Advertisement

ಉತ್ತರ ಭಾರತದಲ್ಲಿ ಕಂಪಿಸಿದ ಭೂಮಿ:ರಿಕ್ಟರ್‌ ಮಾಪಕದಲ್ಲಿ 5.8 ತೀವ್ರತೆ 

10:13 AM Feb 07, 2017 | Team Udayavani |

ಹೊಸದಿಲ್ಲಿ: ಸೋಮವಾರ ರಾತ್ರಿ 10.30 ರ ವೇಳೆಗೆ ಉತ್ತರ ಭಾರತದಲ್ಲಿ ಭೂಕಂಪನ ಸಂಭವಿಸಿದ್ದು, ಉತ್ತಾರಖಂಡ,ಹಿಮಾಚಲ ಪ್ರದೇಶ, ಪಂಜಾಬ್‌, ಹರಿಯಾಣ ಮತ್ತು ರಾಷ್ಟ್ರರಾಜಧಾನಿ  ದೆಹಲಿ ಸುತ್ತಮುತ್ತಲೂ ಕಂಪನದ ಅನುಭವವಾಗಿದೆ ಎಂದು ವರದಿಯಾಗಿದೆ. ರಿಕ್ಟರ್‌ ಮಾಪಕದಲ್ಲಿ 5.8 ತೀವ್ರತೆ ದಾಖಲಾಗಿತ್ತು. 

Advertisement

ಉತ್ತರಾಖಂಡದ ರುದ್ರಪ್ರಯಾಗ ಜಿಲ್ಲೆಯ ಬೆರೋನ್‌ ಬಸ್ತಿ ಹಾಟ್‌ ಪ್ರದೇಶದಲ್ಲಿ ಭೂಕಂಪನದ ಕೇಂದ್ರ ಬಿಂದು ಇತ್ತು ಎಂದು ಹೇಳಲಾಗಿದೆ.  ರುದ್ರಪ್ರಯಾಗಕ್ಕೆ ಕೇಂದ್ರ ಸರ್ಕಾರ ಎನ್‌ಡಿಆರ್‌ಎಫ್ನ
ಎರಡು ತುಕಡಿ ಕಳುಹಿಸಿಕೊಟ್ಟಿದೆ. ಪ್ರಧಾನಿ ನರೇಂದ್ರ ಮೋದಿ ಭೂಕಂಪ ಬಗ್ಗೆ ಅಧಿಕಾರಿಗಳ ಜತೆ ಮಾತಾಡಿ ಮಾಹಿತಿ ಪಡೆದುಕೊಂಡಿದ್ದಾರೆ.

ಇದುವರೆಗೆ ಯಾವುದೇ ಸಾವು ನೋವು, ಆಸ್ತಿ ಹಾನಿಯ ಬಗ್ಗೆ ವರದಿಯಾಗಿಲ್ಲ. 

Advertisement

Udayavani is now on Telegram. Click here to join our channel and stay updated with the latest news.

Next