Advertisement

ವಿಜಯಪುರ ಜಿಲ್ಲೆಯಲ್ಲಿ ಮತ್ತೆ ಭೂಕಂಪನ; ಕೇಂದ್ರ ಬಿಂದು ಮಹಾರಾಷ್ಟ್ರದಲ್ಲಿ

10:08 PM Aug 20, 2022 | Team Udayavani |

ವಿಜಯಪುರ: ವಿಜಯಪುರ ಜಿಲ್ಲೆಯಲ್ಲಿ ಶನಿವಾರ ರಾತ್ರಿ ಮತ್ತೆ ಭೂಕಂಪನವಾಗಿದೆ.

Advertisement

ಕರ್ನಾಟಕ ಹಾಗೂ ಮಹಾರಾಷ್ಟ್ರದ ಗಡಿ ಜಿಲ್ಲೆ ವಿಜಯಪುರದಲ್ಲಿ ಶನಿವಾರ ರಾತ್ರಿ 8.16 ರ ಸುಮಾರಿಗೆ ಭೂಮಿ ಕಂಪಿಸಿದೆ. ಆಲಮಟ್ಟಿಯ ರಿಕ್ಟರ್ ಮಾಪಕದಲ್ಲಿ 3.5 ರಷ್ಟು ತೀವ್ರತೆ ದಾಖಲಾಗಿದೆ.

ವಿಜಯಪುರ ನಗರದ ಬಹುತೇಕ ಬಡಾವಣೆಗಳಲ್ಲಿ ಭೂಕಂಪನದ ಅನುಭವವಾಗಿದೆ. ಭೂಕಂಪನದ ಕೇಂದ್ರ ಬಿಂದು ಮಹಾರಾಷ್ಟ್ರದ ಲ್ಲಿ ಕಂಡು ಬಂದಿದ್ದು, ಅಂದಾಜು 5 ಕಿಮೀ ಆಳದಲ್ಲಿ ತರಂಗಗಳು ಸೃಷ್ಟಿಯಾಗಿವೆ ಎಂಬ ಮಾಹಿತಿ ಲಭ್ಯವಾಗಿದೆ.

ಈ ಬಗ್ಗೆ ಜಿಲ್ಲಾಡಳಿತ ಹೆಚ್ಚಿನ ಮಾಹಿತಿ ಸಂಗ್ರಹಿಸುತ್ತಿರುವುದಾಗಿ ತಿಳಿಸಿದೆ.

Advertisement

Udayavani is now on Telegram. Click here to join our channel and stay updated with the latest news.

Next