Advertisement

“ರೈತ ಸ್ಪಂದನೆಗಿಂತ ಕುರ್ಚಿಯೇ ಸಿಎಂಗೆ ಮುಖ್ಯ’

10:00 AM Nov 23, 2018 | Team Udayavani |

ಮಂಗಳೂರು: ಕುಮಾರಸ್ವಾಮಿ ಅವರಿಗೆ ಕುರ್ಚಿ ಉಳಿಸಿಕೊಳ್ಳುವುದೇ ಮುಖ್ಯವಾಗಿದೆ. ಹೀಗಾಗಿ ಕಬ್ಬು ಬೆಳೆಗಾರರ ಸಹಿತ ರೈತರ ಸಮಸ್ಯೆಗಳ ಬಗ್ಗೆ ಸ್ಪಂದಿಸಲು ಅವರಿಗೆ ಸಮಯವಿಲ್ಲ ಎಂದು ಕೇಂದ್ರ ಸಚಿವ ಡಿ.ವಿ. ಸದಾನಂದ ಗೌಡ ಟೀಕಿಸಿದ್ದಾರೆ.

Advertisement

ಮಂಗಳೂರಿನಲ್ಲಿ ಗುರುವಾರ ಸುದ್ದಿಗಾರರ ಜತೆಗೆ ಮಾತನಾಡಿದ ಅವರು, ಸಮ್ಮಿಶ್ರ ಸರಕಾರದ ಕುರ್ಚಿ ಅಲುಗಾಡುತ್ತಿರುವಾಗ ಅದನ್ನು ಭದ್ರಪಡಿಸುವುದೇ ಅವರಿಗೆ ಮುಖ್ಯವಾಗಿದೆ. ರೈತ ಹಿತಾಸಕ್ತಿ, ಜನರ ಅಭಿವೃದ್ಧಿ, ಆರ್ಥಿಕ ಸ್ಥಿತಿಗತಿ ಬಗ್ಗೆ ಚಿಂತನೆ ಸಿಎಂಗೆ ಬೇಕಾಗಿಲ್ಲ ಎಂದು ಆರೋಪಿಸಿದರು.

ಕೇಂದ್ರ ಸರಕಾರ ಈ ಹಿಂದೆಯೇ ಸಕ್ಕರೆ ಕಾರ್ಖಾನೆ ಮಾಲಕರಿಗೆ ಹಣ ಬಿಡುಗಡೆ ಮಾಡುವ ಯೋಜನೆ ರೂಪಿಸಿತ್ತು. ಅದನ್ನು ಬಡ್ಡಿರಹಿತವಾಗಿ ಕಬ್ಬು ಬೆಳೆಗಾರರಿಗೆ ಕೊಡುವ ಯೋಜನೆಯಿತ್ತು. ಆದರೆ ಈ ವಿಚಾರದಲ್ಲಿ ಮುತುವರ್ಜಿ ವಹಿಸಬೇಕಿದ್ದ ರಾಜ್ಯ ಸರಕಾರ ಮಾತ್ರ ಮೌನ ವಹಿಸಿದೆ. ಈಗ ಕೇಂದ್ರ ಸರಕಾರ 13 ಬೆಳೆಗಳಿಗೆ ಉತ್ಪಾದನಾ ವೆಚ್ಚಕ್ಕಿಂತ ಹೆಚ್ಚು ಬೆಲೆ ನಿಗದಿ ಮಾಡಿದೆ. ಅದಕ್ಕೆ ಅಗತ್ಯ ಇರುವ ಹಣ ಕೂಡ ಮೀಸಲಿಡಲಾಗಿದೆ. ಈ ಸಂಬಂಧ ಎಲ್ಲ ರಾಜ್ಯಗಳು ಖರೀದಿ ಕೇಂದ್ರ ತೆರೆದಿವೆ. ಆದರೆ  ಕರ್ನಾಟಕ ಮಾತ್ರ ಈ ಬಗ್ಗೆ ಗಮನವೇ ಹರಿಸಿಲ್ಲ  ಎಂದವರು ದೂರಿದರು.

ಕಾರ್ಖಾನೆ ಮಾಲಕರಾಗಿರುವ ಸಚಿವರು ಮುಖ್ಯಮಂತ್ರಿ ಕರೆದ ಸಭೆಗೆ ಬರಲಿಲ್ಲ. ಅಂತಹ ಸಚಿವರನ್ನು ಮಂತ್ರಿಮಂಡಲದಿಂದ ವಜಾ ಮಾಡಬೇಕು. ಪಕ್ಷದಿಂದ ಅವರನ್ನು ಉಚ್ಚಾಟಿಸಬೇಕು. ಇಲ್ಲವಾದರೆ ಅವರ ಮನವೊಲಿಸಿ ಕಬ್ಬು ಬೆಳೆಗಾರ ರಿಗೆ ಬಾಕಿ ಹಣ ಕೊಡಿಸಬೇಕು. ಆದರೆ ಸರಕಾರ ಮಾತ್ರ ಏನನ್ನೂ ಮಾಡದೆ ದಯನೀಯ ಸ್ಥಿತಿಯಲ್ಲಿದೆ ಎಂದರು. 

ಕೇರಳದ ಮುಖ್ಯಮಂತ್ರಿ ಶಬರಿಮಲೆ ವಿಷಯದಲ್ಲಿ ತೆಗೆದುಕೊಂಡಿರುವ ನಿಲುವಿಗೆ ಅವರ ಪಕ್ಷದವರೇ ವಿರೋಧ ವ್ಯಕ್ತಪಡಿಸಿ¨ರೆ. ಅಲ್ಲಿ ಸ್ವತ್ಛತೆ ಮತ್ತು ಸೌಕರ್ಯಕ್ಕೆ ಆದ್ಯತೆ ಕೊಡುವುದು ಕೇರಳ ಸರಕಾರದ ಕರ್ತವ್ಯವಾಗಿದೆ. ಜಮ್ಮು-ಕಾಶ್ಮೀರದಲ್ಲಿ ರಾಜಕೀಯ ಅಸ್ಥಿರತೆ ಉಂಟಾಗಿತ್ತು. ಯಾವುದೇ ಪಕ್ಷಕ್ಕೆ ಬಹುಮತವಿರಲಿಲ್ಲ. ಹಾಗಾಗಿ ರಾಷ್ಟ್ರಪತಿ ಆಳ್ವಿಕೆ ಜಾರಿಯಾಗಿದೆ ಎಂದವರು ಹೇಳಿದರು.

Advertisement
Advertisement

Udayavani is now on Telegram. Click here to join our channel and stay updated with the latest news.

Next