಬೆಂಗಳೂರಿನಿಂದ ಬೆಳಗ್ಗೆ 8:00 ಗಂಟೆಗೆ ಹೊರಟಿದ್ದ ಸ್ಪೈಸ್ ಜೆಟ್, ಇಂಡಿಗೋ ವಿಮಾನಗಳು ಮಂಗಳೂರಿನಲ್ಲಿ ಮಬ್ಬು ಕವಿದ ವಾತಾವರಣವಿದ್ದರಿಂದ ಮರಳಿ ಬೆಂಗಳೂರಿಗೆ ವಾಪಸ್ಸಾಗಿದೆ ಎಂದು ವರದಿಯಾಗಿದೆ.

ಹೈದರಬಾದ್ ನಿಂದ ಬಂದಿದ್ದ ಮತ್ತೊಂದು  ವಿಮಾನಕ್ಕೂ ಹವಮಾನ ವೈಪರಿತ್ಯ ಹಿನ್ನಲೆಯಲ್ಲಿ ಲ್ಯಾಂಡ್ ಆಗಲು ಅನುಮತಿ ದೊರೆತಿಲ್ಲ.

Advertisement

Udayavani is now on Telegram. Click here to join our channel and stay updated with the latest news.

Next