Advertisement

E.D. ಅಧಿಕಾರಿಗಳ ಮೇಲೆ ಹಲ್ಲೆಯ ತನಿಖೆಗೆ “ಹೈ” ತಡೆ

12:22 AM Feb 03, 2024 | Team Udayavani |

ಬೆಂಗಳೂರು: ವಿಚಾರಣೆ ವೇಳೆ ಹಲ್ಲೆ ನಡೆಸಿದ್ದಾರೆಂಬ ದೂರಿಗೆ ಸಂಬಂಧಿಸಿದಂತೆ ಜಾರಿ ನಿರ್ದೇಶನಾಲಯ (ಇ.ಡಿ.) ಅಧಿಕಾರಿಗಳ ವಿರುದ್ಧ ಪೊಲೀಸರು ನಡೆಸುತ್ತಿದ್ದ ತನಿಖೆಗೆ ಹೈಕೋರ್ಟ್‌ ಶುಕ್ರವಾರ ತಡೆ ನೀಡಿದೆ.

Advertisement

ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ತಮ್ಮ ವಿಚಾರಣೆ ವೇಳೆ ಇಡಿ ಅಧಿಕಾರಿಗಳಾದ ಮನೋಜ್‌ ಮಿತ್ತಲ್‌ ಮತ್ತು ಅಜಯ್‌ ಕುಮಾರ್‌ ವೈದ್ಯ ತಮ್ಮ ಮೆಲೆ ಹಲ್ಲೆ ನಡೆಸಿ
ದ್ದಾರೆಂದು ಕೊಮುಲ್‌ ನಿರ್ದೇಶಕ ವೈ.ಬಿ. ಅಶ್ವತ್ಥ್ ನಾರಾಯಣ ವಿಲ್ಸನ್‌ ಗಾರ್ಡನ್‌ ಠಾಣೆಯಲ್ಲಿ ದೂರು ದಾಖಲಿಸಿದ್ದರು. ಈ ದೂರಿನ ಹಿನ್ನೆಲೆಯಲ್ಲಿ ಎಫ್ಐಆರ್‌ ದಾಖಲಿಸಿಕೊಂಡ ಪೊಲೀಸರು ಇ.ಡಿ. ಅಧಿಕಾರಿಗಳ ವಿರುದ್ಧ ತನಿಖೆ ಆರಂಭಿಸಿದ್ದರು. ಪ್ರಕರಣದ ಎಫ್ಐಆರ್‌ ರದ್ದು ಕೋರಿ ಇಡಿ ಉಪ ನಿರ್ದೇಶಕ ಮನೋಜ್‌ ಮಿತ್ತಲ್‌ ಮತ್ತು ಸಹಾಯಕ ನಿರ್ದೇಶಕ ಅಜಯ್‌ ಕುಮಾರ್‌ ವೈದ್ಯ ಅವರು ಸಲ್ಲಿಸಿದ್ದ ಅರ್ಜಿಯನ್ನು ಆಲಿಸಿದ ನ್ಯಾ| ಕೆ. ನಟರಾಜನ್‌ ಅವರಿದ್ದ ಏಕಸದಸ್ಯಪೀಠ ಈ ಆದೇಶ ನೀಡಿದೆ.

Advertisement

Udayavani is now on Telegram. Click here to join our channel and stay updated with the latest news.

Next