Advertisement

ಡಿವಿಎಸ್‌ ಮತ್ತೊಮ್ಮೆ ಸಚಿವ ,ಅಂಗಡಿ ,ಜೋಷಿಗೆ ಕುದುರಿದ ಲಕ್‌ !

05:06 PM Jun 01, 2019 | Vishnu Das |

ಬೆಂಗಳೂರು: ಪ್ರಧಾನಿ ನರೇಂದ್ರ ಮೋದಿ ಅವರ ಸಂಪುಟದಲ್ಲಿ ರಾಜ್ಯದ 25 ಮಂದಿ ಬಿಜೆಪಿ ಸಂಸದರ ಪೈಕಿ ಮಾಜಿ ಮುಖ್ಯಮಂತ್ರಿ , ಹಾಲಿ ಕೇಂದ್ರ ಸಚಿವ ಡಿ.ವಿ.ಸದಾನಂದ ಗೌಡ ಅವರಿಗೆ ಮತ್ತೆ ಸಚಿವ ಸ್ಥಾನ ದೊರಕಿದೆ. ಬೆಳಗಾವಿ ಸಂಸದ ಸುರೇಶ್‌ ಅಂಗಡಿ ಅವರಿಗೆ ಈ ಬಾರಿ ಅದೃಷ್ಟ ಕುದುರಿದ್ದು ಸಚಿವರಾಗುಲ ಭಾಗ್ಯ ದೊರಕಿದೆ. ಹುಬ್ಬಳ್ಳಿ -ಧಾರಾವಾಡ ಕ್ಷೇತ್ರದ ಸಂಸದ ಪ್ರಹ್ಲಾದ್‌ ಜೋಷಿ ಅವರಿಗೂ ಸಚಿವ ಸ್ಥಾನ ಒಲಿದಿದೆ.

Advertisement

ಬಿಜೆಪಿ ರಾಷ್ಟ್ರಾಧ್ಯಕ್ಷ ಅಮಿತ್‌ ಶಾ ಅವರು ಸಂಸದರಿಗೆ ಖುದ್ದು ಕರೆ ಮಾಡಿ ಸಚಿವ ಸ್ಥಾನನೀಡುವ ಬಗ್ಗೆ ಮಾಹಿತಿ ನೀಡಿ ಸಂಜೆ 5 ಗಂಟೆಗೆ ಪ್ರಧಾನಿ ಮೋದಿ ಅವರ ನಿವಾಸಕ್ಕೆ ಆಗಮಿಸಲು ಸೂಚನೆ ನೀಡಿದ್ದಾರೆ.

ಒಕ್ಕಲಿಗ ಕೋಟಾದಡಿ ಬೆಂಗಳೂರು ಉತ್ತರ ಕ್ಷೇತ್ರದ ಸಂಸದ ಡಿ.ವಿ.ಸದಾನಂದ ಗೌಡ ಅವರಿಗೆ ಸಚಿವ ಸ್ಥಾನ ಒಲಿದಿದೆ. ಬೆಳಗಾವಿಯಿಂದ 4 ನೇ ಬಾರಿ ಸಂಸದರಾಗಿರುವ ಸುರೇಶ್‌ ಅಂಗಡಿ ಅವರಿಗೆ ಹಿರಿತನದ ಆಧಾರ ಮತ್ತು ಲಿಂಗಾಯತ ಕೋಟಾದಡಿಯಲ್ಲಿ ಸಚಿವ ಸ್ಥಾನ ನೀಡಲಾಗಿದೆ.

4 ನೇ ಬಾರಿ ಸಂಸದರಾಗಿ ಆಯ್ಕೆಯಾಗಿರುವ 56 ರ ಹರೆಯದ ಪ್ರಹ್ಲಾದ್‌ ಜೋಷಿ ಅವರಿಗೆ ಸಚಿವ ಸ್ಥಾನ ದೊರಕಿದೆ.

ಕರ್ನಾಟಕದಿಂದ ರಾಜ್ಯ ಸಭೆಗೆ ಆಯ್ಕೆಯಾಗಿರುವ ರಕ್ಷಣಾ ಸಚಿವೆ ನಿರ್ಮಲಾ ಸೀತಾರಾಮನ್‌ ಅವರಿಗೂ ಸಚಿವಸ್ಥಾನ ದೊರಕಿದೆ.

Advertisement

 

Advertisement

Udayavani is now on Telegram. Click here to join our channel and stay updated with the latest news.

Next