Advertisement

ಕೃಷಿ ತ್ಯಾಜ್ಯ ಬಳಸಿ ಪರಿಸರ ಸ್ನೇಹಿ ಬ್ಯಾಗ್

01:00 PM Jan 24, 2020 | Suhan S |

ಚನ್ನರಾಯಪಟ್ಟಣ/ಶ್ರವಣಬೆಳಗೊಳ: ದೇಶದಲ್ಲಿ ಪ್ಲಾಸ್ಟಿಕ್‌ ಬಳಕೆ ಹೆಚ್ಚಾಗುತ್ತಿದೆ. ಇದನ್ನು ತಡೆಯಲು ಸರ್ಕಾರ ಕಾನೂನು ಮಾಡಿದ್ದರೂ ಪರ್ಯಾಯ ವಸ್ತುಗಳನ್ನು ಸಾರ್ವಜನಿಕರಿಗೆ ನೀಡುತ್ತಿಲ್ಲ. ಆದರೆ ತಾಲೂಕಿನ ಶ್ರವಣಬೆಳಗೊಳ ಬಾಹುಬಲಿ ಎಂಜಿನಿಯರಿಂಗ್‌ ಕಾಲೇಜಿನ ವಿದ್ಯಾರ್ಥಿಗಳು ಪರಿಸರ ಕಾಳಜಿಯಿಂದ ತ್ಯಾಜ್ಯವಸ್ತುಗಳನ್ನು ಬಳಕೆ ಮಾಡಿಕೊಂಡು ಪರಿಸರ ಸ್ನೇಹಿ ಬ್ಯಾಗ್‌ ತಯಾರಿಕೆಗೆ ಮುಂದಾಗಿದ್ದಾರೆ. ಪ್ಲಾಸ್ಟಿಕ್‌ ಬ್ಯಾಗ್‌ ಬದಲಾಗಿ ಬಟ್ಟೆ ಬ್ಯಾಗ್‌ ಬಳಕೆ ಮಾಡಬಹುದು. ಆದರೆ ಇದು ದುಬಾರಿಯಾಗಲಿದೆ, ವರ್ತಕರಿಗೂ ಹೊರೆ ಆಗುವುದಲ್ಲದೇ ಗ್ರಾಹಕರು ಹೆಚ್ಚು ಹಣ ಕೊಡಬೇಕಾಗುತ್ತದೆ. ಹಾಗಾಗಿ ಕಡಿಮೆ ಬೆಲೆಯ ಕೈ ಚೀಲ ಮಾರುಕಟ್ಟೆಯಲ್ಲಿ ದೊರೆತರೆ ವರ್ತಕರು ಕೊಂಡು ಗ್ರಾಹಕರಿಗೆ ಅದರಿಂದ ಸಾಮಗ್ರಿಯನ್ನು ಹಾಕಿಕೊಡಲು ಅನುಕೂಲವಾಗುತ್ತದೆ. ಇದನ್ನು ಮನಗಂಡ ಬಾಹುಬಲಿ ಎಂಜಿನಿಯರಿಂಗ್‌ ವಿದ್ಯಾರ್ಥಿಗಳು ಪರಿಸರ ಸ್ನೇಹಿ ಪೇಪರ್‌ ಬ್ಯಾಗ್‌ ತಯಾರಿಕೆಯಲ್ಲಿ ಮುಂದಾಗಿದ್ದಾರೆ.

Advertisement

ಕ್ಷಣಾರ್ಧದಲ್ಲಿ ಬ್ಯಾಗ್‌ ಸಿದ್ಧ: ಪರಿಸರ ಸ್ನೇಹಿ ಬ್ಯಾಗ್‌ ತಯಾರಿಕೆಗೆ ನೈಸರ್ಗಿಕ ಹಾಗೂ ಕೃಷಿ ತ್ಯಾಜ್ಯಗಳನ್ನು ಬಳಕೆ ಮಾಡಿಕೊಂಡು ಎರಡರಿಂದ ಮೂರು ಕೇಜಿ ತೂಕದ ಸಾಮಗ್ರಿಯನ್ನು ಬ್ಯಾಗಿನಲ್ಲಿ ತೆಗೆದುಕೊಂಡು ಹೋಗಲು ಅನುಕೂಲವಾಗುಂತೆ ಬ್ಯಾಗ್‌ ತಯಾರಿಕೆ ಮಾಡಲಾಗುತ್ತಿದೆ. ಇದಕ್ಕೆ ಕೇವಲ 40 ಪೈಸೆಯಿಂದ 3 ರೂ. ವೆಚ್ಚ ತಗುಲಲಿದ್ದು ಕ್ಷಣಾರ್ಧದಲ್ಲಿ ಪರಿಸರ ಸ್ನೇಹಿ ಬ್ಯಾಗ್‌ ಸಿದ್ಧಗೊಳ್ಳುತ್ತಿದೆ.

ಪ್ಲಾಸ್ಟಿಕ್‌ ಮುಕ್ತ ಭಾರತ: ದೇಶದ ಪ್ರತಿ ನಗರ ಸಭೆ, ನಗರ ಪಾಲಿಕೆ, ಪುರಸಭೆ, ಪಟ್ಟಣ ಪಂಚಾಯಿತಿ ಹಾಗೂ ಗ್ರಾಮ ಪಂಚಾಯಿತಿ ಮುಖ್ಯ ಕೇಂದ್ರದಲ್ಲಿನ ನೈಸರ್ಗಿಕ ಹಾಗೂ ಕೃಷಿ ತ್ಯಾಜ್ಯವನ್ನು ಬಳಸಿ ಪರಿಸರ ಸ್ನೇಹಿ ಬ್ಯಾಗ್‌ ತಯಾರಿಕೆಗೆ ಮುಂದಾದರೆ ಪ್ಲಾಸ್ಟಿಕ್‌ ಮುಕ್ತ ಭಾರತ ಆಗುವುದರಲ್ಲಿ ಸಂದೇಹವಿಲ್ಲ, ಇನ್ನು ಇದರಿಂದ ಅನೇಕ ಮಂದಿಗೂ ಉದ್ಯೋಗ ದೊರೆಯಲಿದ್ದು ಹಲಾವು ಕುಟುಂಬಗಳು ನೆಮ್ಮದಿಯಾಗಿ ಬದುಕಬಹುದಾಗಿದೆ.

ಮೋದಿ ಕನಸು ಇಲ್ಲಿ ನನಸು: ದೇಶದ ಪ್ರಧಾನಿ ನರೇಂದ್ರ ಮೋದಿ ಅವರು ಗಾಂಧಿ ಜಯಂತಿಯಂದು ದೇಶವನ್ನು ಪ್ಲಾಸ್ಟಿಕ್‌ ಮುಕ್ತ ಮಾಡಬೇಕು ಎಂದು ಕರೆ ನೀಡಿದಲ್ಲದೆ ಸ್ವತ್ಛ ಸರ್ವೇಕ್ಷಣ ಅಭಿಯಾನ ಪ್ರಾರಂಭಿಸಿ ದೇಶ ಎಲ್ಲಾ ಸ್ಥಳೀಯ ಸಂಸ್ಥೆಗಳಿಂದ ಇದನ್ನು ಮಾಡಿಸುತ್ತಿದ್ದಾರೆ. ಆದರೆ ಶ್ರವಣಬೆಳಗೊಳದ ಬಾಹುಬಲಿ ಎಂಜಿನಿಯರಿಂಗ್‌ ಕಾಲೇಜು ವಿದ್ಯಾರ್ಥಿಗಳು ಸರ್ಕಾರದ ಸಹಾಯ ಪಡೆಯದೇ ಪ್ರಧಾಮಿ ಮೋದಿ ಅವರ ಕನಸು ನನಸು ಮಾಡಲು ಮುಂದಾಗಿದ್ದಾರೆ.

ಪ್ಲಾಸ್ಟಿಕ್‌ ಕೈಚೀಲ ಎಲ್ಲೆಲ್ಲಿ ಹೆಚ್ಚು ಬಳಕೆ: ಹೋಟೆಲ್‌, ಬೇಕರಿ, ಮದ್ಯ ಹಾಗೂ ಮಾಂಸದ ಅಂಗಡಿ ಸೇರಿದಂತೆ ತರಕಾರಿ ಮಾರಾಟ ಮಾಡುವವರು ಪ್ಲಾಸಿಕ್‌ ಕೈ ಚೀಲವನ್ನು ಹೆಚ್ಚು ಬಳಕೆ ಮಾಡುತ್ತಿದ್ದಾರೆ. ಪ್ಲಾಸ್ಟಿಕ್‌ ನಿಷೇಧಿಸಬೇಕಾಗಿರುವ ಸ್ಥಳೀಯ ಸಂಸ್ಥೆಗಳು ಈ ಬಗ್ಗೆ ಕ್ರಮ ಕೈಗೊಳ್ಳುತ್ತಿಲ್ಲ. ಒಮ್ಮೆ ಅಂಗಡಿ ಮಾಲೀಕರ ವಿರುದ್ಧ ಕ್ರಮ ಕೈಗೊಂಡು ದಂಡ ಹಾಕಲು ಮುಂದಾಗುತ್ತಿಲ್ಲ. ಈ ಬಗ್ಗೆ ಅರಿವು ಮೂಡಿಸಲು ಮುಂದಾಗುತ್ತಿಲ್ಲ ವಿದ್ಯಾರ್ಥಿಗಳ ಶ್ರಮದಿಂದ ಸ್ವಲ್ಪ ಮಟ್ಟಿಗೆ ನಿಯಂತ್ರಣ ಮಾಡಬಹುದಾಗಿದೆ.

Advertisement

ಹೇಳುವ ಬದಲು ಮಾಡಿ ತೋರಿಸಿದ್ದಾರೆ: ವಿಶ್ವಕ್ಕೆ ಅಹಿಂಸಾ ಸಂದೇಶ ಸಾರಿದ ಏಕಶಿಲಾ ಮೂರ್ತಿ ಜೈನರ ಕಾಶಿ ಎಂದು ಪ್ರಖ್ಯಾತಿ ಪಡೆದಿರುವ ಶ್ರವಣಬೆಳಗೊಳದಲ್ಲಿಯೂ ಪ್ಲಾಸ್ಟಿಕ್‌ ಬಳಕೆ ನಿಯಂತ್ರಿಸುವಲ್ಲಿ ಗ್ರಾಮ ಪಂಚಾಯಿತಿ ವಿಫ‌ಲವಾಗಿದೆ. ರಸ್ತೆ ಬದಿಯದೇ ಚಂದ್ರಗಿರಿ ಹಾಗೂ ವಿಂದ್ಯಗಿರಿ ಬೆಟ್ಟದ ಮೇಲಿಯೂ ಪ್ಲಾಸ್ಟಿಕ್‌ ಕೈ ಚೀಲ, ಪ್ಲಾಸ್ಟಿಕ್‌ ನೀರಿನ ಬಾಟಲಿ, ಲೋಟಗಳು ಕಂಡು ಬರುತ್ತಿವೆ. ಇನ್ನು ಮದ್ಯದ ಅಂಗಡಿಯವರು ಪ್ಲಾಸ್ಟಿಕ್‌ ತ್ಯಾಜ್ಯವನ್ನು ಬೆಟ್ಟದ ತಪ್ಪಲಿನಲ್ಲಿ ಸುರಿಯುತ್ತಾರೆ. ಕೃಷಿ ತ್ಯಾಜ್ಯದಿಂದ ಪೇಪರ್‌ ಬ್ಯಾಗ್‌ ತಯಾರಿಸಿದ ಬಾಹುಬಲಿ ಎಂಜಿನಿಯರಿಂಗ್‌ ಕಾಲೇಜು ವಿದ್ಯಾರ್ಥಿಗಳು ಪ್ಲಾಸ್ಟಿಕ್‌ ಮುಕ್ತ ಭಾರತಕ್ಕಾಗಿ ಶ್ರಮಿಸುತ್ತಿದ್ದಾರೆ.

 

-ಶಾಮಸುಂದರ್‌ ಕೆ. ಅಣ್ಣೇನಹಳ್ಳಿ

Advertisement

Udayavani is now on Telegram. Click here to join our channel and stay updated with the latest news.

Next