Advertisement

ಕರ್ತವ್ಯದಲ್ಲಿದ್ದಾಗ ಹೃದಯಾಘಾತವಾಗಿ ಮೃತಪಟ್ಟರೆ ಅದು ಅಪಘಾತವೆಂದೇ ಪರಿಗಣನೆ: ಹೈಕೋರ್ಟ್‌

12:13 AM Dec 30, 2020 | Team Udayavani |

ಬೆಂಗಳೂರು: ಕರ್ತವ್ಯದಲ್ಲಿದ್ದ ಸಂದರ್ಭ ನೌಕರನಿಗೆ ಹೃದಯಾಘಾತ ಸಂಭವಿಸಿದ್ದನ್ನು “ಅಪಘಾತ’ ಎಂದು ಪರಿಗಣಿಸಲಾಗದು ಎಂಬ ಈಶಾನ್ಯ ರಸ್ತೆ ಸಾರಿಗೆ ಸಂಸ್ಥೆ (ಎನ್‌ಇಕೆಆರ್‌ಟಿಸಿ) ವಾದವನ್ನು ತಿರಸ್ಕರಿಸಿರುವ ಹೈಕೋರ್ಟ್‌, ಕರ್ತವ್ಯ ನಿರ್ವಹಣೆ ವೇಳೆ ನೌಕರ ಹೃದಯಾಘಾತದಿಂದ ಸಾವನ್ನಪ್ಪಿದರೆ, ಅದನ್ನು ಅಪಘಾತವೆಂದೇ ಪರಿಗಣಿಸಬೇಕು ಎಂದು ಮಹತ್ವದ ಆದೇಶ ನೀಡಿದೆ.

Advertisement

ಅಪಘಾತ ಎಂದರೆ ಊಹಿಸಲಾಗದ ಹಾಗೂ ಅನಿರೀಕ್ಷಿತ ಘಟನೆಯಾಗಿರುತ್ತದೆ. ಅಂತಹ ಸಂದರ್ಭ ಕರ್ತವ್ಯ ಮೇಲಿದ್ದಾಗ ನೌಕರನಿಗೆ ಹೃದಯಾಘಾತ ಉಂಟಾದರೆ, ಅದು ಆತನ ಹೃದಯಕ್ಕೆ ಉಂಟಾದ ಗಾಯವಾಗಿರುತ್ತದೆ. ಹೀಗಾಗಿ, ಹೃದಯಾಘಾತವನ್ನು ಅಪಘಾತವೆಂದೇ ಪರಿಗಣಿಸಬೇಕಾಗುತ್ತದೆ ಎಂದು ನ್ಯಾ| ಸುನೀಲ್‌ ದತ್‌ ಯಾದವ್‌ ಮತ್ತು ನ್ಯಾ| ಪಿ.ಎನ್‌. ದೇಸಾಯಿ ಅವರಿದ್ದ ಹೈಕೋರ್ಟ್‌ ಕಲಬುರಗಿ ವಿಭಾಗೀಯ ನ್ಯಾಯಪೀಠ ಆದೇಶಿಸಿದೆ.

Advertisement

Udayavani is now on Telegram. Click here to join our channel and stay updated with the latest news.

Next