Advertisement

ಡಬ್ಬಿಂಗ್‌ ವಿರುದ್ಧ ಇಂದು ಪ್ರತಿಭಟನೆ

03:45 AM Mar 09, 2017 | Team Udayavani |

ಬೆಂಗಳೂರು: ಪರಭಾಷಾ ಚಿತ್ರಗಳ ಡಬ್ಬಿಂಗ್‌ ವಿರೋಧಿಸಿ ಮಾ.9ರಂದು ನಗರದಲ್ಲಿ  ಕನ್ನಡ ಒಕ್ಕೂಟ ಅಧ್ಯಕ್ಷ ವಾಟಾಳ್‌ ನಾಗರಾಜ್‌ ನೇತೃತ್ವದಲ್ಲಿ ಪ್ರತಿಭಟನೆ ನಡೆಯಲಿದ್ದು, ಚಲನಚಿತ್ರರಂಗದ ಪ್ರಮುಖ ನಟ, ನಟಿಯರು, ನಿರ್ದೇಶಕರು, ಕಲಾವಿದರು, ನಿರ್ಮಾಪಕರು ಪಾಲ್ಗೊಳ್ಳುವ ಸಾಧ್ಯತೆ ಇದೆ.

Advertisement

ಅಂದು ಬೆಳಗ್ಗೆ 11ಕ್ಕೆ ಮೈಸೂರು ಬ್ಯಾಂಕ್‌ ವೃತ್ತದಿಂದ ಫ್ರೀಡಂ ಪಾರ್ಕ್‌ವರೆಗೆ ಪ್ರತಿಭಟನಾ ಜಾಥಾ ನಡೆಯಲಿದೆ.   ಯಾವುದೇ ಕಾರಣಕ್ಕೂ ಡಬ್ಬಿಂಗ್‌ ಚಿತ್ರಗಳು ರಾಜ್ಯದಲ್ಲಿ ಪ್ರದರ್ಶಿತವಾಗಬಾರದು. ಈಗಾಗಲೇ ಪರಭಾಷಾ ಚಿತ್ರಗಳಿಂದ ಕನ್ನಡ ಚಿತ್ರೋದ್ಯಮದ ಮೇಲೆ ವ್ಯತಿರಿಕ್ತ ಪರಿಣಾಮಗಳಾಗುತ್ತಿವೆ. 

ಈ ಸಂದರ್ಭದಲ್ಲಿ ಡಬ್ಬಿಂಗ್‌ ಚಿತ್ರ ಬಂದರೆ ಕನ್ನಡ ಚಿತ್ರೋದ್ಯಮ ನಂಬಿಕೊಂಡಿರುವ ಸಾವಿರಾರು ಜನರು ಸಮಸ್ಯೆ ಎದುರಿಸಬೇಕಾಗುತ್ತದೆ. ಈ ಹಿನ್ನೆಲೆ ನಾಡಿನ ಚಿತ್ರಮಂದಿರಗಳು ಕೂಡ ಡಬ್ಬಿಂಗ್‌ ಚಲನಚಿತ್ರ  ಪ್ರದರ್ಶನಕ್ಕೆ ಮುಂದಾಗದೆ ಪ್ರತಿಭಟನೆಯಲ್ಲಿ ಪಾಲ್ಗೊಳ್ಳುವ ಮೂಲಕ ಹೋರಾಟಕ್ಕೆ ಕೈಜೋಡಿಸಬೇಕು ಎಂದು ವಾಟಾಳ್‌ ನಾಗರಾಜ್‌ ಕೋರಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next