Advertisement

ಪ್ರಚಾರದ ವೇಳೆ ಮಾಜಿ ಡಿಸಿಎಂ ಡಾ.ಜಿ. ಪರಮೇಶ್ವರ್ ಮೇಲೆ ಕಲ್ಲು ತೂರಾಟ

07:07 PM Apr 28, 2023 | Team Udayavani |

ಕೊರಟಗೆರೆ: ಕೊರಟಗೆರೆಯಲ್ಲಿ ಶುಕ್ರವಾರ ಪ್ರಚಾರದಲ್ಲಿ ತೊಡಗಿದ್ದ ವೇಳೆ ಮಾಜಿ ಡಿಸಿಎಂ ಡಾ.ಜಿ. ಪರಮೇಶ್ವರ್ ಅವರ ಮೇಲೆ ಕಲ್ಲು ತೂರಾಟ ನಡೆದಿದೆ. ಕೊರಟಗೆರೆ ತಾಲೂಕಿನ ಬೈರನಹಳ್ಳಿ ಕ್ರಾಸ್ ಬಳಿ ಘಟನೆ ನಡೆದಿದೆ.  ಕಲ್ಲೇಟಿನಿಂದಾಗಿ ಪರಮೇಶ್ವರ್‌ ಅವರ ತಲೆಗೆ ಗಾಯವಾಗಿದ್ದು ಸಮೀಪದ ಅಕ್ಕಿರಾಂಪುರ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಚಿಕಿತ್ಸೆ ನೀಡಲಾಗಿದೆ. ಹೆಚ್ಚಿನ ಚಿಕಿತ್ಸೆಗಾಗಿ ತುಕೂರಿಗೆ ಕರೆದೊಯ್ಯಲಾಗಿದೆ.

Advertisement

ಪ್ರಚಾರದ ಸಮಯದಲ್ಲಿ ಕಾರ್ಯಕರ್ತರು ಡಾ.ಜಿ. ಪರಮೇಶ್ವರ್ ಅವರನ್ನು ಎತ್ತಿಕೊಂಡು ಹೂ ಮಳೆ ಸುರಿಸಿದ್ದಾರೆ, ಈ ವೇಳೆ ಅವುಗಳ ನಡುವೆ ತೂರಿಬಂದ ಕಲ್ಲೊಂದು  ಪರಮೇಶ್ವರ್ ಅವರ ತಲೆಗೆ ಬಡಿದು ರಕ್ತಸ್ರಾವವಾಗಿದೆ.

ಈ ಹಿಂದೆ ನಾಮಪತ್ರ ಸಲ್ಲಿಕೆ ವೇಳೆಯೂ ಪರಮೇಶ್ವರ್‌ ಮೇಲೆ ಕಲ್ಲು ತೂರಾಟ ನಡೆದಿತ್ತು. ಇದೀಗ ಎರಡನೇ ಬಾರಿ ಕಲ್ಲು ತೂರಾಟ ನಡೆದಿದೆ.

Advertisement

Udayavani is now on Telegram. Click here to join our channel and stay updated with the latest news.

Next