Advertisement

ಸಮಗ್ರ ಕೃಷಿಯಿಂದ ಆರ್ಥಿಕ ಸ್ವಾವಲಂಬನೆ: ಬಿ.ಸಿ. ಪಾಟೀಲ್‌

08:04 PM Feb 26, 2022 | Team Udayavani |

ಬೆಂಗಳೂರು: ಬೆಳೆ ವಿಮೆ ಮಾಡುವ ರೈತರಿಗೆ ಅದರ ಕುರಿತು ಸಂಪೂರ್ಣ ಮಾಹಿತಿ ಹೊಂದಿರುವ ಪಾಲಿಸಿಯನ್ನು ನೀಡುತ್ತಿದ್ದು, ಇದರಲ್ಲಿ ಯಾವ ಬೆಳೆಗೆ ಎಷ್ಟು ಪರಿಹಾರ ಸಿಗಲಿದೆ ಹಾಗೂ ಆಧಾರ್‌ ಕಾರ್ಡ್‌ ಜೋಡಣೆಯಾಗಿರುವ ಬ್ಯಾಂಕ್‌ ಖಾತೆ ವಿವರಗಳು ಇರಲಿವೆ ಎಂದು ಕೃಷಿ ಸಚಿವ ಬಿ.ಸಿ. ಪಾಟೀಲ್‌ ತಿಳಿಸಿದರು.

Advertisement

ಶನಿವಾರ ನಗರದ ಕೃಷಿ ವಿಶ್ವವಿದ್ಯಾನಿಲಯದ ಬಿಎಸ್‌ಎಚ್‌ ಕಾಲೇಜಿನ ಆಡಿಟೋರಿಯಂ ನಾರ್ತ್‌ ವಿಂಗ್‌ನಲ್ಲಿ ಆಯೋಜಿಸಿದ್ದ ಪ್ರಧಾನ ಮಂತ್ರಿ ಫ‌ಸಲ್‌ ಭೀಮಾ ಯೋಜನೆಯಡಿ ಹಮ್ಮಿಕೊಂಡ “ನನ್ನ ಪಾಲಿಸಿ ನನ್ನ ಕೈಯಲ್ಲಿ’ ಬೆಳೆ ವಿಮೆ ಪಾಲಿಸಿ ವಿತರಣೆ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದ ಅವರು, ಹವಾಮಾನ ವೈಪರೀತ್ಯದಿಂದ ಕೆಲವೊಮ್ಮ ಅತಿವೃಷ್ಟಿ ಹಾಗೂ ಅನಾವೃಷ್ಟಿಯಿಂದ ಬೆಳೆ ಕೈ ಸೇರದೆ ರೈತರು ನಷ್ಟಕ್ಕೆ ಒಳಗಾಗುತ್ತಿದ್ದಾರೆ. ಅಂಥ ರೈತರು ಸೃದೃಢವಾಗಿರಲು ಸರಕಾರದಿಂದ ಅಗತ್ಯವಿರುವ ಸೌಲಭ್ಯಗಳನ್ನು ನೀಡಲಾಗುತ್ತಿದೆ. ಬೆಳೆ ವಿಮೆಗೆ ರೈತರು ಹಿಂಗಾರು ಶೇ. 1.50 ಹಾಗೂ ಮುಂಗಾರು ಶೇ.2ರಷ್ಟು ಪಾವತಿ ಮಾಡುತ್ತಾರೆ. ಉಳಿದ ಹಣವನ್ನು ಕೇಂದ್ರ ಹಾಗೂ ರಾಜ್ಯ ಸರಕಾರ ಪಾವತಿಸುತ್ತಿದೆ. ಇದುವರೆ 15 ಲಕ್ಷಕ್ಕಿಂತ ಹೆಚ್ಚು ರೈತರು ಬೆಳೆ ವಿಮೆ ಮಾಡಿದ್ದಾರೆ ಎಂದರು.

ಬೆಳೆ ವಿಮೆ ಪರಿಹಾರಕ್ಕೆ 1.21 ಕೋಟಿ ರೈತರ ಅರ್ಜಿ ಅನುಮೋದನೆಯಾಗಿದ್ದು, 6, 879 ಕೋಟಿ ರೂ. ವಿಮೆ ಮೊತ್ತ ರೈತರ ಖಾತೆಗೆ ಜಮೆಯಾಗಿದೆ. ರಾಜ್ಯದಲ್ಲಿ ಹಿಂಗಾರು 2021-22ರ ಹಂಗಾಮಿನಲ್ಲಿ ನೋಂದಣಿ ಮಾಡಿರುವ ರೈತರಿಗೆ ಪಾಲಿಸಿ ವಿವರವನ್ನು ಇನ್‌ಲ್ಯಾಂಡ್ ಲೆಟರ್‌ ನಮೂನೆಯಲ್ಲಿ ವಿತರಿಸಲಾಗಿದೆ. 2021ರ ಮುಂಗಾರು ಹಂಗಾಮಿನಲ್ಲಿ 113.49 ಕೋಟಿ ರೂ. ಬೆಳೆ ವಿಮೆ ಪರಿಹಾರ ಮೊತ್ತ ಸ್ಥಳೀಯ ಪ್ರಕೃತಿ ವಿಕೋಪದಡಿಯಲ್ಲಿ ಇತ್ಯರ್ಥವಾಗಿದೆ.
ಇಲಾಖೆಯ ಪ್ರಮುಖ ಅಧಿಕಾರಿಗಳು ಉಪಸ್ಥಿತರಿದ್ದರು.

Advertisement

Udayavani is now on Telegram. Click here to join our channel and stay updated with the latest news.

Next