Advertisement

Mangaluru ವಿ.ವಿ.ಗೆ ಇಡಿ ಅಧಿಕಾರಿಗಳು ಮತ್ತೆ ಭೇಟಿ

01:16 AM Feb 24, 2024 | Team Udayavani |

ಮಂಗಳೂರು: ಕೋಲಾರ-ಚಿಕ್ಕಬಳ್ಳಾಪುರ ಹಾಲು ಉತ್ಪಾದಕರ ಒಕ್ಕೂಟ (ಕೋಚಿಮುಲ್‌)ದ ಸಿಬಂದಿ ನೇಮಕ ಪರೀಕ್ಷಾ ಅವ್ಯಹಾರ ಆರೋಪಕ್ಕೆ ಸಂಬಂಧಿಸಿದಂತೆ ಜಾರಿ ನಿರ್ದೇಶನಾಲಯ (ಇಡಿ) ಅಧಿಕಾರಿಗಳು ಮಂಗಳೂರು ವಿಶ್ವವಿದ್ಯಾನಿಲಯಕ್ಕೆ ಮತ್ತೆ ಭೇಟಿ ನೀಡಿದ್ದಾರೆ.

Advertisement

ಅಧಿಕಾರಿಗಳು ಇಡಿಯಿಂದ ಈಗಾಗಲೇ ನಡೆಯುತ್ತಿರುವ ತನಿಖೆಯ ಭಾಗವಾಗಿ ಮತ್ತೆ ವಿ.ವಿ.ಗೆ ಭೇಟಿ ನೀಡಿದ್ದು,
ಉತ್ತರ ಬರೆದ ಕೆಲವು ಒಎಂಆರ್‌ ಶೀಟ್‌ಗಳನ್ನು ಪಡೆದು ಕೊಂಡಿದ್ದಾರೆ ಎಂದು ತಿಳಿದು ಬಂದಿದೆ.

ತಿಂಗಳ ಹಿಂದೆ ದಾಳಿ ಮಾಡಿದ್ದ ಇಡಿ ಅಧಿಕಾರಿಗಳು ಪರೀಕ್ಷೆ ಅವ್ಯವಹಾರ ಆರೋಪಕ್ಕೆ ಸಂಬಂಧಿಸಿದಂತೆ ಕುಲಪತಿ, ಕುಲಸಚಿವರು ಸೇರಿದಂತೆ ಹಲವು ಉನ್ನತ ಅಧಿಕಾರಿಗಳ ವಿಚಾರಣೆ ನಡೆಸಿದ್ದರು.

 

Advertisement

Udayavani is now on Telegram. Click here to join our channel and stay updated with the latest news.

Next