Advertisement

ಕೋವಿಡ್ 19 ಭೀತಿ: ರಾಜ್ಯಸಭಾ ಚುನಾವಣೆ ಮುಂದೂಡಿಕೆ, 37 ಸ್ಥಾನಕ್ಕೆ ಅವಿರೋಧ ಆಯ್ಕೆ

11:16 AM Mar 27, 2020 | Shripathi Bhat |

ನವದೆಹಲಿ: ಕೋವಿಡ್ 19 ಮಹಾಮಾರಿ ಭೀತಿಯ ಹಿನ್ನೆಲೆಯಲ್ಲಿ ಮಾರ್ಚ್ 26ರಂದು ನಿಗದಿಯಾಗಿದ್ದ ರಾಜ್ಯಸಭಾ ಚುನಾವಣೆಯನ್ನು ಕೇಂದ್ರ ಚುನಾವಣಾ ಆಯೋಗ ಮಂಗಳವಾರ ಅನಿರ್ದಿಷ್ಟಾವಧಿಗೆ ಮುಂದೂಡಿರುವುದಾಗಿ ಘೋಷಿಸಿದೆ.

Advertisement

ಫೆ.25ರಂದು ಒಟ್ಟು 55 ರಾಜ್ಯಸಭಾ ಸ್ಥಾನಗಳಿಗೆ ಮಾ.26ರಂದು ಚುನಾವಣೆ ನಡೆಸುವುದಾಗಿ ಘೋಷಿಸಿದ್ದು, ಅಂದು ಸಂಜೆಯೇ ಫಲಿತಾಂಶ ಪ್ರಕಟಿಸುವುದಾಗಿ ತಿಳಿಸಿತ್ತು.

ಮಾರ್ಚ್ 18ರಂದು ನಾಮಪತ್ರ ಹಿಂಪಡೆಯಲು ನಿಗದಿಪಡಿಸಿದ್ದ ಕೊನೆಯ ದಿನಾಂಕದ ನಂತರ ರಾಜ್ಯಸಭೆಯ 37 ಸ್ಥಾನಗಳಿಗೆ ಅವಿರೋಧ ಆಯ್ಕೆ ನಡೆದಿತ್ತು. ಆ ನಿಟ್ಟಿನಲ್ಲಿ ಕೇವಲ 18 ಸ್ಥಾನಗಳಿಗಷ್ಟೇ ಚುನಾವಣೆ ನಡೆಯಲು ಬಾಕಿ ಉಳಿದಂತಾಗಿದೆ ಎಂದು ವರದಿ ವಿವರಿಸಿದೆ.

ದೇಶದ 7 ರಾಜ್ಯಗಳಲ್ಲಿ ಒಟ್ಟು 18 ಸ್ಥಾನಗಳಿಗೆ ಚುನಾವಣೆ ನಡೆಯಬೇಕಾಗಿದೆ. ಗುಜರಾತ್ ನಲ್ಲಿ 04 ಸ್ಥಾನ, ಆಂಧ್ರಪ್ರದೇಶ 04 ಸ್ಥಾನ, ರಾಜಸ್ಥಾನ್ 03, ಮಧ್ಯಪ್ರದೇಶ 03, ಜಾರ್ಖಂಡ್ 02 ಹಾಗೂ ಮಣಿಪುರ 01, ಮೇಘಾಲಯ 01 ಸ್ಥಾನಗಳಿಗೆ ಚುನಾವಣೆ ನಡೆಯಬೇಕಾಗಿದೆ.

Advertisement

Udayavani is now on Telegram. Click here to join our channel and stay updated with the latest news.

Next