Advertisement

ಕೌಟುಂಬಿಕ ಕಲಹ; ಚಿಕ್ಕಪ್ಪನಿಂದಲೇ ಯುವಕನ ಹತ್ಯೆ

05:29 PM Feb 15, 2021 | Team Udayavani |

ಧಾರವಾಡ: ಕೌಟುಂಬಿಕ ಕಲಹದ ಹಿನ್ನೆಲೆಯಲ್ಲಿ ವ್ಯಕ್ತಿಯೊಬ್ಬ ಅಣ್ಣನ ಮಗನನ್ನು ಮಾರಕಾಸ್ತ್ರದಿಂದ ಹೊಡೆದು ಕೊಲೆ ಮಾಡಿದ ಘಟನೆ ಮುರುಘಾ ಮಠದ ಬಳಿ ರವಿವಾರ ನಡೆದಿದೆ.

Advertisement

ಆಕಾಶ್‌ ಕೋಟೂರು (26) ಕೊಲೆಯಾದವ. ಈತನ ಚಿಕ್ಕಪ್ಪ ಪ್ರಕಾಶ ಕೋಟೂರು ಕೊಲೆ ಮಾಡಿರುವ ಬಗ್ಗೆ ಪ್ರಾಥಮಿಕ ಮಾಹಿತಿ ಲಭ್ಯವಾಗಿದೆ.

ಕೌಟುಂಬಿಕ ಕಲಹದಿಂದ ಮನೆಯಲ್ಲಿ ಆಗಾಗ ಕಿರಿಕಿರಿ ಮಾಡುತ್ತಿದ್ದ ಆಕಾಶನು ರವಿವಾರವೂ ಮನೆಯಲ್ಲಿ ಜಗಳ ಮಾಡಿದ್ದಾನೆ. ಈ ಜಗಳ ವಿಕೋಪಕ್ಕೆ ತಿರುಗಿದ ಕಾರಣ ಚಿಕ್ಕಪ್ಪ ಪ್ರಕಾಶನು ಮನೆಯಲ್ಲಿದ್ದ ಮಾರಕಾಸ್ತ್ರದಿಂದ ಹೊಡೆದಿದ್ದಾನೆ. ಇದರಿಂದ ತೀವ್ರ ಗಾಯಗೊಂಡ ಆಕಾಶ ಮನೆಯಲ್ಲಿಯೇ ಮೃತಪಟ್ಟಿದ್ದಾನೆ.

ಘಟನೆ ಮಾಹಿತಿ ಪಡೆದ ಡಿಸಿಪಿ ಕೆ. ರಾಮರಾಜನ್‌ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದ್ದಾರೆ. ಸದ್ಯ ಪ್ರಕಾಶ ಕೋಟೂರ ಪರಾರಿಯಾಗಿದ್ದು, ಶೋಧ ಕಾರ್ಯ ನಡೆದಿದೆ. ಕೊಲೆ ಹಿಂದೆ ಬೇರೆ ಏನಾದರೂ ಕಾರಣವಿದೆಯೇ ಎಂಬುದು ತನಿಖೆಯಿಂದ ತಿಳಿದುಬರಬೇಕಿದೆ ಎಂದು ಡಿಸಿಪಿ ಕೆ. ರಾಮರಾಜನ್‌ ತಿಳಿಸಿದ್ದಾರೆ. ಉಪನಗರ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Advertisement

Udayavani is now on Telegram. Click here to join our channel and stay updated with the latest news.

Next