Advertisement

ಸೆ.19ರಿಂದ ಮೆಗಾ ಇ-ಲೋಕ ಅದಾಲತ್‌

11:26 AM Sep 09, 2020 | Suhan S |

ರಾಮನಗರ: ನ್ಯಾಯಾಲಯಗಳಲ್ಲಿ ಇತ್ಯರ್ಥವಾಗದ ಪ್ರಕರಣಗಳನ್ನು ಇದೇ ಸೆ.19ರಂದು ನಡೆಯುವ ಮೆಗಾ ಇ-ಲೋಕ ಅದಾಲತ್‌ನಲ್ಲಿ ಇತ್ಯರ್ಥಗೊಳಿಸಲು ಅವಕಾಶವಿದ್ದು, ಕಕ್ಷಿದಾರರು ಅವಕಾಶ ಸದುಪಯೋಗ ಪಡೆಸಿಕೊಳ್ಳಬೇಕು ಎಂದು ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ಅಧ್ಯಕ್ಷರು ಹಾಗೂ ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರಾದ ಬಿ.ಜಿ.ಉಮಾ ತಿಳಿಸಿದರು.

Advertisement

ನಗರದ ಜಿಲ್ಲಾ ಮತ್ತು ಸತ್ರ ನ್ಯಾಯಾಲಯದಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಅವರು ಮಾತನಾಡಿದರು. ಕಕ್ಷಿದಾರರು ನ್ಯಾಯಾಲಯಕ್ಕೆ ಖುದ್ದು ಹಾಜರಾಗುವ ಅವಶ್ಯಕತೆ ಇಲ್ಲ , ಮನೆಯಲ್ಲೇ ಕುಳಿತು ಅಥವಾ ತಮ್ಮ ವಕೀಲರ ಕಚೇರಿಯಲ್ಲಿ ಕುಳಿತು ರಾಜಿ ಸಂಧಾನದ ಮೂಲಕ ಪ್ರಕರಣ ಇತ್ಯರ್ಥ ಪಡಿಸಿಕೊಳ್ಳಬಹುದು ಎಂದು ತಿಳಿಸಿದರು.

ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರ ಮತ್ತು ಕರ್ನಾಟಕ ಹೈಕೋರ್ಟ್‌ ಲೀಗಲ್‌ ಸರ್ವೀಸಸ್‌ ಕಮಿಟಿ ನಿರ್ದೇಶನದ ಮೇರೆಗೆ ಸೆ.19ರಂದು ಜಿಲ್ಲೆಯಲ್ಲೂ ಇ-ಲೋಕ ಅದಾಲತ್‌ ಅನ್ನು ಆಯೋಜಿಸಲಾಗಿದೆ. ಕೋವಿಡ್‌ ಹಿನ್ನೆಲೆಯಲ್ಲಿ ಕಳೆದ 6 ತಿಂಗಳು ನ್ಯಾಯಾಲಯದಲ್ಲಿ ಲೋಕ್‌ ಅದಾಲತ್‌ ಮೂಲಕ ಯಾವುದೇ ರೀತಿಯ ಪ್ರಕರಣ ಇತ್ಯರ್ಥಪಡಿಸಲು ಸಾಧ್ಯವಾಗಿಲ್ಲ. ಹೀಗಾಗಿ ಕಕ್ಷಿದಾರರು ನ್ಯಾಯಾಲಯಕ್ಕೆ ಬರದೇ ವಿಡಿಯೋ ಕಾನ್ಫರೆನ್ಸ್‌ ಮೂಲಕ ಪ್ರಕರಣಗಳನ್ನು ಇತ್ಯರ್ಥಪಡಿಸಿಕೊಳ್ಳ ಬಹುದು ಎಂದು ತಿಳಿಸಿದರು.

ಯಾವ ಪ್ರಕರಣ ರಾಜಿ ಸಂಧಾನ ಸಾಧ್ಯ?: ದೇಶದಲ್ಲಿಯೇ ಪ್ರಥಮ ಬಾರಿಗೆ ಇ-ಲೋಕಅದಾಲತ್‌ ಮೂಲಕ ಪ್ರಕರಣಗಳ ಇತ್ಯರ್ಥಕ್ಕೆಚಾಲನೆ ನೀಡಲಾಗುತ್ತಿದೆ. ವಿಮಾ ಕಂಪನಿಗಳಿಂದ ಬರಬೇಕಾದ ಪರಿಹಾರ, ಅಪಘಾತ, ಕಂತು ಕಟ್ಟದಿರುವುದು, ಲೇವಾ ದೇವಿ ವ್ಯವಹಾರ, ಬಾಡಿಗೆ ತಕರಾರು, ಆಸ್ತಿ ಸಂಬಂಧಿತ ಪ್ರಕರಣ ಸೇರಿದಂತೆ ಇನ್ನಿತರ ಸಣ್ಣಪುಟ್ಟ ಪ್ರಕರಣಗಳನ್ನು ರಾಜಿ ಇಲ್ಲವೆ ಸಂಧಾನದ ಮೂಲಕ ಬಗೆಹರಿಸಲು ಒತ್ತು ನೀಡಲಾಗುತ್ತಿದೆ. ಹೀಗಾಗಿ ಕಕ್ಷಿದಾರರು ಇದರ ಪ್ರಯೋಜನ ಪಡೆದುಕೊಳ್ಳುವಂತೆ ತಿಳಿಸಿದರು.

4624 ಪ್ರಕರಣ ಇತ್ಯರ್ಥ: ಹಿರಿಯ ಸಿವಿಲ್‌ ನ್ಯಾಯಧೀಶರು ಹಾಗೂ ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ಸದಸ್ಯ ಕಾರ್ಯ ದರ್ಶಿ ಬಿ.ವೆಂಕಟಪ್ಪ, ಜಿಲ್ಲೆಯಲ್ಲಿ ಒಟ್ಟು 39,680 ಪ್ರಕರಣಗಳಿದ್ದು, ಇವುಗಳ ಪೈಕಿ 4,624 ಪ್ರಕರಣಗಳನ್ನು ಮೆಗಾ ಲೋಕ ಅದಾಲತ್‌ ನಲ್ಲಿ ರಾಜಿ ಪ್ರಕರಣಗಳನ್ನಾಗಿ ಪರಿಗಣಿಸಿ ಇತ್ಯರ್ಥ ಪಡಿಸುವ ಉದ್ದೇಶವಿದೆ ಎಂದು ತಿಳಿಸಿದರು.

Advertisement

ಕೋರ್ಟಿಗೆ ಅಲೆಯುವ ಪ್ರಮೇಯವಿಲ್ಲ  :  ಇನ್ಮುಂದೆ ಸಣ್ಣಪುಟ್ಟ ಪ್ರಕರಣಗಳಿಗೆ ಕೋರ್ಟ್‌ಗೆ ಅಲೆಯುವ ಅಗತ್ಯವಿಲ್ಲ.ಸಣ್ಣ ಪುಟ್ಟ ಪ್ರಕರಣಗಳಿದ್ದಲ್ಲಿ ಇನ್ನು ಮುಂದೇ ಕೋರ್ಟ್‌ಗಳಿಗೆ ಅಲೆದಾಡುವ ಅಗತ್ಯಲ್ಲ. ವಕೀಲರ ಕಚೇರಿ ಇಲ್ಲವೇ ಮನೆ ಯಲ್ಲಿಯೇ ಇದ್ದು, ಮೊಬೈಲ್‌ ಆ್ಯಪ್‌ ಇಲ್ಲವೇ ಆನ್‌ ಲೈನ್‌ ಮೂಲಕ ದಾಖ ಲಾತಿ ಅಪ್ಲೋಡ್‌ ಮಾಡಿದರೆ ಅವರಿಗೆನ್ಯಾಯ ದೊರಕಿಸುವ ಕೆಲಸ ಮಾಡಲಾಗುತ್ತಿದೆ. ಜಿಲ್ಲಾ ಮತ್ತು ತಾಲೂಕು ಗಳಲ್ಲಿ ಇ-ಅದಾಲತ್‌ ಆಯೋಜಿಸಲಾಗುತ್ತಿದೆ. ತಾಲೂಕವಾರು ಈ ಕಾರ್ಯಕ್ರಮ ಮಾಡಲಾಗುತ್ತಿದೆ. ಅಲ್ಲದೇ ವಕೀಲರು, ಬಾರ್‌ ಕೌನ್ಸಲಿಂಗ್‌ ಜತೆ ಸಮಾಲೋಚನೆ ಮಾಡಲಾಗಿದೆ ಎಂದು ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರಾದ ಬಿ.ಜಿ. ಉಮಾ ತಿಳಿಸಿದರು.

Advertisement

Udayavani is now on Telegram. Click here to join our channel and stay updated with the latest news.

Next