Advertisement

ಶಿಡ್ಲಘಟ್ಟ: ದುಗ್ಗಲಮ್ಮ ದೇಗುಲಕ್ಕೆ ಕ್ಯಾಂಟರ್ ಡಿಕ್ಕಿ ; ಕ್ಲೀನರ್ ಸಾವು, ದೇಗುಲಕ್ಕೆ ಹಾನಿ

09:58 PM Mar 01, 2021 | sudhir |

ಶಿಡ್ಲಘಟ್ಟ : ತಾಲ್ಲೂಕಿನ ಜಂಗಮಕೋಟೆ ಸಮೀಪದ ಬದಾನಿ ಕೆರೆಯ ಮೇಲೆ ನೆಲೆಸಿರು ಶ್ರೀ ದುಗ್ಗಲಮ್ಮ ದೇವಾಲಯಕ್ಕೆ ಕ್ಯಾಂಟರ್ ನುಗ್ಗಿದ ಪರಿಣಾಮ ಕ್ಲೀನರ್ ಸ್ಥಳದಲ್ಲಿ ಮೃತಪಟ್ಟು ಚಾಲಕ ಪ್ರಾಣಾಪಾಯದಿಂದ ಪಾರಾಗಿರುವ ಘಟನೆ ನಡೆದಿದೆ.

Advertisement

ತುಮಕೂರು ಜಿಲ್ಲೆಯ ಪಾವಗಡ ತಾಲೂಕಿನ ದೊಡ್ಡಹಳ್ಳಿ ಗ್ರಾಮದ ಅನೀಲ್ ಕುಮಾರ್ ಸ್ಥಳದಲ್ಲಿ ಮೃತಪಟ್ಟಿದ್ದು ಚಾಲಕ ಯಲ್ಲಪ್ಪ ಗಾಯಗೊಂಡು ಪ್ರಾಣಾಪಯದಿಂದ ಪಾರಾಗಿದ್ದಾನೆ.

ಕೋಲಾರದ ಎಪಿಎಂಸಿ ಮಾರುಕಟ್ಟೆಯಲ್ಲಿ ಟೊಮೇಟೊ ಲೋಡ್ ಇಳಿಸಿ ವಾಪಸ್ಸು ತೆರಳುವ ವೇಳೆಯಲ್ಲಿ ಅತಿವೇಗದಿಂದ ಬಂದ ಕ್ಯಾಂಟರ್ ರಸ್ತೆ ಬದಿಯಲ್ಲಿರುವ ದೇವಾಲಯಕ್ಕೆ ನುಗ್ಗಿದೆ ಇದರಿಂದ ಕ್ಯಾಂಟರ್ ಕ್ಲೀನರ್ ಸ್ಥಳದಲ್ಲಿ ಮೃತಪಟ್ಟಿದ್ದು ಕ್ಲೀನರ್ ದೇಹವನ್ನು ಜೆಸಿಬಿ ಮೂಲಕ ಹೊರತೆಗೆದಿದ್ದಾರೆ ಘಟನಾ ಸ್ಥಳಕ್ಕೆ ಪಿಎಸ್‍ಐ ಲಿಯಾಖತ್ತುಲ್ಲಾ ಮತ್ತು ಸಿಬ್ಬಂದಿ ಭೇಟಿ ನೀಡಿ ಪರಿಶೀಲಿಸಿ ಮುಂದಿನ ಕ್ರಮ ಕೈಗೊಂಡಿದ್ದಾರೆ.

ಇದನ್ನೂ ಓದಿ:ಅನಾರೋಗ್ಯ : ಮನನೊಂದ ಯುವಕ ಕಂದವಾರ ಕೆರೆಗೆ ಹಾರಿ ಆತ್ಮಹತ್ಯೆ

Advertisement

Udayavani is now on Telegram. Click here to join our channel and stay updated with the latest news.

Next