Advertisement

ರಾಜ್ಯದ ಆರ್ಥಿಕ ಪರಿಸ್ಥಿತಿ ದಿವಾಳಿಯಾಗಿದೆ : ಉಗ್ರಪ್ಪ

11:07 AM Feb 27, 2020 | sudhir |

ಬೆಂಗಳೂರು: ರಾಜ್ಯ ಸರ್ಕಾರ ಆರ್ಥಿಕವಾಗಿ ದಿವಾಳಿಯಾಗಿದ್ದು, ಬಸ್‌ದರ ಏರಿಕೆ ಹಾಗೂ ಮೆಡಿಕಲ್‌ ಕಾಲೇಜುಗಳ ಪ್ರವೇಶದ ದರ ಹೆಚ್ಚಳ ಮಾಡುವ ಮೂಲಕ ಸರ್ಕಾರ ಬೊಕ್ಕಸ ತುಂಬಿಸಿಕೊಳ್ಳಲು ಪ್ರಯತ್ನಿಸುತ್ತಿದೆ ಎಂದು ಮಾಜಿ ಸಂಸದ ವಿ.ಎಸ್‌.ಉಗ್ರಪ್ಪ ಆರೋಪಿಸಿದ್ದಾರೆ.

Advertisement

ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ರಾಜ್ಯದ ಜನರು ಈಗಾಗಲೇ ಆರ್ಥಿಕ ಕುಸಿತದಿಂದ ರೋಸಿ ಹೋಗಿದ್ದಾರೆ. ಇಂತಹ ಸಂದರ್ಭದಲ್ಲಿ ಬಸ್‌ ಪ್ರಯಾಣ ದರ ಏರಿಕೆ ಮಾಡಿ ಜನರಿಗೆ ಬರೆ ಎಳೆಯಲಾಗಿದೆ. ಇದರೊಂದಿಗೆ ವೈದ್ಯಕೀಯ ಶಿಕ್ಷಣ ಇಲಾಖೆ ಮೆಡಿಕಲ್‌ ಕಾಲೇಜು ಪ್ರವೇಶ ದರ ಹೆಚ್ಚಳ ಮಾಡುವ ಪ್ರಸ್ತಾವನೆ ಸಲ್ಲಿಸಿದ್ದು, ಬಡವರ ಮಕ್ಕಳು ವೈದ್ಯಕೀಯ ಶಿಕ್ಷಣ ಕಲಿಯದಂತೆ ಮಾಡುತ್ತಿದೆ ಎಂದು ಆರೋಪಿಸಿದರು.

ರಾಜ್ಯ ಸರ್ಕಾರ ಖಾಲಿಯಾಗಿರುವ ಖಜಾನೆ ತುಂಬಲು ಕ್ಯಾಸಿನೋದಂತಹ ಜೂಜಾಟಕ್ಕೆ ಅನುಮತಿ ನೀಡಲು ಮುಂದಾಗಿದೆ. ಅಬಕಾರಿ ಸಚಿವರು ಮನೆ ಮನೆಗೆ ಮದ್ಯ ಸರಬರಾಜು ಮಾಡಿ ಆದಾಯ ಗಳಿಸಲು ಮುಂದಾಗಿದ್ದಾರೆ. ಈ ರೀತಿಯ ಯೋಜನೆಗಳನ್ನು ಜಾರಿಗೆ ತರಲು ಬಿಜೆಪಿಯವರಿಗೆ ನಾಚಿಕೆಯಾಗುವುದಿಲ್ಲವೇ ಎಂದು ಉಗ್ರಪ್ಪ ಪ್ರಶ್ನಿಸಿದರು.

Advertisement

Udayavani is now on Telegram. Click here to join our channel and stay updated with the latest news.

Next