Advertisement

ಸಚಿವ ಡಿಕೆಶಿ ವಿರುದ್ಧದ ಇಸಿಐಆರ್‌ ಒಪ್ಪಲಾಗದು’ 

12:30 AM Mar 19, 2019 | Team Udayavani |

ಬೆಂಗಳೂರು: ಐಟಿ ದಾಳಿ ಸಂಬಂಧ ಜಾರಿ ನಿರ್ದೇಶನಾಲಯ ಸಲ್ಲಿಸಿರುವ ಇಸಿಐಆರ್‌ ಒಪ್ಪಲು ಸಾಧ್ಯವಿಲ್ಲ ಎಂದು ಸಚಿವ ಡಿ.
ಕೆ. ಶಿವಕುಮಾರ್‌ ಪರ ವಾದ ಮಂಡಿಸಿದ ಸುಪ್ರೀಂಕೋರ್ಟ್‌ ಹಿರಿಯ ವಕೀಲ ಕಪಿಲ್‌ ಸಿಬಲ್‌ ಹೇಳಿದ್ದಾರೆ. 

Advertisement

ಜಾರಿ ನಿರ್ದೇಶನಾಲಯ ನೀಡಿರುವ ಸಮನ್ಸ್‌ ರದ್ದುಗೊಳಿಸುವಂತೆ ಕೋರಿ ಸಚಿವ ಡಿ.ಕೆ. ಶಿವಕುಮಾರ್‌ ಹಾಗೂ ಇತರರು ಸಲ್ಲಿಸಿರುವ ಅರ್ಜಿಗಳ ವಿಚಾರಣೆ ನಡೆಸುತ್ತಿರುವ ನ್ಯಾ.ಅರವಿಂದ ಕುಮಾರ್‌ ಅವರಿದ್ದ ಏಕಸದದಸ್ಯ ನ್ಯಾಯಪೀಠದಲ್ಲಿ ಸೋಮವಾರ ವಾದ ಮಂಡಿಸಿದ ಕಪಿಲ್‌ ಸಿಬಲ್‌, ಇಸಿಐಆರ್‌ ಒಂದು ಆಂತರಿಕ ದಾಖಲೆ, ಅಲ್ಲದೇ ಜಾರಿ ನಿರ್ದೇಶನಾಲಯ ಸಮನ್ಸ್‌ ಜಾರಿ ಪ್ರಕರಣದಲ್ಲಿ ಪಿಎಂಎಲ್‌ಎ ಕಾಯ್ದೆ ಅನ್ವಯವಾಗುವುದಿಲ್ಲ ಎಂದರು. ಇಸಿಐಆರ್‌ ಆಂತರಿಕ ದಾಖಲೆ, ಅದು ನಮ್ಮ ಕೈಗೆ ಸಿಕ್ಕಿಲ್ಲ. ಆದರೆ, ಕೋರ್ಟ್‌ಗೆ ಸಲ್ಲಿಸಲಾಗಿದೆ. ಅದರಲ್ಲಿ ಏನಿದೆ ಅನ್ನುವುದು ನಮಗೆ ಗೊತ್ತಿಲ್ಲ.

ಹಾಗಾಗಿ, ಅದೊಂದು ಹೈಬ್ರಿಡ್‌ ದಾಖಲೆ. ಆದ್ದರಿಂದ ಅದನ್ನು ಒಪ್ಪಲು ಸಾಧ್ಯವಿಲ್ಲ ಮತ್ತು ನ್ಯಾಯಾಲಯ ಅದನ್ನು ಸಾಕ್ಷಿಯಾಗಿ ಪರಿಗಣಿಸಲೂಬಾರದು. ದೂರು ಅಥವಾ ಎಫ್ ಐಆರ್‌ನಲ್ಲಿ ಆರೋಪಗಳ ಬಗ್ಗೆ ಉಲ್ಲೇಖೀಸಿದ್ದರೆ, ಅದಕ್ಕೆ ಸ್ಪಷ್ಟನೆ ಅಥವಾ ಉತ್ತರ ನೀಡಬಹುದು ಎಂದು ಕಪಿಲ್‌ ಸಿಬಲ್‌ ನ್ಯಾಯಪೀಠಕ್ಕೆ ಮನವರಿಕೆ ಮಾಡಿದರು. ಇದಕ್ಕೆ ಪ್ರತಿಕ್ರಿಯಿಸಿದ ನ್ಯಾಯಪೀಠ, ಇಸಿಐಆರ್‌ ಕೋರ್ಟ್‌ಗೆ ಸಲ್ಲಿಸುವಂತೆ ಹೇಳಿದ್ದು, ನಾವು. ಅದನ್ನು ನೋಡುವ ಹಕ್ಕು ನ್ಯಾಯಾಲಯಕ್ಕಿದೆ ಎಂದು, ವಿಚಾರಣೆಯನ್ನು ಮಂಗಳವಾರಕ್ಕೆ (ಮಾ.19) ಮುಂದೂಡಿತು.

Advertisement

Udayavani is now on Telegram. Click here to join our channel and stay updated with the latest news.

Next