Advertisement
ಎ. 17ರಂದು ಚುನಾವಣಾ ಅಧಿಸೂಚನೆ ಹೊರ ಬೀಳಲಿದ್ದು, ಅಂದೇ ನಾಮಪತ್ರ ಸಲ್ಲಿಕೆ ಪ್ರಕ್ರಿಯೆ ಆರಂಭಗೊಳ್ಳಲಿದೆ. ನಾಮಪತ್ರ ಸಲ್ಲಿಕೆಗೆ ಎ. 24 ಕಡೆಯ ದಿನ. ಎ. 25ರಂದು ನಾಮಪತ್ರ ಪರಿಶೀಲನೆ. ನಾಮಪತ್ರ ಹಿಂಪಡೆಯಲು ಎ. 27 ಕೊನೆಯ ದಿನ. ನಾಮಪತ್ರ ಸಲ್ಲಿಸುವುದಕ್ಕೆ ಏಳು ದಿನ ಅವಧಿ ಇದ್ದರೂ ಆದಷ್ಟು ಬೇಗ ಬಿ-ಫಾರಂ ಸಲ್ಲಿಸುವ ತವಕದಲ್ಲಿ ಆಕಾಂಕ್ಷಿಗಳಿದ್ದಾರೆ.
ಬಿಜೆಪಿಯಲ್ಲಿ ಅಭ್ಯರ್ಥಿಗಳ ಆಯ್ಕೆ ಪಕ್ಷದ ವರಿಷ್ಠ ಮಂಡಳಿಗೆ ಸವಾಲಾಗಿದೆ. ನಮ್ಮದು ಕಾರ್ಯಕರ್ತರ ಆಧಾರಿತ ಪಕ್ಷ, ಅಭ್ಯರ್ಥಿ ಯಾರೆಂಬುದುಮುಖ್ಯವಲ್ಲ ಎಂದು ಬಿಜೆಪಿ ನಾಯಕರು ಹೇಳಿಕೊಳ್ಳುತ್ತಾರಾದರೂ ಆಂತರಿಕವಾಗಿ ಅಲ್ಲಿ ಟಿಕೆಟ್ಗಾಗಿ ತೀವ್ರ ಪೈಪೋಟಿಯಿದೆ. ಸುಳ್ಯದಲ್ಲಿ ಪಕ್ಷದ ಅಭ್ಯರ್ಥಿಯಾಗಿ ಹಾಲಿ ಶಾಸಕ ಅಂಗಾರ ಹೆಸರು ಮಾತ್ರ ಘೋಷಣೆಯಾಗಿದೆ. ಉಳಿದಂತೆ 7 ಕ್ಷೇತ್ರಗಳಲ್ಲೂ ಹಲವು ಮಂದಿ ಆಕಾಂಕ್ಷಿಗಳಿದ್ದಾರೆ. ಕೆಲವರು ತಾವೇ ಅಭ್ಯರ್ಥಿಗಳು ಎಂಬ ನೆಲೆಯಲ್ಲಿ ಈಗಾಗಲೇ ಪ್ರಚಾರಕಾರ್ಯವನ್ನು ಆರಂಭಿಸಿದ್ದಾರೆ.
Related Articles
ಬಿಜೆಪಿಯಲ್ಲಿ ಆಕಾಂಕ್ಷಿಗಳ ಒತ್ತಡದ ಹಿನ್ನೆಲೆಯಲ್ಲಿ ಪಕ್ಷದ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಶಾ ಜಿಲ್ಲೆಯಲ್ಲಿ ತನ್ನ ಮೂಲಗಳಿಂದ ಇನ್ನೊಂದು ಸುತ್ತಿನ ಅಭಿಪ್ರಾಯ ಸಂಗ್ರಹ ಮಾಡಿದ್ದಾರೆ. ವರದಿಯ ಆಧಾರದಲ್ಲಿ ಹೆಚ್ಚು ಜನಪ್ರಿಯತೆ ಹೊಂದಿರುವ ಅಭ್ಯರ್ಥಿಯನ್ನು ಅಂತಿಮಗೊಳಿಸಿ ಪ್ರಕಟಿಸಲಾಗುತ್ತದೆ ಎಂದು ಪಕ್ಷದ ಮೂಲಗಳು ತಿಳಿಸಿವೆ. ಜೆಡಿಎಸ್ ಕಾದು ನೋಡುವ ತಂತ್ರ ಜಿಲ್ಲೆಯಲ್ಲಿ ಜೆಡಿಎಸ್ ಅಭ್ಯರ್ಥಿಗಳ ಆಯ್ಕೆಗೆ ಕಾದು ನೋಡುವ ತಂತ್ರ ಅನುಸರಿಸುತ್ತಿದೆ. ಸಿಪಿಎಂ ಈಗ ನಾಲ್ಕು ಕಡೆ ಸ್ಪರ್ಧಿಸಲು ನಿರ್ಧರಿಸಿ ಅಭ್ಯರ್ಥಿಗಳನ್ನು ಪ್ರಕಟಿಸಿದೆ. ಮಂಗಳೂರು ಕ್ಷೇತ್ರದಿಂದ ನಿತಿನ್ ಕುಮಾರ್ ಕುತ್ತಾರ್, ಮಂಗಳೂರು ದಕ್ಷಿಣ ಕ್ಷೇತ್ರದಿಂದ ಸಿ. ಸುನಿಲ್ ಕುಮಾರ್ ಬಜಾಲ್, ಮಂಗಳೂರು ಉತ್ತರದಿಂದ ಮುನೀರ್ ಕಾಟಿಪಳ್ಳ, ಮೂಡಬಿದಿರೆ ಕ್ಷೇತ್ರದಲ್ಲಿ ಕೆ. ಯಾದವ ಶೆಟ್ಟಿ ಅವರನ್ನು ಕಣಕ್ಕಿಳಿಸಿದೆ. ಎಸ್ಡಿಪಿಐಯಲ್ಲಿಯೂ ಅಭ್ಯರ್ಥಿಗಳ ಆಯ್ಕೆ ಪ್ರಕ್ರಿಯೆ ನಡೆಯುತ್ತಿದೆ.
Advertisement
ಅಸಮಾಧಾನ ಶಮನಕ್ಕೆ ಯತ್ನದಿಲ್ಲಿಯಲ್ಲಿ ಬಿಜೆಪಿ ವರಿಷ್ಠ ಮಂಡಳಿ ಅಭ್ಯರ್ಥಿಗಳ ಹೆಸರು ಅಂತಿಮಗೊಳಿಸುತ್ತಿದೆ ಎಂಬ ವರದಿ ಆಕಾಂಕ್ಷಿಗಳಲ್ಲಿ ಅತೃಪ್ತಿಯನ್ನು ಹೊತ್ತಿಸಿದೆ. ಅಭ್ಯರ್ಥಿ ಪಟ್ಟಿಯಲ್ಲಿ ತಮ್ಮ ಹೆಸರು ಇಲ್ಲ ಎಂಬುದನ್ನು ತಮ್ಮ ಆಪ್ತ ನಾಯಕರ ಮೂಲಕ ತಿಳಿದುಕೊಂಡಿರುವ ಆಕಾಂಕ್ಷಿಗಳು ಬೆಂಬಲಿಗರ ಜತೆ ಸಮಾಲೋಚನೆ ಆರಂಭಿಸಿದ್ದಾರೆ. ಅಸಮಾಧಾನದ ಅಲೆ ತೀವ್ರಗೊಳ್ಳುತ್ತಿರುವುದರ ಮುನ್ಸೂಚನೆ ಲಭಿಸಿರುವ ಪಕ್ಷದ ನಾಯಕರು ಆಕಾಂಕ್ಷಿಗಳನ್ನು ಕರೆಸಿ ಮಾತುಕತೆ ನಡೆಸಿ ಅಧಿಕಾರಕ್ಕೆ ಬಂದಲ್ಲಿ ಉತ್ತಮ ಸ್ಥಾನಮಾನ ನೀಡುವ ಭರವಸೆಯಿತ್ತು ಸಮಾಧಾನಪಡಿಸುವ ಕಾರ್ಯದಲ್ಲಿ ನಿರತರಾಗಿದ್ದಾರೆ. ಕೇಶವ ಕುಂದರ್