Advertisement

ಪ್ರಚಾರಕರ ಪಟ್ಟಿಯಿಂದ ಅನುರಾಗ್ ಠಾಕೂರ್ ಕೈಬಿಡಿ; ಬಿಜೆಪಿಗೆ ಚುನಾವಣಾ ಆಯೋಗ ಆದೇಶ

08:28 AM Jan 30, 2020 | keerthan |

ಹೊಸದಿಲ್ಲಿ: ದೆಹಲಿ ವಿಧಾನಸಭಾ ಚುನಾವಣೆಯ ಪ್ರಚಾರದ ಕಾವು ಪಡೆಯುತ್ತಿದೆ ರಾಜಕೀಯ ಪಕ್ಷಗಳು ಭರ್ಜರಿ ಸಮಾವೇಶಗಳನ್ನು ನಡೆಸುತ್ತಿವೆ. ಹೀಗಿರುವಾಗ ಬಿಜೆಪಿಯ ಸ್ಟಾರ್ ಪ್ರಚಾರಕರ ಪಟ್ಟಿಯಿಂದ ಅನುರಾಗ್ ಠಾಕೂರ್ ಮತ್ತು ಪರ್ವೇಶ್ ವರ್ಮಾರನ್ನು ಕೈಬಿಡುವಂತೆ ಚುನಾವಣಾ ಆಯೋಗ ಆದೇಶಿಸಿದೆ.

Advertisement

ಕೇಂದ್ರ ಸಚಿವ ಅನುರಾಗ್ ಠಾಕೂರ್ ಮತ್ತು ಪಶ್ಚಿಮ ದಿಲ್ಲಿಯ ಶಾಸಕ ಪರ್ವೇಶ್ ವರ್ಮಾ ಸಾರ್ವಜನಿಕವಾಗಿ ಅಸಭ್ಯ ಭಾಷೆ ಬಳಸಿದ್ದರು. ಈ ಕಾರಣಕ್ಕಾಗಿ ಚುನಾವಣಾ ಆಯೋಗ ಈ ಆದೇಶ ನೀಡಿದೆ.

ಪತ್ರಿಕಾ ಪ್ರಕಟನೆ ನೀಡಿರುವ ತಕ್ಷಣಕ್ಕೆ ಜಾರಿಗೆ ಬರುವಂತೆ ಆದೇಶ ನೀಡಿದೆ.

ಇದೇ ಸಮಯದಲ್ಲಿ ಕಾಂಗ್ರೆಸ್ ನಾಯಕರಾದ ಅಜಯ್ ಮಾಕೆನ್ ಮತ್ತು ಸುಭಾಶ್ ಚೋಪ್ರಾ ಅನುರಾಗ್ ಠಾಕೂರ್ ಮತ್ತು ಶಾಸಕ ಪರ್ವೇಶ್ ವರ್ಮಾ ವಿರುದ್ಧ ಚುನಾವಣಾ ಆಯೋಗಕ್ಕೆ ದೂರು ನೀಡಿದ್ದರು.

Advertisement

Udayavani is now on Telegram. Click here to join our channel and stay updated with the latest news.

Next