Advertisement

ಡಿವಿ ಹಗಲುಗನಸು: ಸಿದ್ದು

12:52 AM Nov 11, 2019 | Sriram |

ಮಂಗಳೂರು: ವಿಧಾನ ಸಭಾ ಕ್ಷೇತ್ರಗಳಿಗೆ ನಡೆಯುವ ಚುನಾವಣೆಯಲ್ಲಿ ಬಿಜೆಪಿ ಎಲ್ಲ ಕ್ಷೇತ್ರಗಳಲ್ಲೂ ಗೆಲುವು ಸಾಧಿಸಲಿದೆ ಎಂಬುದಾಗಿ ಕೇಂದ್ರ ಸಚಿವ ಸದಾನಂದ ಗೌಡ ಹಗಲು ಕನಸು ಕಾಣುತ್ತಿದ್ದಾರೆ ಎಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.

Advertisement

ರವಿವಾರ ನಗರಕ್ಕೆ ಆಗಮಿಸಿದ ಸಂದರ್ಭ ಪತ್ರಕರ್ತರೊಂದಿಗೆ ಮಾತ ನಾಡಿದ ಅವರು, 15 ವಿಧಾನಸಭಾ ಕ್ಷೇತ್ರಗಳಿಗೆ ನಡೆಯುತ್ತಿರುವ ಚುನಾವಣೆಯಲ್ಲಿ 12 ಕ್ಷೇತ್ರಗಳಲ್ಲಿ ಕಾಂಗ್ರೆಸ್‌ ಗೆಲುವು ಖಚಿತ ಎಂದರು. ಉಪಚುನಾವಣೆಯಲ್ಲಿ ಗೆಲುವು ಸಾಧಿಸುತ್ತೇವೆ ಎನ್ನುತ್ತಿರುವ ಬಿಜೆಪಿ ಮುಖಂಡರು ಭ್ರಮೆಯಲ್ಲಿದ್ದಾರೆ ಎಂದರು.

ನಗರಪಾಲಿಕೆ ಚುನಾವಣೆಯಲ್ಲೂ ಕಾಂಗ್ರೆಸ್‌ ಜಯಭೇರಿ ಸಾಧಿಸಲಿದ್ದು, ಕಾಂಗ್ರೆಸ್‌ ಮೇಯರ್‌ ಸ್ಥಾನವನ್ನು ಪಡೆದುಕೊಳ್ಳಲಿದೆ ಎಂದರು.

ಅನರ್ಹ ಶಾಸಕರ ತೀರ್ಪಿನ ಕುರಿತಂತೆ ಕೇಳಿದ ಪ್ರಶ್ನೆಗೆ ಉತ್ತರಿಸಲು ಅವರು ನಿರಾಕರಿಸಿದರು.

Advertisement

Udayavani is now on Telegram. Click here to join our channel and stay updated with the latest news.

Next