Advertisement

ನಾಳೆಯಿಂದ ದುಡಿಯೋಣ ಬಾ ಅಭಿಯಾನ

02:05 PM Mar 14, 2021 | Team Udayavani |

ತುಮಕೂರು: ಬೇಸಿಗೆ ಅವಧಿಯಲ್ಲಿ ಕಲ್ಪತರು ನಾಡಿನ ಗ್ರಾಮೀಣ ಪ್ರದೇಶದ ಜನರಿಗೆ ಕೆಲಸ ಒದಗಿಸುವ ಉದ್ದೇಶದಿಂದ ನರೇಗಾ ಯೋಜನೆಯಡಿ ಮಾ.15 ರಿಂದ 3 ತಿಂಗಳವರೆಗೆ ದುಡಿಯೋಣ ಬಾ ಅಭಿಯಾನ ಹಮ್ಮಿಕೊಳ್ಳಲಾಗಿದೆ.

Advertisement

ನರೇಗಾ ಯೋಜನೆಯಡಿ ಗ್ರಾಮೀಣ ಜನರಿಗೆ ಬೇಸಿಗೆ ಅವಧಿಯಲ್ಲಿ ನಿರಂತರವಾಗಿ ಕೆಲಸ ಒದಗಿಸುವುದು. ಯೋಜನೆಯಿಂದ ಹೊರಗುಳಿದ ದುರ್ಬಲ ಕುಟುಂಬಗಳನ್ನು ಸಕ್ರಿಯವಾಗಿ ಭಾಗವಹಿಸುವಂತೆಮಾಡುವುದು. ಸ್ಥಳೀಯವಾಗಿ ಉದ್ಯೋಗ ನೀಡಿ ಸ್ವಾವಲಂಬಿಗಳಾಗುವಂತೆ ಮಾಡುವುದು. ಈ ಅಭಿಯಾನದ ಮುಖ್ಯ ಉದ್ದೇಶವಾಗಿದೆ ಎಂದು ಜಿಪಂ ಸಿಇಒ ಜಿ.ಎಂ.ಗಂಗಾಧರಸ್ವಾಮಿ ತಿಳಿಸಿದ್ದಾರೆ.

ಜನಜಾಗೃತಿ ಕಾರ್ಯಕ್ರಮ: ಮಾ.15ರಿಂದ ಮಾರ್ಚ್‌ 22ರವರೆಗೆ ದುಡಿಯೋಣ ಬಾ ಅಭಿಯಾನ ಕುರಿತುಜಿಲ್ಲೆಯ ಎಲ್ಲ ಗ್ರಾಪಂ ವ್ಯಾಪ್ತಿಯಲ್ಲಿ ಜನಜಾಗೃತಿಕಾರ್ಯಕ್ರಮ ನಡೆಸಲಾವುದು. ಒಂದು ಕುಟುಂಬವು ವರ್ಷದಲ್ಲಿ 100 ದಿನಗಳ ಕೆಲಸ ಮಾಡಲು ಅವಕಾಶ ಇದ್ದು, ಬೇಸಿಗೆ ಅವಧಿಯಲ್ಲಿ 60 ದಿನಗಳು ಕೆಲಸ ಮಾಡಿದರೆ 16,500 ರೂ.ಗಳಿಸಬಹುದು. ಇದರಿಂದ ಮುಂಬರುವ ಕೃಷಿ ಚಟುವಟಿಕೆಗೆ ಅಗತ್ಯವಿರುವ ಬಿತ್ತನೆ ಬೀಜ, ರಸಗೊಬ್ಬರ ಖರೀದಿ, ಮಕ್ಕಳ ಶಾಲೆ ಮತ್ತು ಕಾಲೇಜು ಶುಲ್ಕ ಭರಿಸಲು ಅನುಕೂಲವಾಗುತ್ತದೆ ಎಂಬ ಅಂಶದ ಬಗ್ಗೆ ಗ್ರಾಮೀಣ ಜನರಲ್ಲಿ ಜನ ಜಾಗೃತಿ ಮೂಡಿಸಲಾಗುವುದು ಎಂದು ತಿಳಿಸಿದ್ದಾರೆ.

ಉದ್ಯೋಗ ಚೀಟಿ ಹೊಂದಿಲ್ಲದ ಕುಟುಂಬಗಳಿಗೆ ನಮೂನೆ-1ರಲ್ಲಿ ಉದ್ಯೋಗ ಚೀಟಿಗಾಗಿ ಅರ್ಜಿ ಮತ್ತು ಅಗತ್ಯ ದಾಖಲಾತಿ ಪಡೆದುಕೊಳ್ಳುವುದು, ನೋಂದಾಯಿತ ಕೂಲಿಕಾರರಿಂದ ನಮೂನೆ-6ರಲ್ಲಿಒಂದೇ ಬಾರಿಗೆ 3 ತಿಂಗಳ ಕೆಲಸದ ಬೇಡಿಕೆ ಪಡೆಯುವುದು ಹಾಗೂ ಗ್ರಾಪಂಗಳಲ್ಲಿ ಕೆಲಸದ ಬೇಡಿಕೆಪಡೆಯಲು ಬೇಡಿಕೆ ಪೆಟ್ಟಿಗೆಗಳನ್ನು ಇಡುವುದು ಈಜನಜಾಗೃತಿ ಕಾರ್ಯಕ್ರಮದ ಉದ್ದೇಶವಾಗಿರುತ್ತದೆ ಎಂದು ಹೇಳಿದ್ದಾರೆ.

ಉದ್ಯೋಗ ಚೀಟಿ ವಿತರಣೆ: ಮಾ.23ರಿಂದ 31ರವರೆಗೆ ಉದ್ಯೋಗ ಚೀಟಿಗಾಗಿ ಅರ್ಜಿ ಸಲ್ಲಿಸಿದ ಎಲ್ಲ ಕುಟುಂಬಕ್ಕೆ ಕಡ್ಡಾಯವಾಗಿ ಉದ್ಯೋಗ ಚೀಟಿ ವಿತರಿಸುವುದು. ಕೆಲಸದ ಬೇಡಿಕೆ ಸಲ್ಲಿಸಿದ ಕೂಲಿಕಾರರಿಗೆ ಕೆಲಸ ಒದಗಿಸಲು ಕಾಮಗಾರಿಗಳ ಅಂದಾಜುಪಟ್ಟಿ ತಯಾರಿಕೆ, ತಾಂತ್ರಿಕ ಮತ್ತು ಆಡಳಿತ ಮಂಜೂರಾತಿ, ಸಾರ್ವಜನಿಕ ಮಾಹಿತಿ ಫ‌ಲಕ ಅಳವಡಿಕೆ ಮತ್ತು ಜಿಯೋ ಟ್ಯಾಗ್‌ ಇತ್ಯಾದಿ ಕಾಮಗಾರಿ ಪ್ರಾರಂಭ ಪೂರ್ವ ಸಿದ್ಧತೆ ಮಾಡಿಕೊಳ್ಳುವುದು. ವ್ಯವಸ್ಥಿತವಾಗಿ ಕೂಲಿಕಾರರ ಗುಂಪುಗಳನ್ನು ರಚಿಸಿ ಮೇಟ್‌ ಗುರುತಿಸುವುದು ಮತ್ತು ಮೇಟ್‌ಗಳಿಗೆ ತರಬೇತಿ ನೀಡಲು ಬೇಕಾದ ಅಗತ್ಯ ಸಿದ್ಧತೆ ಮಾಡಿಕೊಂಡು, ಏ.1ರಿಂದ ಕಾಮಗಾರಿ ಪ್ರಾರಂಭಿಸಲು ಎನ್‌ಎಂಆರ್‌ ಸೃಜನೆ ಮಾಡಲು ಕ್ರಮವಹಿಸಲಾಗುವುದು ಎಂದಿದ್ದಾರೆ. ಕೂಲಿಕಾರನಿಗೆ ನಿರಂತರ ಕೆಲಸ: ಏ.1ರಿಂದ ಜೂನ್‌ 15ರವರೆಗೆ ಪ್ರತಿ ಸೋಮವಾರ ಕೆಲಸದ ಬೇಡಿಕೆ ಪೆಟ್ಟಿಗೆ ತೆರೆದು ಕೆಲಸದ ಬೇಡಿಕೆ ಸಲ್ಲಿಸಿದ ಕೂಲಿಕಾರರವಿವರ ಎಂಐಎಸ್‌ನಲ್ಲಿ ದಾಖಲಿಸುವುದು. 2  ದಿನದೊಳಗೆ ಕೆಲಸ ಒದಗಿಸುವುದು. ಕೆಲಸದ ಸ್ಥಳದಲ್ಲಿ ಕುಡಿಯುವ ನೀರು, ನೆರಳು, ಶಿಶುಪಾಲನೆ ಸೌಲಭ್ಯ ಕಲ್ಪಿಸುವುದು. ಕೂಲಿಕಾರರಿಗೆ ನಿರಂತರವಾಗಿ ಕೆಲಸ ಒದಗಿಸಲು ಕ್ರಮಕೈಗೊಳ್ಳಲಾಗುತ್ತಿದೆ.

Advertisement

ಯೋಜನೆ ಯಶಸ್ಸಿಗೆ ಸಮಿತಿ ರಚನೆ  :

ದುಡಿಯೋಣ ಬಾ ಅಭಿಯಾನ ಮೇಲ್ವಿಚಾರಣೆ ಮಾಡಲು ಜಿಲ್ಲೆ, ತಾಲೂಕು, ಗ್ರಾಪಂಮಟ್ಟದಲ್ಲಿ ಉಸ್ತುವಾರಿ ಸಮಿತಿ ರಚಿಸಲಾಗಿದ್ದು,ಅಭಿಯಾನವನ್ನು ಸಂಪೂರ್ಣ ಯಶಸ್ವಿಗೊಳಿಸುವ ಸಂಪೂರ್ಣ ಹೊಣೆಗಾರಿಕೆಯನ್ನು ಆಯಾ

ಸಮಿತಿಗಳಿಗೆ ನೀಡಲಾಗಿದೆ. ಅಭಿಯಾನದಅವಧಿಯಲ್ಲಿ ಬದು ನಿರ್ಮಾಣ, ಬಚ್ಚಲು ಗುಂಡಿ, ಸಮಗ್ರ ಕೆರೆ ಅಭಿವೃದ್ಧಿ, ರಸ್ತೆ ಬದಿ ನೆಡು ತೋಪು, ಬ್ಲಾಕ್‌ ಪ್ಲಾಂಟೇಶನ್‌, ಕೃಷಿ ಅರಣ್ಯೀಕರಣ, ರೈತರ ಜಮೀನುಗಳಲ್ಲಿ ತೋಟಗಾರಿಕೆ ಬೆಳೆ ಬೆಳೆಯಲು ಮುಂಗಡವಾಗಿ ಗುಂಡಿ ತೆಗೆಯುವ ಕಾಮಗಾರಿ, ಬೋರ್‌ವೆಲ್‌ ರೀಚಾರ್ಜ್‌ ಕಾಮಗಾರಿ ಕೈಗೆತ್ತಿಕೊಳ್ಳಲು ಎಲ್ಲ ತಾಲೂಕು ಹಾಗೂ ಗ್ರಾಪಂ ಮಟ್ಟದ ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ.

ರಾಯಭಾರಿ ನೇಮಕಕ್ಕೂ ಅವಕಾಶ :

ದುಡಿಯೋಣ ಬಾ ಅಭಿಯಾನದ ಅನುಷ್ಟಾನ ಮತ್ತು ಮೇಲ್ವಿಚಾರಣೆಗಾಗಿ ಗ್ರಾಪಂ ವ್ಯಾಪ್ತಿಯಲ್ಲಿ ಅಭಿಯಾನದ ಕಾಲಾವಧಿಗೆ ರಾಯಭಾರಿಯನ್ನುಗ್ರಾಪಂ ಪಿಡಿಒ ಅಧಿಕಾರಿಗಳು ನೇಮಕ ಮಾಡಿಕೊಳ್ಳಬಹುದು. ನರೇಗಾ ಕೂಲಿ ಕೆಲಸದಲ್ಲಿ ದೀರ್ಘ‌ ಕಾಲ ಮೇಟ್‌ ಆಗಿ ಕಾರ್ಯನಿರ್ವಹಿಸಿಅನುಭವ ಇರುವವರಿಗೆ ರಾಯಭಾರಿಯಾಗಿ ನೇಮಿಸಬಹುದಾಗಿದೆ. ಬೇಸಿಗೆ ಕಾಲದಲ್ಲಿ ಗ್ರಾಮೀಣ ಪ್ರದೇಶದ ಕೂಲಿಕಾರರಿಗೆ ಕೃಷಿ ಚಟುವಟಿಕೆಗಳಲ್ಲಿ ಕೂಲಿಯ ಅವಕಾಶ ಕಡಿಮೆ ಇರುವುದರಿಂದ ಅಗತ್ಯವಿರುವ ಎಲ್ಲ ಜನರೂ ಗ್ರಾಪಂನಿಂದ ಉದ್ಯೋಗ ಚೀಟಿ ಪಡೆದುಕೆಲಸಕ್ಕಾಗಿ ಬೇಡಿಕೆ ಅರ್ಜಿ ಸಲ್ಲಿಸಿ ನರೇಗಾ ಯೋಜನೆಯಿಂದ ಅನುಕೂಲ ಪಡೆಯುವಂತೆ ಜಿಪಂ ಸಿಇಒ ಜಿ.ಎಂ.ಗಂಗಾಧರಸ್ವಾಮಿ ತಿಳಿಸಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next