Advertisement

Congress MLA, ವಾಲ್ಮೀಕಿ ನಿಗಮದ ಅಧ್ಯಕ್ಷ ದದ್ದಲ್ ಮನೆ ಮೇಲೆ ಇಡಿ ದಾಳಿ

09:26 AM Jul 10, 2024 | Team Udayavani |

ರಾಯಚೂರು: ರಾಯಚೂರು ಗ್ರಾಮೀಣ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಶಾಸಕ ಹಾಗೂ ರಾಜ್ಯ ಮಹರ್ಷಿ ವಾಲ್ಮೀಕಿ ನಿಗಮದ ಅಧ್ಯಕ್ಷ ಬಸನಗೌಡ ದದ್ದಲ್ ಮನೆಯ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ದಾಳಿ ನಡೆಸಿದೆ.

Advertisement

ಸ್ಥಳೀಯ ಆಶಾಪುರ ರಸ್ತೆಯಲ್ಲಿ ಬರುವ 2ನೇ ವಾರ್ಡ್ ರಾಮ್ ರಹೀಮ್ ಕಾಲೋನಿಯಲ್ಲಿರುವ ದದ್ದಲ್ ಮನೆ ಮೇಲೆ ದಾಳಿ ನಡೆಸಲಾಗಿದೆ. ಮೂರು ಜನ ಅಧಿಕಾರಿಗಳ ನೇತೃತ್ವದ ಎರಡು ತಂಡದಿಂದ ದಾಳಿ ನಡೆಸಿದ್ದು, ದಾಖಲೆಗಳ ಪರಿಶೀಲನೆ ಮುಂದುವರಿದಿದೆ.

ವಾಲ್ಮೀಕಿ ಅಭಿವೃದ್ಧಿ ನಿಗಮದ 187 ಕೋಟಿ ಹಗರಣ ಪ್ರಕರಣ ಹಿನ್ನೆಲೆಯಲ್ಲಿ  ದಾಳಿ ನಡೆಸಲಾಗಿದೆ. ಬೆಳಗ್ಗೆ 7 ಗಂಟೆಯಿಂದ ದಾಖಲೆಗಳ ಪರೀಶಿಲನೆ ನಡೆಸಲಾಗಿದೆ. ನಿನ್ನೆ ಬೆಂಗಳೂರಿನಲ್ಲಿ ಎಸ್ ಐ ಟಿ ವಿಚಾರಣೆಗೆ ಹಾಜರಾಗಿದ್ದ ಬಸನಗೌಡ ದದ್ದಲ್ ಅವರನ್ನು ಇಂದು ಸಹ ವಿಚಾರಣೆಗೆ ಕರೆಯಲಾಗಿದೆ ಎಂದು ತಿಳಿದು ಬಂದಿದೆ.

Advertisement

Udayavani is now on Telegram. Click here to join our channel and stay updated with the latest news.

Next