Advertisement

ಷರತ್ತುಬದ್ಧ ಬೇಲ್ ಮಂಜೂರು;ದುನಿಯಾ ವಿಜಿಗೆ ಜಡ್ಜ್ ಹೇಳಿದ ಕಿವಿಮಾತೇನು?

03:53 PM Oct 01, 2018 | Sharanya Alva |

ಬೆಂಗಳೂರು: ಜಿಮ್ ತರಬೇತುದಾರ ಮಾರುತಿ ಗೌಡ ಎಂಬಾತನನ್ನು ಅಪಹರಿಸಿ ಹಲ್ಲೆ ನಡೆಸಿದ ಆರೋಪ ಪ್ರಕರಣದಲ್ಲಿ ಕೊನೆಗೂ ನಟ ದುನಿಯಾ ವಿಜಯ್ ಸೇರಿ ನಾಲ್ವರಿಗೆ ಬೆಂಗಳೂರಿನ ಸೆಷನ್ಸ್ ಕೋರ್ಟ್ ಸೋಮವಾರ ಷರತ್ತುಬದ್ಧ ಜಾಮೀನು ಮಂಜೂರು ಮಾಡಿ ಆದೇಶ ನೀಡಿದೆ.

Advertisement

ಒಂದು ಲಕ್ಷ ರೂಪಾಯಿ ಬಾಂಡ್, ಇಬ್ಬರ ಶ್ಯೂರಿಟಿ, ತನಿಖೆಗೆ ಸಹಕರಿಸಬೇಕು, ಸಾಕ್ಷಿಗಳಿಗೆ ಬೆದರಿಕೆ ಒಡ್ಡಬಾರದು, ಸಾಕ್ಷ್ಯ ನಾಶಮಾಡಬಾರದು ಎಂಬ ಷರತ್ತು ವಿಧಿಸಿ ನ್ಯಾಯಾಧೀಶರಾದ ಟಿಪಿ ರಾಮಲಿಂಗೇಗೌಡರು ಜಾಮೀನು ಮಂಜೂರು ಮಾಡಿ ತೀರ್ಪು ನೀಡಿದರು.

ಮಾಧ್ಯಮಗಳಿವೆ ಎಚ್ಚರಿಕೆಯಿಂದ ವರ್ತಿಸಲಿ. ಹೀರೋ ಬೇರೆಯವರಿಗೆ ರೋಲ್ ಮಾಡೆಲ್ ಆಗಿರಬೇಕು. ನಟ ವಿಜಯ್ ಹೀಗೆಲ್ಲಾ ಮಾಡುವುದು ಸರಿಯಲ್ಲ. ಸಲೆಬ್ರೆಟಿಗಳು ಹೇಗೆಂದರೆ ಹಾಗೆ ವರ್ತಿಸುವುದಲ್ಲ. ಜಾಮೀನು ನೀಡಿದ್ದೇನೆ, ಮುಂದೆ ಹೀಗೆ ವರ್ತಿಸಬಾರದು ಎಂದು ದುನಿಯಾ ವಿಜಯ್ ಪರ ವಕೀಲರಿಗೆ ನ್ಯಾಯಾಧೀಶರು ಮೌಖಿಕವಾಗಿ ಕಿವಿಮಾತು ಹೇಳಿದ ಪ್ರಸಂಗ ನಡೆಯಿತು.

ಹಲ್ಲೆ ಮತ್ತು ಕಿಡ್ನಾಪ್ ಪ್ರಕರಣದ ಸಂಬಂಧ ಜಾಮೀನು ಕೋರಿ ವಿಜಯ್ ಸೇರಿದಂತೆ ನಾಲ್ವರು ಆರೋಪಿಗಳು ಸಲ್ಲಿಸಿದ್ದ ಅರ್ಜಿಗಳನ್ನು 8ನೇ ಎಸಿಎಂಎಂ ನ್ಯಾಯಾಲಯ ವಜಾಗೊಳಿಸಿದ ಹಿನ್ನೆಲೆಯಲ್ಲಿ ಸೆಷನ್ಸ್ ಕೋರ್ಟ್ ಮೊರೆ ಹೋಗಿದ್ದರು.

ಸೆ.27ರಂದು ಜಾಮೀನು ಅರ್ಜಿ ವಿಚಾರಣೆ ನಡೆಸಿದ್ದ ಸೆಷನ್ಸ್ ಕೋರ್ಟ್ ವಿಚಾರಣೆ ಮುಂದೂಡಿತ್ತು. ಶನಿವಾರ ವಾದ, ಪ್ರತಿವಾದ ಆಲಿಸಿದ ಬಳಿಕ ಸೆಷನ್ಸ್ ಕೋರ್ಟ್ ನ್ಯಾಯಾಧೀಶರು ಜಾಮೀನು ತೀರ್ಪನ್ನು ಅ.1ಕ್ಕೆ ಕಾಯ್ದಿರಿಸಿದ್ದರು.

Advertisement

ಇಂದೇ ಜೈಲಿನಿಂದ ಬಿಡುಗಡೆಗೆ ಹರಸಾಹಸ?

ಜೈಲಿನಲ್ಲಿ ಜೈಲು ನಿಯಮದ ಪ್ರಕಾರ ಟಿವಿ ವೀಕ್ಷಿಸುತ್ತಿದ್ದ ದುನಿಯಾ ವಿಜಿ ಜಾಮೀನು ಮಂಜೂರು ಆದೇಶದ ಸುದ್ದಿ ಹೊರಬೀಳುತ್ತಿದ್ದಂತೆಯೇ ಮುಖದಲ್ಲಿ ಮಂದಹಾಸ ಮೂಡಿತ್ತು. ವಿಜಿ ಪರ ವಕೀಲರು ಸೆಷನ್ಸ್ ಕೋರ್ಟ್ ಜಾಮೀನು ಆದೇಶದ ಪ್ರತಿಗಾಗಿ ಕಾಯುತ್ತಿದ್ದು, ಸಂಜೆ 6.30ರೊಳಗೆ ಜೈಲಿನಲ್ಲಿ ಬಿಡುಗಡೆ ಪ್ರಕ್ರಿಯೆ ಮುಗಿಯಬೇಕಾಗಿದೆ. ಇಲ್ಲದಿದ್ದಲ್ಲಿ ಮಂಗಳವಾರ ಸರ್ಕಾರಿ ರಜೆ. ಹೀಗಾಗಿ ವಿಜಿ ಬಿಡುಗಡೆಗಾಗಿ ಬುಧವಾರದವರೆಗೆ ಕಾಯಬೇಕಾಗುತ್ತದೆ.

Advertisement

Udayavani is now on Telegram. Click here to join our channel and stay updated with the latest news.

Next