Advertisement

ದತ್ತಜಯಂತಿ : ಸಿ.ಟಿ.ರವಿ ಸೇರಿ ಮಾಲಾಧಾರಿಗಳಿಂದ ಪಡಿ ಸಂಗ್ರಹ

10:59 AM Dec 18, 2021 | Team Udayavani |

ಚಿಕ್ಕಮಗಳೂರು : ದತ್ತಪೀಠದಲ್ಲಿ ದತ್ತಜಯಂತಿ ಆಚರಣೆ ಹಿನ್ನೆಲೆಯಲ್ಲಿ ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಮತ್ತು ನೂರಾರು ಮಾಲಾಧಾರಿಗಳು ಶನಿವಾರ ಭಿಕ್ಷಾಟನೆ ಮೂಲಕ ಪಡಿ ಸಂಗ್ರಹಿಸಿದರು.

Advertisement

ನಗರದ ನಾರಯಣಪುರ, ರಾಘವೇಂದ್ರ ಮಠದ ರಸ್ತೆಯಲ್ಲಿ ಭಿಕ್ಷಾಟನೆ ಮಾಡಿದ ಮಾಲಾಧಾರಿಗಳಿಗೆ ಸ್ಥಳಿಯರು ಬೆಲ್ಲ, ಅಕ್ಕಿ, ಎಲೆ, ಅಡಿಕೆ, ಕೊಬ್ಬರಿ, ಬಾಳೆಹಣ್ಣು ನೀಡಿದರು, ಎಲ್ಲವನ್ನೂ ನಾಳೆ ಭಾನುವಾರ ಇರುಮುಡಿ ರೂಪದಲ್ಲಿ ದತ್ತಾತ್ರೇಯ ಸ್ವಾಮಿಗೆ ಅರ್ಪಿಸಲಿದ್ದಾರೆ.

ಇಂದು ಸಂಜೆ ನಗರದಲ್ಲಿ ಬೃಹತ್ ಶೋಭಯಾತ್ರೆ ನಡೆಯಲಿದ್ದು, ನಾಳೆ ದತ್ತಾತ್ರೇಯ ಪೀಠಕ್ಕೆ ಆಗಮಿಸುವಂತೆ ಮನವಿ ಮಾಡಲಾಗಿದೆ.

ಅರಾಜಕತೆ, ಸಂಘರ್ಷ ನಡೆಸುವ ಸಂಚು

ಬೆಳಗಾವಿಯಲ್ಲಿ ಎಂ.ಇ.ಎಸ್ ಕಾರ್ಯಕರ್ತರ ಪುಂಡಾಟ ವಿಚಾರಕ್ಕೆ ಮಾಧ್ಯಮಗಳೊಂದಿಗೆ ಮಾತನಾಡಿದ ಸಿ.ಟಿ.ರವಿ, ಕೆಲವರು ಅರಾಜಕತೆ, ಸಂಘರ್ಷ ನಡೆಸುವ ಸಂಚು ರೂಪಿಸಿದ್ದಾರೆ. ಕೊಲ್ಲಾಪುರದಲ್ಲಿ ಕನ್ನಡ ಭಾವುಟ ಸುಟ್ಟರು, ಅಲ್ಲಿ ಯಾವ ಪಕ್ಷ ಅಧಿಕಾರದಲ್ಲಿದೆ. ಅಲ್ಲಿಯ ಸರ್ಕಾರ ಕಾಂಗ್ರೆಸ್ ಸರ್ಕಾರದ ಪಾಲುದಾರರದ್ದು,ಇಲ್ಲಿ ಶಿವಾಜಿ ಮಹಾರಾಜರ ಪ್ರತಿಮೆಗೆ ಮಸಿಬಳಿಯುವ ಕೆಲಸ ಮಾಡಿದರು.

Advertisement

ಇವರ ಉದ್ದೇಶ ಸಂಘರ್ಷ ಆಗಲಿ, ಕರ್ನಾಟಕ ಮಹಾರಾಷ್ಟ್ರ ಸಂಘರ್ಷ ಆಗಲಿ ಅನ್ನುವ ಸಂಚು. ಅರಾಜಕತೆವಾದಿಗಳು ಸೃಷ್ಟಿ ಮಾಡಿರುವ ಸಾಧ್ಯತೆ ಇದೆ. ಮಹಾರಾಷ್ಟ್ರದಲ್ಲಿ ಲಕ್ಷಾಂತರ ಕನ್ನಡಿಗರಿದ್ದಾರೆ, ಕರ್ನಾಟಕದಲ್ಲಿ ಲಕ್ಷಾಂತರ ಸಂಖ್ಯೆ ಮರಾಠಿಗರಿದ್ದಾರೆ. ಕುಮ್ಮಕ್ಕಿಗೆ ಬಲಿಯಾಗದೆ ಶಾಂತಿ, ಸೌಹಾರ್ದತೆ ಕಾಪಾಡುವಂತೆ ಮನವಿ ಮಾಡಿದರು.

ನಮ್ಮೆಲ್ಲರ ಭಾವನೆ ರಾಷ್ಟ್ರೀಯತೆ ಜೊತೆ ಹಾಸುಹೊಕ್ಕಾಗಿದೆ, ರಾಷ್ಟ್ರೀಯ ಹಿತಶಕ್ತಿಗೆ ಧಕ್ಕೆ ತರಲು ಕೆಲವರು ಷಡ್ಯಂತ್ರ ನಡೆಸುತ್ತಾರೆ. ಆ ಷಡ್ಯಂತ್ರಕ್ಕೆ ಅವಕಾಶ ನೀಡಬಾರದು ಎಂದು ಮನವಿ ಮಾಡಿದರು.

Advertisement

Udayavani is now on Telegram. Click here to join our channel and stay updated with the latest news.

Next