Advertisement

ದೆಹಲಿ ಹೈಕೋರ್ಟ್ ನಲ್ಲಿ ಪಿ.ಚಿದಂಬರಂ ಜಾಮೀನು ಅರ್ಜಿಗೆ ಇ.ಡಿ. ಆಕ್ಷೇಪ

12:28 PM Nov 03, 2019 | Nagendra Trasi |

ನವದೆಹಲಿ:ಐಎನ್ ಎಕ್ಸ್ ಮೀಡಿಯ ಪ್ರಕರಣಕ್ಕೆ ಸಂಬಂಧಿಸಿದಂತೆ ಕೇಂದ್ರದ ಮಾಜಿ ವಿತ್ತ ಸಚಿವ, ಹಿರಿಯ ಕಾಂಗ್ರೆಸ್ ಮುಖಂಡ ಪಿ.ಚಿದಂಬರಂ ಜಾಮೀನು ಅರ್ಜಿಗೆ ಜಾರಿ ನಿರ್ದೇಶನಾಲಯ ಶನಿವಾರ ದೆಹಲಿ ಹೈಕೋರ್ಟ್ ನಲ್ಲಿ ಆಕ್ಷೇಪಣೆ ಸಲ್ಲಿಸಿದೆ.

Advertisement

ಚಿದಂಬರಂಗೆ ಜಾಮೀನು ನೀಡುವುದನ್ನು ವಿರೋಧಿಸಿರುವ ಇ.ಡಿ, ಚಿದಂಬರಂಗೆ ಜಾಮೀನು ನೀಡಿದರೆ ಸಾಕ್ಷ್ಯಗಳ ಮೇಲೆ ಪ್ರಭಾವ ಬೀರುತ್ತಾರೆ. ಹೀಗಾಗಿ ಅವರಿಗೆ ಯಾವುದೇ ರೀತಿಯ ವಿನಾಯ್ತಿ ನೀಡಬಾರದು ಎಂದು ತಿಳಿಸಿದೆ.

ಚಿದಂಬರಂ ಅವರು ತನ್ನ ಖಾಸಗಿ ಲಾಭಕ್ಕಾಗಿ ತಮ್ಮ ಸಚಿವಾಲಯವನ್ನು ದುರುಪಯೋಗಪಡಿಸಿಕೊಂಡಿದ್ದರು ಎಂದು ಇ.ಡಿ. ಹೈಕೋರ್ಟ್ ಗೆ ಸಲ್ಲಿಸಿದ ಆಕ್ಷೇಪಣಾ ಅರ್ಜಿಯಲ್ಲಿ ಹೇಳಿದೆ.

Advertisement

Udayavani is now on Telegram. Click here to join our channel and stay updated with the latest news.

Next