Advertisement

ಲಾಕ್ ಡೌನ್ ಹೇರುವುದು ಸುಲಭ ಆದರೆ ತೆರವುಗೊಳಿಸುವುದು ಕಷ್ಟ: ಮುಖ್ಯಮಂತ್ರಿ ಗೆಹ್ಲೋಟ್

08:17 AM Apr 26, 2020 | Nagendra Trasi |

ನವದೆಹಲಿ:ಕೋವಿಡ್ 19 ತಡೆಗಟ್ಟುವ ನಿಟ್ಟಿನಲ್ಲಿ ದೇಶಾದ್ಯಂತ ಲಾಕ್ ಡೌನ್ ಜಾರಿಗೊಳಿಸಿರುವ ಬಗ್ಗೆ ರಾಜಸ್ಥಾನ ಮುಖ್ಯಮಂತ್ರಿ ಅಶೋಕ್ ಗೆಹ್ಲೋಟ್ ಶನಿವಾರ ಅಭಿಪ್ರಾಯವ್ಯಕ್ತಪಡಿಸಿದ್ದು, ಲಾಕ್ ಡೌನ್ ಜಾರಿಗೊಳಿಸುವುದು ಸುಲಭ, ಆದರೆ ಅದನ್ನು ತೆರವುಗೊಳಿಸುವುದು ಕಷ್ಟ ಎಂದು ತಿಳಿಸಿದ್ದಾರೆ.

Advertisement

ಲಾಕ್ ಡೌನ್ ವಿಚಾರದಲ್ಲಿ ಸೋಮವಾರ ಪ್ರಧಾನಿ ನರೇಂದ್ರ ಮೋದಿ ಅವರು ಎಲ್ಲಾ ಮುಖ್ಯಮಂತ್ರಿಗಳ ಜತೆ ಚರ್ಚೆ ನಡೆಸಿದ ನಂತರವೇ ಪರಿಸ್ಥಿತಿಯ ಬಗ್ಗೆ ಒಂದು ಸ್ಪಷ್ಟ ನಿರ್ಧಾರಕ್ಕೆ ಬರಲು ಸಾಧ್ಯವಾಗುವ ನಿರೀಕ್ಷೆ ಇದೆ ಎಂದು ಆಜ್ ತಕ್ ನ ಇ-ಅಜೆಂಡಾ ಸೆಷನ್ ನಲ್ಲಿ ಮಾತನಾಡುತ್ತ ಈ ಹೇಳಿಕೆ ನೀಡಿದ್ದಾರೆ.

ಲಾಕ್ ಡೌನ್ ಹೇರುವುದು ತುಂಬಾ ಸುಲಭ, ಆದರೆ ಅದನ್ನು ತೆರವುಗೊಳಿಸುವುದು ಕಷ್ಟ. ಇದಕ್ಕೆ ಹಲವಾರು ಕಾರಣಗಳು ಇರುತ್ತದೆ. ರೈಲ್ವೆ ಸಂಚಾರ ರದ್ದುಗೊಳ್ಳುತ್ತದೆ. ವಿಮಾನ ಹಾರಾಟವೂ ನಿಲ್ಲುತ್ತದೆ. ಹೀಗೆ ಜನರು ಓಡಾಟ ನಡೆಸುವುದು ಹೇಗೆ? ಈ ಬಗ್ಗೆ ರಾಜ್ಯ ಮತ್ತು ಕೇಂದ್ರ ಸರ್ಕಾರ ಒಟ್ಟಿಗೆ ಸೇರಿ ಯೋಜನೆ ರೂಪಿಸಬೇಕಾಗುತ್ತದೆ ಎಂದು ಗೆಹ್ಲೋಟ್ ಹೇಳಿದರು.

ಮೇ 3ರ ನಂತರವೂ ದೇಶಾದ್ಯಂತ ಲಾಕ್ ಡೌನ್ ಮುಂದುವರಿಸಬೇಕೆ ಅಥವಾ ಬೇಡವೇ ಎಂಬ ಬಗ್ಗೆ ರಾಜ್ಯಗಳಿಗೆ ಕೆಲವು ಸ್ಪಷ್ಟತೆ ಸಿಗುವ ಸಾಧ್ಯತೆ ಇದೆ. ಸೋಮವಾರ ಪ್ರಧಾನಿ ಮೋದಿ ಅವರು ನಡೆಸುವ ವಿಡಿಯೋ ಕಾನ್ಫರೆನ್ಸ್ ನಲ್ಲಿ ಬಹುತೇಕ ಸ್ಪಷ್ಟವಾಗಲಿದೆ ಎಂದು ತಿಳಿಸಿದರು.

Advertisement

Udayavani is now on Telegram. Click here to join our channel and stay updated with the latest news.

Next