Advertisement

ಕ್ಷೇತ್ರದ ಜನತೆಗೆ ಡಿವಿಎಸ್‌ ಕೃತಜ್ಞತೆ

01:22 AM May 25, 2019 | Team Udayavani |

ಬೆಂಗಳೂರು: ಚುನಾವಣೆ ಫ‌ಲಿತಾಂಶ ಹೊರ ಬಿದ್ದು ನರೇಂದ್ರ ಮೋದಿ ನೇತೃತ್ವದ ಸರ್ಕಾರ ಮತ್ತೆ ಅಧಿಕಾರ ಹಿಡಿದಿದೆ. ಈ ಸಂದರ್ಭದಲ್ಲಿ ದೇಶ, ರಾಜ್ಯ ಹಾಗೂ ನನ್ನ ಕ್ಷೇತ್ರದ ಮತದಾರರಿಗೆ ಹೃದಯ ಪೂರ್ವಕ ಕೃತಜ್ಞತೆಗಳನ್ನು ಸಲ್ಲಿಸುತ್ತಿದ್ದೇನೆ ಎಂದು ಸಚಿವ ಡಿ.ವಿ.ಸದಾನಂದ ಗೌಡ ತಿಳಿಸಿದ್ದಾರೆ.

Advertisement

ಈ ಕುರಿತು ಹೇಳಿಕೆ ನೀಡಿರುವ ಅವರು, ದೇಶ ಪ್ರಥಮ ಎಂಬ ಘೋಷವಾಕ್ಯಕ್ಕೆ ಇಂದು ಜನಾದೇಶ ಸಿಕ್ಕಿದೆ. ನರೇಂದ್ರ ಮೋದಿ ಅವರ 5 ವರ್ಷಗಳ ಆಡಳಿತ ವೈಖರಿ, ದೇಶದ ಅಭಿವೃದ್ಧಿ, ಜನರ ಸಮಸ್ಯೆಗಳ ಪರಿಹಾರ ಮತ್ತು ರಾಷ್ಟ್ರದ ಘನತೆ, ಗೌರವ ಎತ್ತಿ ಹಿಡುವಂತಹ ಕೆಲಸಗಳನ್ನು ಜನ ಒಪ್ಪಿಕೊಂಡಿದ್ದಾರೆ. ಈ ವಿಶೇಷವಾದ ಆಶೀರ್ವಾದ ನಮ್ಮ ಜವಾಬ್ದಾರಿ ಮತ್ತಷ್ಟು ಹೆಚ್ಚಿಸಿದೆ. ಜನರ ನಿರೀಕ್ಷೆಗಳಿಗೆ ಅನುಗುಣವಾಗಿ ನಡೆದುಕೊಳ್ಳುವ ಕೆಲಸ ಮಾಡುತ್ತೇನೆ ಎಂದು ಪತ್ರದಲ್ಲಿ ತಿಳಿಸಿದ್ದಾರೆ.

ನಿಮಗೆ ಎಂದೂ ವಿಶ್ವಾಸ ದ್ರೋಹ, ನಿಮ್ಮ ಮನಸ್ಸಿನ ಭಾವನೆಗೆ ಚ್ಯುತಿ ಬರುವಂತಹ ರೀತಿಯಲ್ಲಿ ನಾವು ನಡೆದುಕೊಳ್ಳುವುದಿಲ್ಲ. 5 ವರ್ಷಗಳಲ್ಲಿ ನಿಮ್ಮ ಸೇವೆಯನ್ನು ಮಾಡಿದ್ದಕ್ಕೆ, ಮತ್ತಷ್ಟು ಕೆಲಸವನ್ನು ನನ್ನಿಂದ ನಿರೀಕ್ಷೆ ಮಾಡುವ ನಿಟ್ಟಿನಲ್ಲಿ ಜನಾದೇಶ ನೀಡಿದ್ದೀರಿ. ಕ್ಷೇತ್ರದ ನೂರಾರು ಸಮಸ್ಯೆಗೆ ಸ್ಪಂದಿಸಿದ್ದೇನೆ. ಇನ್ನೂ ಸೇವೆ ಮಾಡುವುದು ಸಾಕಷ್ಟಿದೆ ಎಂದು ನಂಬಿದ್ದೇನೆ.

ಕಾರ್ಯಕರ್ತರ ಗೆಲುವು: ಏಳು ಜನ ಶಾಸಕರು ನನ್ನ ವಿರೋಧಿ ಬಣದಲ್ಲಿದ್ದರು. ಒಬ್ಬ ಶಾಸಕರು ಜತೆಗೆ ಇದ್ದರು. ಇಡೀ ಕ್ಷೇತ್ರದಲ್ಲಿ ಬಿಜೆಪಿ ಗೆಲುವು ಕಷ್ಟ ಎಂಬ ವಾತವರಣ ಸೃಷ್ಟಿಯಾಗಿತ್ತು. ಆದರೆ ಪಕ್ಷದ ಕಾರ್ಯಕರ್ತರು ಈ ಸವಾಲನ್ನು ಅತ್ಯಂತ ಯಶಸ್ವಿಯಾಗಿ ಸ್ವೀಕರಿಸಿ ಗೆಲವು ತಂದುಕೊಟ್ಟಿದ್ದಾರೆ. ಕಾರ್ಯಕರ್ತರಿಗೆ ತಲೆತಗ್ಗಿಸಿ ವಂದಿಸುತ್ತೇನೆ. ಅವರ ಶ್ರಮಕ್ಕೆ ಗೌರವ ತರುವಂತ ಹಾಗೂ ದಿನದ 24 ಗಂಟೆ ಅವರ ಅಹವಾಲುಗಳನ್ನು ಆಲಿಸುವ ಕೆಲಸ ಮಾಡುತ್ತೇನೆ ಎಂದು ತಿಳಿಸಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next