Advertisement

ದ್ವಾದಶ ಜ್ಯೋತಿರ್ಲಿಂಗಗಳಿಗೆ ವಿಶೇಷ ಪೂಜೆ ಸಲ್ಲಿಸಿದ ಮುಖ್ಯಮಂತ್ರಿ ಬೊಮ್ಮಾಯಿ

07:50 PM Feb 27, 2022 | Team Udayavani |

ಶಿಗ್ಗಾವಿ: ಮಹಾಶಿವರಾತ್ರಿ ಪ್ರಯುಕ್ತ ಪ್ರಜಾಪಿತ ಬ್ರಹ್ಮಕುಮಾರಿ ಈಶ್ವರಿ ವಿಶ್ವವಿದ್ಯಾಲಯದ ವತಿಯಿಂದ ಏರ್ಪಡಿಸಿದ್ದ ಭಾರತದ ಪ್ರಖ್ಯಾತ ತೀರ್ಥಕ್ಷೇತ್ರಗಳ ದ್ವಾದಶ ಜ್ಯೋತಿರ್ಲಿಂಗಗಳ ಪುಣ್ಯದರ್ಶನ ಕಾರ್ಯಕ್ರಮವನ್ನು ರವಿವಾರ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಉದ್ಘಾಟಿಸಿದರು.

Advertisement

ಪಟ್ಟಣದ ನಳಂದ ಶಾಲೆ ಬಳಿಯ ಕಾಂಪ್ಲೆಕ್ಸ್‌ವೊಂದಲ್ಲಿ ಆಯೋಜಿಸಿದ್ದ ದ್ವಾದಶ ಜ್ಯೋತಿರ್ಲಿಂಗಗಳ ಪುಣ್ಯ ದರ್ಶನ ಕಾರ್ಯಕ್ರಮದಲ್ಲಿ ಸಿಎಂ ಬಸವರಾಜ ಬೊಮ್ಮಾಯಿ ಅವರು ದ್ವಾದಶ ಜ್ಯೋತಿರ್ಲಿಂಗಗಳ ವಿಶೇಷ ಪೂಜೆ ಸಲ್ಲಿಸಿದರು.

ಈ ವೇಳೆ ಸಂಗನಬಸವ ಸ್ವಾಮೀಜಿ, ಪುರಸಭೆ ಅಧ್ಯಕ್ಷೆ ರೂಪಾ ಬನ್ನಿಕೊಪ್ಪ, ಉಪಾಧ್ಯಕ್ಷೆ ಶೇಖವ್ವ ವಡ್ಡರ, ಈಶ್ವರಿ ವಿಶ್ವವಿದ್ಯಾಲಯದ ಸಂಚಾಲಕಿ ಬ್ರಹ್ಮಕುಮಾರಿ ಅಕ್ಕನವರು ಇತರರು ಪಾಲ್ಗೊಂಡಿದ್ದರು.

ಇದನ್ನೂ ಓದಿ : ಹರ್ಷ ಕೊಲೆ ಪ್ರಕರಣದ ಷಡ್ಯಂತ್ರ ಬಯಲಾಗಬೇಕು: ಹಕ್ರೆ ಆಗ್ರಹ

Advertisement

Udayavani is now on Telegram. Click here to join our channel and stay updated with the latest news.

Next