Advertisement

ಮತಾಂತರ ವಿರುದ್ಧ ಬೀದಿಗಿಳಿದು ಹೋರಾಟ: ಡಿವಿಎಸ್‌

01:23 PM Sep 26, 2021 | Team Udayavani |

ದೇವನಹಳ್ಳಿ: ರಾಜ್ಯದಲ್ಲಿ ಮತಾಂತರದ ವಿರುದ್ಧ ಹೋರಾಟ ಮಾಡಲಾಗುವುದು. ಮತಾಂತರ ಮಾಡುವುದನ್ನು ಕೂಡಲೇ ನಿಲ್ಲಿಸಬೇಕು ಎಂದು ಮಾಜಿ ಕೇಂದ್ರ ಸಚಿವ ಡಿವಿ ಸದಾನಂದ ಗೌಡ ತಿಳಿಸಿದರು.

Advertisement

ಪಟ್ಟಣದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮತಾಂತರ ತಡೆಗೆ ಎಲ್ಲಾ ರೀತಿಯಲ್ಲಿಯೂ ಹೋರಾಟಗಳನ್ನು ರೂಪಿಸಲಾಗುವುದು. ಯಾರೂ ಸಹ ಮತಾಂತರ ಆಗಬಾರದು. ಮತಾಂತರದ ವಿರುದ್ಧ ಧ್ವನಿ ಎತ್ತಲಾಗುವುದು. ಬೀದಿಗಿಳಿದು ಹೋರಾಟ ಮಾಡಲು ನಾವು ಸಿದ್ಧ ಎಂದರು.

ದೇಶದಲ್ಲಿ ಪೆಟ್ರೋಲ್‌, ಡೀಸೆಲ್‌ ಹಾಗೂ ಅಗತ್ಯ ವಸ್ತುಗಳ ಬೆಲೆ ಏರಿಕೆಗೆ ಕಾಂಗ್ರೆಸ್‌ನವರೇ ಮೂಲ ಕಾರಣ. ಕಾಂಗ್ರೆಸ್‌ ನವರು ಬಾಂಡ್‌ಗಳನ್ನು ಇಟ್ಟು ಕೊಂಡು ಸಾಲಗಳನ್ನು ಮಾಡಿದ್ದಾರೆ. ಈ ಕಾರಣ ಗೊತ್ತಿದ್ದರೂ ಸಹ ಕಾಂಗ್ರೆಸ್‌ ನವರು ಸೈಕಲ್‌, ಎತ್ತಿನ ಗಾಡಿ, ಟಾಂಗ ಸೇರಿದಂತೆ ವಿವಿಧ ರೀತಿಯಲ್ಲಿ ಹೋರಾಟ ಮಾಡಿ ಜನರ ದಿಕ್ಕನ್ನು ತಪ್ಪಿಸುವ ಕೆಲಸ ಮಾಡುತ್ತಿದ್ದಾರೆ. ಕಾಂಗ್ರೆಸ್‌ ಈಗಾಗಲೇ ಮುಳುಗಿದ ಹಡಗು ಆಗಿದೆ. ರೈತರ ಪ್ರತಿಭಟನೆ ಪರಿಹಾರವಲ್ಲ. ಪ್ರಧಾನಿ ನರೇಂದ್ರ ಮೋದಿ ಸಾಕಷ್ಟು ಸುತ್ತಿನ ಮಾತುಕತೆಯನ್ನು ಮಾಡಿದ್ದಾರೆ. ರೈತರ ಸಮಸ್ಯೆಯನ್ನು ಬಗೆಹರಿಸುತ್ತಾರೆ. ಬಂದ್‌ ಮಾಡುವುದು ಪರಿಹಾರವಲ್ಲ ಎಂದರು.

Advertisement

Udayavani is now on Telegram. Click here to join our channel and stay updated with the latest news.

Next