Advertisement

Dulip Trophy: ರೋಹಿತ್‌, ಕೊಹ್ಲಿಗೆ ವಿನಾಯಿತಿ

01:37 AM Aug 15, 2024 | Team Udayavani |

ಹೊಸದಿಲ್ಲಿ: ಟೀಮ್‌ ಇಂಡಿಯಾ ನಾಯಕ ರೋಹಿತ್‌ ಶರ್ಮ, ಪ್ರೀಮಿಯಮ್‌ ಬ್ಯಾಟರ್‌ ವಿರಾಟ್‌ ಕೊಹ್ಲಿ ಅವರಿಗೆ ದುಲೀಪ್‌ ಟ್ರೋಫಿ ಕ್ರಿಕೆಟ್‌ ಪಂದ್ಯಾವಳಿಯಿಂದ ವಿನಾಯಿತಿ ನೀಡಲಾಗಿದೆ. ಹಾಗೆಯೇ ಜಸ್‌ಪ್ರೀತ್‌ ಬುಮ್ರಾ, ಆರ್‌. ಅಶ್ವಿ‌ನ್‌ ಕೂಡ ಈ ದೇಶಿ ಕ್ರಿಕೆಟ್‌ ಪಂದ್ಯಾವಳಿಯಲ್ಲಿ ಆಡುವುದಿಲ್ಲ.

Advertisement

ಟೀಮ್‌ ಇಂಡಿಯಾದ ಪ್ರಮುಖ ಆಟಗಾರರಾದ ಶುಭಮನ್‌ ಗಿಲ್‌, ಯಶಸ್ವಿ ಜೈಸ್ವಾಲ್‌, ಕೆ.ಎಲ್‌. ರಾಹುಲ್‌, ಸೂರ್ಯಕುಮಾರ್‌ ಯಾದವ್‌, ರಿಷಭ್‌ ಪಂತ್‌, ರವೀಂದ್ರ ಜಡೇಜ, ಅಕ್ಷರ್‌ ಪಟೇಲ್‌, ಕುಲದೀಪ್‌ ಯಾದವ್‌, ಮೊಹಮ್ಮದ್‌ ಸಿರಾಜ್‌ ಮೊದಲಾದವರೆಲ್ಲ ಇಲ್ಲಿ ಆಡಲಿದ್ದಾರೆ. ಕಳೆದ ಕೆಲವು ಸಮಯದಿಂದ ನಿರ್ಲಕ್ಷಿಸಲ್ಪಟ್ಟಿದ್ದ ಇಶಾನ್‌ ಕಿಶನ್‌ ಅವರನ್ನೂ ಆಯ್ಕೆಗೆ ಪರಿಗಣಿಸಲಾಗಿದೆ.

4 ತಂಡಗಳ ನಾಯಕರು
ಸೆ. 5ರಂದು ಬೆಂಗಳೂರಿನಲ್ಲಿ ಆರಂಭವಾಗಲಿರುವ ದುಲೀಪ್‌ ಟ್ರೋಫಿ ಕ್ರಿಕೆಟ್‌ ಪಂದ್ಯಾವಳಿಗೆ ಬುಧವಾರ 4 ತಂಡಗಳನ್ನು ಅಂತಿಮಗೊಳಿಸಲಾಯಿತು. “ಎ’ ತಂಡಕ್ಕೆ ಶುಭಮನ್‌ ಗಿಲ್‌, “ಬಿ’ ತಂಡಕ್ಕೆ ಅಭಿಮನ್ಯು ಈಶ್ವರನ್‌, “ಸಿ’ ತಂಡಕ್ಕೆ ಋತುರಾಜ್‌ ಗಾಯಕ್ವಾಡ್‌ ಮತ್ತು “ಡಿ’ ತಂಡಕ್ಕೆ ಶ್ರೇಯಸ್‌ ಅಯ್ಯರ್‌ ನಾಯಕರಾಗಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next