Advertisement

ಸಚಿವ ಡಿಕೆಶಿಗೆ ಇಡಿ ನೋಟಿಸ್‌

12:30 AM Feb 03, 2019 | |

ಬೆಂಗಳೂರು: ಜಲಸಂಪನ್ಮೂಲ ಸಚಿವ ಡಿ.ಕೆ. ಶಿವಕುಮಾರ್‌ ಅವರ ದಿಲ್ಲಿ ನಿವಾಸಗಳ ಮೇಲೆ ಆದಾಯ ತೆರಿಗೆ ಇಲಾಖೆ ದಾಳಿ ಸಂಬಂಧ ಜಾರಿ ನಿರ್ದೇಶನಾಲಯ(ಇಡಿ)ವು ವಿಚಾರಣೆಗೆ ಹಾಜರಾಗುವಂತೆ ಸಮನ್ಸ್‌ ಜಾರಿ ಮಾಡಿದೆ ಎಂದು ಹೇಳಲಾಗಿದೆ.

Advertisement

ಆದರೆ ಈ ಕುರಿತು ಪ್ರತಿಕ್ರಿಯೆ ನೀಡಿದ ಜಾರಿ ನಿರ್ದೇಶನಾಲಯದ ಬೆಂಗಳೂರು ವಲಯದ ಜಂಟಿ ನಿರ್ದೇಶಕ ರಮಣ ಗುಪ್ತ, ದಿಲ್ಲಿ ನಿವಾಸಗಳ ಮೇಲಿನ ದಾಳಿ ಸಂಬಂಧ ಬೆಂಗಳೂರು ವಲಯದ ಕಚೇರಿಯಲ್ಲಿ ಯಾವುದೇ ಪ್ರಕರಣ ದಾಖಲಾಗಿಲ್ಲ. ಈ ಬಗ್ಗೆ ಹೆಚ್ಚಿನ ಮಾಹಿತಿ ಇಲ್ಲ ಎಂದು ಹೇಳಿದ್ದಾರೆ.
ಈ ಮಧ್ಯೆ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿರುವ ಸಚಿವ ಡಿ.ಕೆ. ಶಿವಕುಮಾರ್‌, ಏನೆಲ್ಲ ಸಮನ್ಸ್‌ ಬರಬೇಕಿತ್ತೂ ಅದೆಲ್ಲವೂ ಬಂದಿದೆ. ಈಗ ಏನನ್ನೂ  ಮಾತನಾಡುವುದಿಲ್ಲ. ಸಮಯ ಬಂದಾಗ ಎಲ್ಲ ಮಾತನಾಡುತ್ತೇನೆ ಎಂದು ಹೇಳಿದರು.

Advertisement

Udayavani is now on Telegram. Click here to join our channel and stay updated with the latest news.

Next