Advertisement

ಇಡಿಯಿಂದ ಐಎಎಸ್ ಅಧಿಕಾರಿ ಪೂಜಾ ಸಿಂಘಾಲ್ ಬಂಧನ, 20 ಕೋಟಿ ರೂ. ಜಪ್ತಿ!

07:10 PM May 11, 2022 | Team Udayavani |

ರಾಂಚಿ: ಜಾರಿ ನಿರ್ದೇಶನಾಲಯ ಬುಧವಾರ ಜಾರ್ಖಂಡ್ ನ ಐಎಎಸ್ ಅಧಿಕಾರಿ ಪೂಜಾ ಸಿಂಘಾಲ್ ಅವರನ್ನು ಬಂಧಿಸಿದೆ.

Advertisement

ರಾಜ್ಯದ ಖುಂಟಿ ಜಿಲ್ಲೆಯಲ್ಲಿ 2008-11ರ ಅವಧಿಯಲ್ಲಿ 18 ಕೋಟಿ ರೂ.ಗೂ ಹೆಚ್ಚು ಎಂಜಿಎನ್‌ಆರ್‌ಇಜಿಎ ನಿಧಿಯನ್ನು ದುರುಪಯೋಗಪಡಿಸಿಕೊಂಡ ಆರೋಪಕ್ಕೆ ಸಂಬಂಧಿಸಿದ ಹಣ ವರ್ಗಾವಣೆ ತನಿಖೆಗೆ ಸಂಬಂಧಿಸಿದಂತೆ ಜಾರ್ಖಂಡ್ ಗಣಿಗಾರಿಕೆ ಕಾರ್ಯದರ್ಶಿಯಾಗಿ ಸೇವೆ ಸಲ್ಲಿಸುತ್ತಿರುವ ಐಎಎಸ್ ಪೂಜಾ ಸಿಂಘಾಲ್ ಅವರಿಗೆ ಸಂಬಂಧಿಸಿದ ಅನೇಕ ಸ್ಥಳಗಳಲ್ಲಿ ಇಡಿ ಕಳೆದ ಶುಕ್ರವಾರ ದಾಳಿ ನಡೆಸಿತ್ತು ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ರಾಂಚಿಯಲ್ಲಿ ತಪಾಸಣೆ ನಡೆಸಿದ ಇಡಿ ಎರಡು ನಿವೇಶನಗಳಿಂದ ಒಟ್ಟು 19.31 ಕೋಟಿ ರೂಪಾಯಿ ನಗದನ್ನು ವಶಪಡಿಸಿಕೊಂಡಿದೆ.

ಐಎಎಸ್ ಅಧಿಕಾರಿ ಮತ್ತು ಅವರ ಕುಟುಂಬದೊಂದಿಗೆ ಸಂಪರ್ಕ ಹೊಂದಿರುವ ರಾಂಚಿ ಮೂಲದ ಚಾರ್ಟರ್ಡ್ ಅಕೌಂಟೆಂಟ್-ಕಮ್-ಫೈನಾನ್ಷಿಯಲ್ ಅಡ್ವೈಸರ್ ಬಳಿ ಸುಮಾರು 17.51 ​​ಕೋಟಿ ರೂಪಾಯಿಗಳನ್ನು ವಶಪಡಿಸಿಕೊಳ್ಳಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ನಗರದ ಮತ್ತೊಂದು ಸ್ಥಳದಿಂದ ಸುಮಾರು 1.8 ಕೋಟಿ ರೂಪಾಯಿ ನಗದು ವಶಪಡಿಸಿಕೊಳ್ಳಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next