Advertisement
ಮೈಸೂರು: ಸಾಂಸ್ಕೃತಿಕ ನಗರಿ ಮೈಸೂರಿನೆಲ್ಲೆಡೆ ಸಂಭ್ರಮ, ಸಡಗರದ ಗಣೇಶ ಚತುರ್ಥಿ ಆಚರಣೆ ಮಾಡಲಾಗುತ್ತಿದೆ. ಹಬ್ಬದ ಆಚರಣೆಗೆ ಪರಿಸರ ಸ್ನೇಹಿ ಗಣೇಶಮೂರ್ತಿ ಖರೀದಿಸುವ ಮೂಲಕ ನಗರದ ಜತೆಗೆ ಹಬ್ಬದ ಆಚರಣೆ ಜತೆಗೆ ಪರಿಸರ ಸಂರಕ್ಷಣೆಗೆ ಒಲವು ತೋರಿದ್ದಾರೆ. ಪ್ರತಿವರ್ಷ ಗಣೇಶ ಚತುರ್ಥಿ ಬಂತೆಂದರೆ ನಗರದೆಲ್ಲೆಡೆ ಪಿಒಪಿ ಅಥವಾ ರಾಸಾಯನಿಕಗಳಿಂದ ತಯಾರಿಸಿದ ಗಣೇಶ ಮೂರ್ತಿಗಳು ಎಲ್ಲಾ ಕಡೆಗಳಲ್ಲೂ ರಾರಾಜಿಸುತ್ತಿತ್ತು. ಇಂತಹ ಗಣೇಶ ಮೂರ್ತಿಗಳ ಬಳಕೆಯಿಂದ ಆಗುವ ಪರಿಸರ ಮಾಲಿನ್ಯವನ್ನು ತಡೆಯಲೆಂದು ನಗರ ಪಾಲಿಕೆ ಈ ಬಾರಿ ಪಿಒಪಿ ಅಥವಾ ರಾಸಾಯನಿಕ ಬಣ್ಣಗಳಿಂದ ತಯಾರಿಸಿದ ಗಣೇಶ ಮೂರ್ತಿಗಳ ಮಾರಾಟ ಮತ್ತು ಖರೀದಿಗೆ ಕಡಿವಾಣ ಹಾಕಿತ್ತು. ಇದರಿಂದ ಎಚ್ಚೆತ್ತುಕೊಂಡ ನಗರದ ಜನತೆ ಹಬ್ಬದ ಮುನ್ನಾದಿನವಾದ ಬುಧವಾರ ಪರಿಸರ ಸ್ನೇಹಿ ಗಣೇಶ ಮೂರ್ತಿಗಳನ್ನು ಖರೀದಿಸಿ, ವಿಘ್ನ ವಿನಾಶಕನ ಆರಾಧನೆಗೆ ಸಜ್ಜಾಗಿದ್ದಾರೆ.
ಮೂರ್ತಿಗಳನ್ನು ಹೆಚ್ಚಾಗಿ ಬಳಕೆ ಮಾಡಲಾಗುತ್ತಿತ್ತು. ಆದರೆ ಪಿಒಪಿ ಅಥವಾ ರಾಸಾಯನಿಕ ಬಣ್ಣಗಳಿಂದ ಮಾಡಿರುವ
ಗಣೇಶ ಮೂರ್ತಿಗಳ ಪ್ರತಿಷ್ಠಾಪನೆಗೆ ಮನಸ್ಸು ಮಾಡದ ಗಣೇಶ ಉತ್ಸವಗಳ ಆಯೋಜಕರು ಜೇಡಿ ಮಣ್ಣಿನಿಂದ
ಮಾಡಿದ ಗಣೇಶ ಮೂರ್ತಿಗಳನ್ನೇ ಹೆಚ್ಚಾಗಿ ಖರೀದಿಸಿದ್ದಾರೆ. ದೊಡ್ಡಮಟ್ಟದಲ್ಲಿ ನಡೆಯುವ ಗಣೇಶ ಉತ್ಸವಗಳಿಗಾಗಿ ನಗರದ ಮಾರುಕಟ್ಟೆಯಲ್ಲಿ ಗಂಡ ಬೇರುಂಡ, ಮೈಸೂರು ಪೇಟ, ಹಂಸ, ಶಂಖು, ದಿಂಬು, ಹಸು, ಕೃಷ್ಣ ಗಣಪತಿ ಸೇರಿದಂತೆ ವಿವಿಧ ಬಗೆಯ ಗಣೇಶ ಮೂರ್ತಿಗಳನ್ನು ತಯಾರಿಸಿ ಮಾರಾಟ ಮಾಡಲಾಗಿದೆ. 100 ರೂ.ನಿಂದ 10 ಸಾವಿರ ರೂ.ಗಳವರೆಗೂ ಗಣಪತಿ ಮೂರ್ತಿಗಳು ಮಾರಾಟಗೊಂಡವು.
Related Articles
Advertisement
ಇಳೈ ಆಳ್ವಾರ್ ಸ್ವಾಮೀಜಿ ಮಾತನಾಡಿ, ನಾಡಿನಲ್ಲಿ ಎರಡೂ ಸಮುದಾಯಗಳ ಹಬ್ಬಗಳನ್ನು ಸೌಹಾರ್ದವಾಗಿ ಆಚರಣೆ ಮಾಡುವ ಪದ್ಧತಿ ಇದೆ. ಆದರೆ ಕೆಲ ಕಿಡಿಗೇಡಿಗಳು ಎರಡೂ ಸಮುದಾಯಗಳ ನಡುವೆ ಕಿಚ್ಚು ಹಚ್ಚಲು ಮತ್ತು ಶಾಂತಿ ಕದಡಲು ಸುಳ್ಳು ಸುದ್ದಿ ಹಬ್ಬಿಸುವುದು, ಗಲಾಟೆ ಮಾಡುವ ಕೆಲಸ ಮಾಡುತ್ತಾರೆ. ಸಾರ್ವಜನಿಕರು ಇಂತಹ ಊಹಾಪೋಹಗಳಿಗೆ ಕಿವಿಗೊಡದೆ ಧಾರ್ಮಿಕ ಆಚರಣೆಗಳನ್ನು ಶಾಂತಿಯುತವಾಗಿ ಆಚರಿಸಬೇಕು ಎಂದರು.
ಈ ಸಂದರ್ಭದಲ್ಲಿ ಶ್ರೀಕರ ಸ್ವಾಮೀಜಿ, ಪರಿವರ್ತನಂ ಟ್ರಸ್ಟ್ನ ಅಧ್ಯಕ್ಷ ವಿನಯ್ ಕಣಗಾಲ್, ಅದಿತ್ರಿ ಚಾರಿಟಬಲ್ ಟ್ರಸ್ಟ್ ಅಧ್ಯಕ್ಷೆ ಸೌಭಾಗ್ಯ, ಮೈಕ್ ಚಂದ್ರು, ಅಮ್ರಿನ್ ತಾಜ್, ಅರವಿಂದ್, ದಿಲೀಪ್, ರಂಜಿತ್ ಪ್ರಸಾದ್, ಅಬ್ರಾರ್, ನಾಸೀರ್ ಬಾಷಾ, ಜಮೀರ್ ಪಾಷಾ, ಅನ್ಸರ್ ಪಾಷಾ ಇದ್ದರು.
ಶ್ರೀಕಂಠನ ಸನ್ನಿಧಿಯಲ್ಲಿ ಸ್ವರ್ಣಗೌರಿ ಸಂಭ್ರಮ ನಂಜನಗೂಡು: ಶ್ರೀಕಂಠೇಶ್ವರಸ್ವಾಮಿ ಸನ್ನಿಧಿಯಲ್ಲಿ ಸ್ವರ್ಣಗೌರಿ ಹಬ್ಬವನ್ನು ವಿಜೃಂಭಣೆಯಿಂದ ಆಚರಿಸಲಾಯಿತು. ಗೌರಿಯನ್ನು ವಿವಿಧ ಹೂವು ಗಳಿಂದ ಅಲಂಕರಿಸಿ ಶ್ರೀಕಂಠನೊಂದಿಗೆ ಪಲ್ಲಕ್ಕಿಯಲ್ಲಿ ಕೂರಿಸಿ, ಮೆರೆವಣಿಗೆ ಮಾಡಿ, ಶ್ರೀಚಾಮುಂಡೇಶ್ವರಿ ದೇವಸ್ಥಾನಕ್ಕೆ ತಂದು ನಾಗಚಂದ್ರ ದೀಕ್ಷಿತರ ನೇತೃತ್ವದಲ್ಲಿ ವಿಶೇಷ ಪೂಜೆ ಸಲ್ಲಿಸಿದರು. ಬಳಿಕ ಶ್ರೀಕಂಠೇಶ್ವರಸ್ವಾಮಿ ದೇವಾಲಯಕ್ಕೆ ವಾಪಸ್ ಬಂದು ಸಹಸ್ರ ಲಿಂಗೇಶ್ವರಸ್ವಾಮಿ ಎದುರಿನಲ್ಲಿ ಗೌರಿಯನ್ನು ಪ್ರತಿಷ್ಠಾಪಿಸಲಾಯಿತು. ಮುತ್ತೇದೆಯರು ಬಳೆ, ಬಿಚ್ಚೋಲೆ,16 ಎಳೆಯ ಹೆಜ್ಜೆ ವಸ್ತ್ರಗಳು, ಕನ್ನಡಿ, ಕಳಸ, ಕಾಡಿಗೆ, ಹಸಿರು ಸೀರೆ, ಕುಪ್ಪಸ, ಜಾಜಿ, ಮಲ್ಲಿಗೆ, ವಿಳ್ಯಗಳನ್ನಿಟ್ಟು ಬಾಗಿನ ಅರ್ಪಿಸಿದರು.