Advertisement

ಉತ್ತರದಲ್ಲಿ ಡಿವಿಎಸ್‌ ಉಮೇದುವಾರಿಕೆ

12:21 PM Mar 26, 2019 | Lakshmi GovindaRaju |

ಬೆಂಗಳೂರು: ಬೆಂಗಳೂರು ಉತ್ತರ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿಯಾಗಿ ಹಾಲಿ ಸಂಸದ ಡಿ.ವಿ.ಸದಾನಂದಗೌಡ ಅವರು ಸೋಮವಾರ ಮಧ್ಯಾಹ್ನ ಚುನಾವಣಾಧಿಕಾರಿಗೆ ನಾಮಪತ್ರ ಸಲ್ಲಿಸಿದರು.

Advertisement

ಕುಟುಂಬ ಸದಸ್ಯರು, ಪಕ್ಷದ ಮುಖಂಡರು, ಕಾರ್ಯಕರ್ತರೊಂದಿಗೆ ಸಂಜಯನಗರದ ರಾಧಾಕೃಷ್ಣ ದೇವಸ್ಥಾನದಲ್ಲಿ ವಿಶೇಷ ಪೂಜೆ ಸಲ್ಲಿಸಿದ ಸದಾನಂದಗೌಡ ಅವರು, ನಂತರ ಮೈಸೂರು ಬ್ಯಾಂಕ್‌ವೃತ್ತದ ಆಂಜನೇಯ ಸ್ವಾಮಿ ದೇವಾಲಯಲ್ಲಿ ಪೂಜೆ ಸಲ್ಲಿಸಿ, ಬಳಿಕ ಜಿಲ್ಲಾಧಿಕಾರಿಗಳ ಕಚೇರಿಗೆ ತೆರಳಿ ನಾಮಪತ್ರ ಸಲ್ಲಿಸಿದರು.

ಈ ಸಂದರ್ಭದಲ್ಲಿ ಮಾತನಾಡಿದ ಅವರು, ಭಾರತ ಅದ್ಭುತ ದೇಶವಾಗಿ ಪರಿವರ್ತನೆಯಾಗುತ್ತಿದೆ. ಪ್ರಧಾನಿ ನರೇಂದ್ರ ಮೋದಿ ಅವರ ನೇತೃತ್ವದಲ್ಲಿ ಕಳೆದ ಐದು ವರ್ಷದಲ್ಲಿ ಭಾರತ ವಿಶ್ವದ ಐದು ಪ್ರಮುಖ ರಾಷ್ಟ್ರಗಳ ಪಟ್ಟಿಯಲ್ಲಿ ಸ್ಥಾನ ಪಡೆದಿದೆ. ಮತ್ತೂಮ್ಮೆ ಮೋದಿ ಅವರ ನೇತೃತ್ವದಲ್ಲಿ ಕೇಂದ್ರದಲ್ಲಿ ಆಡಳಿತ ಚುಕ್ಕಾಣಿ ಹಿಡಿದರೆ ಭಾರತವು ವಿಶ್ವದ ನಂ.1 ರಾಷ್ಟ್ರವಾಗಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.

ಮಾಜಿ ಸಚಿವ ರಾಮಚಂದ್ರೇಗೌಡ, ಮಾಜಿ ಶಾಸಕ ಮುನಿರಾಜು, ಮಾಜಿ ಸಚಿವರಾದ ಸುರೇಶ್‌ ಕುಮಾರ್‌, ಗೋವಿಂದ ಕಾರಜೋಳ, ಶಾಸಕ ಡಾ.ಸಿ.ಎನ್‌.ಅಶ್ವತ್ಥನಾರಾಯಣ, ವಿಧಾನ ಪರಿಷತ್‌ ಸದಸ್ಯರಾದ ಡಾ.ವೈ.ಎ.ನಾರಾಯಣಸ್ವಾಮಿ, ಕೆ.ಪಿ.ನಂಜುಂಡಿ, ಮುಖಂಡರಾದ ಜಗ್ಗೇಶ್‌, ಶೃತಿ, ಕೆ.ಶಿವರಾಂ, ನೆ.ಲ.ನರೇಂದ್ರ ಬಾಬು, ಎಸ್‌.ಹರೀಶ್‌, ಎ.ರವಿ, ಚಿ.ನಾ.ರಾಮು, ಮಹೇಶ್ವರಿ ಮತ್ತಿತರರು ಹಾಜರಿದ್ದರು.

ರಾಷ್ಟ್ರದಲ್ಲಿ ನರೇಂದ್ರ ಮೋದಿಯವರ ಕೈ ಬಲಪಡಿಸಲು ಸದಾನಂದಗೌಡರನ್ನು ಗೆಲ್ಲಿಸಿ. ಮೋದಿಯವರು ಅಧಿಕಾರಕ್ಕೆ ಬಂದ ನಂತರ ದೇಶದಲ್ಲಿ ಪರಿವರ್ತನೆಯಾಗಿರುವುದು ಪ್ರತಿ ನಾಗರಿಕರಿಗೂ ಗೊತ್ತಾಗಿದೆ.
-ಜಗ್ಗೇಶ್‌, ನಟ

Advertisement

ಕ್ಷೇತ್ರದಲ್ಲಿ ಕಳೆದ ಬಾರಿಗಿಂತ ಉತ್ತಮ ವಾತಾವರಣವಿದೆ. ಪ್ರಧಾನಿ ಮೋದಿ ಅವರ ಶ್ರೇಷ್ಠ ಆಡಳಿತ, ಕ್ಷೇತ್ರದ ಅಭಿವೃದ್ಧಿಗೆ ನಾನು ಶ್ರಮಿಸಿರುವುದನ್ನು ಜನ ಗುರುತಿಸುತ್ತಾರೆ.
-ಡಿ.ವಿ.ಸದಾನಂದಗೌಡ, ಕೇಂದ್ರ ಸಚಿವ

Advertisement

Udayavani is now on Telegram. Click here to join our channel and stay updated with the latest news.

Next