Advertisement

ಕೊಡಗಿನಲ್ಲಿ ಭೂಕಂಪದ ಸುದ್ದಿ ಶುದ್ಧ ಸುಳ್ಳು:ಸಿಎಂ,ಡಿಸಿ ಸ್ಪಷ್ಟನೆ

04:33 PM Aug 18, 2018 | |

ಮಡಿಕೇರಿ: ಭೀಕರ ಜಲಪ್ರಳಯಕ್ಕೆ ತುತ್ತಾಗಿರುವ ಕೊಡಗಿನ ಜನತೆಗೆ ಜಿಲ್ಲೆಯಲ್ಲಿ ಸದ್ಯ ಭೂಕಂಪ ಸಂಭವಿಸುತ್ತದೆ ಎನ್ನುವ ಸುಳ್ಳು ಸುದ್ದಿ ಗಾಯದ ಮೇಲೆ ಬರೆ ಎಳೆದಂತಾಗಿದೆ. 

Advertisement

ಸಾಮಾಜಿಕ ತಾಣಗಳಲ್ಲಿ ಭೂಕಂಪನವಾಗುವ ಕುರಿತು ಸುಳ್ಳು ಸುದ್ದಿ ಹರಿದಾಡುತ್ತಿದ್ದು, ಈ ಸುದ್ದಿ  ಸಂಕಷ್ಟದಲ್ಲಿ ಸಿಲುಕಿರುವ ಕೊಡಗಿನ ಜನತೆಯ ಕಿವಿಗೆ ಬಿದ್ದು ಇನ್ನಷ್ಟು ಚಿಂತಾಕ್ರಾಂತರನ್ನಾಗಿಸಿದೆ. ಭಯದಲ್ಲೇ ಕಾಲ ಕಳೆಯುವಂತೆ ಮಾಡುತ್ತಿದೆ. ಕೊಡಗು ಜಿಲ್ಲಾಧಿಕಾರಿ ಶ್ರೀ ವಿದ್ಯಾ ಅವರು ಇದು ಸುಳ್ಳು ಸುದ್ದಿ ಎಂದು ಸ್ಪಷ್ಟಪಡಿಸಿದ್ದಾರೆ. 

ಮುಖ್ಯಮಂತ್ರಿ ಎಚ್‌.ಡಿ.ಕುಮಾರಸ್ವಾಮಿ ಅವರು ಟ್ವೀಟ್‌ ಮಾಡಿದ್ದು,ಕೊಡಗು ಜಿಲ್ಲೆಯಲ್ಲಿ ಭೂಕಂಪನವಾಗಲಿದೆ ಎಂಬ ಸುದ್ದಿ ಜಾಲತಾಣದಲ್ಲಿ ಹರಿದಾಡುತ್ತಿದ್ದು, ಈ ಬಗ್ಗೆ ರಾಜ್ಯ ನೈಸರ್ಗಿಕ ವಿಪತ್ತು ನಿರ್ವಹಣಾ ಕೇಂದ್ರ ಅಥವಾ ಭೂ ವಿಜ್ಞಾನ ಇಲಾಖೆ ಯಾವುದೇ ಮುನ್ಸೂಚನೆ ನೀಡಿಲ್ಲ. ಆದ್ದರಿಂದ ಇಂತಹ ಸುಳ್ಳು ಸುದ್ದಿಗಳಿಗೆ ಕಿವಿಗೊಡಬಾರದಾಗಿ ಕೊಡಗು ಜಿಲ್ಲೆ ಜಿಲ್ಲಾಧಿಕಾರಿ ವಿನಂತಿಸಿದ್ದಾರೆ. ಎಂದು ಬರೆದಿದ್ದಾರೆ. 

Advertisement

Udayavani is now on Telegram. Click here to join our channel and stay updated with the latest news.

Next