Advertisement

ಯಾವ ಶಿಕ್ಷೆ ಎದುರಿಸಲೂ ಸಿದ್ಧ : ಚು.ಆಯೋಗದ ಮುಖ್ಯಸ್ಥ ರಾಜೀವ್‌ ಕುಮಾರ್‌

10:43 PM May 08, 2021 | Team Udayavani |

ನವದೆಹಲಿ: ದೇಶದಲ್ಲಿ ಕೊರೊನಾ ತೀವ್ರಗೊಳ್ಳಲು ಚುನಾವಣಾ ಆಯೋಗವೇ ನೇರಕಾರಣ, ಅದರ ಅಧಿಕಾರಿಗಳ ವಿರುದ್ಧ ಕೊಲೆ ಆರೋಪವನ್ನು ಹೊರಿಸಬೇಕಾದೀತು…. ಹೀಗೆಂದು ಮದ್ರಾಸ್‌ ಉಚ್ಚ ನ್ಯಾಯಾಲಯ ಇತ್ತೀಚೆಗೆ ಕಟುವಾಗಿ ಹೇಳಿತ್ತು. ಈ ಬಗ್ಗೆ ಮದ್ರಾಸ್‌ ಉಚ್ಚ ನ್ಯಾಯಾಲಯ ಮತ್ತು ಸರ್ವೋಚ್ಚ ನ್ಯಾಯಾಲಯಕ್ಕೆ ಸಲ್ಲಿಸಲು ತೀರ್ಮಾನಿಸಲಾಗಿದ್ದ ಪ್ರಮಾಣಪತ್ರವೊಂದರಲ್ಲಿ; ಚುನಾವಣೆ ಆಯೋಗದ ಅಧ್ಯಕ್ಷ ರಾಜೀವ್‌ ಕುಮಾರ್‌ ಕಠಿಣ ಪ್ರತಿಕ್ರಿಯೆ ನೀಡಿದ್ದಾರೆ.

Advertisement

“ಬೇಕಾದರೆ ನಾನು ರಾಜೀನಾಮೆ ನೀಡುತ್ತೇನೆ ಅಥವಾ ಯಾವುದೇ ಶಿಕ್ಷೆ ಎದುರಿಸಲು ಸಿದ್ಧ’ ಎಂದು ಅದರಲ್ಲಿ ತಿಳಿಸಿದ್ದಾರೆ. ಆದರೆ ತಾಂತ್ರಿಕ ಕಾರಣಗಳ ಹಿನ್ನೆಲೆಯಲ್ಲಿ ಈ ಪ್ರಮಾಣಪತ್ರವನ್ನು ಸಲ್ಲಿಸಲಾಗಿಲ್ಲ.

ರಾಜೀವ್‌ ಹೇಳಿದ್ದೇನು?: ನಾವು ಕೊರೊನಾ ಹಿನ್ನೆಲೆಯಲ್ಲಿ ಕೆಲವು ಹಂತಗಳ ಚುನಾವಣೆಯನ್ನು ಮುಂದೂಡಲು ಬಯಸಿದ್ದೆವು. ಕಡೆಗೆ ಅದರ ವಿರುದ್ಧ ತೀರ್ಮಾನಿಸಿದೆವು. ಇದಕ್ಕೆ ಕಾರಣವಿಷ್ಟೇ: ಹೀಗೆ ಮಾಡಿದ್ದರೆ, ನಾವು ಒಂದು ಪಕ್ಷದ ಪರ, ಇನ್ನೊಂದು ಪಕ್ಷದ ವಿರುದ್ಧ ಕೆಲಸ ಮಾಡಿದ್ದೇವೆಂಬ ಆರೋಪಕ್ಕೆ ಒಳಗಾಗುತ್ತಿದ್ದೆವು.

ಇದನ್ನೂ ಓದಿ :ಜೇನುನೊಣಗಳೇ ಕೋವಿಡ್ ಪತ್ತೆ ಸಾಧನಗಳು! ಬಡರಾಷ್ಟ್ರಗಳಿಗೆ ಬಹಳ ಉಪಕಾರಿಯೆಂದ ಜೀವಶಾಸ್ತ್ರಜ್ಞರು

ಚುನಾವಣೆ ಆಯೋಗ ಪ್ರಜಾಪ್ರಭುತ್ವದ ಉಳಿವಿಗಾಗಿ ಯಾವಾಗಲೂ ಅನುಮಾನಮುಕ್ತವಾಗಿರಬೇಕಾಗುತ್ತದೆ. ಹಾಗಿಲ್ಲದೇ ಹೋದರೆ ತಲೆಗೊಬ್ಬರು ಬಾಯಿಗೆ ಬಂದಂತೆ ಮಾತನಾಡಲು ಅವಕಾಶ ನೀಡಿದಂತಾಗುತ್ತದೆ ಎಂದು ಪ್ರಮಾಣಪತ್ರದಲ್ಲಿ ರಾಜೀವ್‌ ಕುಮಾರ್‌ ಹೇಳಿದ್ದಾರೆ.

Advertisement
Advertisement

Udayavani is now on Telegram. Click here to join our channel and stay updated with the latest news.

Next