Advertisement

ಡಿಕೆಶಿ ಪುತ್ರಿ ಐಶ್ವರ್ಯಾಗೆ ಸಮನ್ಸ್‌ ನೀಡಿದ ಇ.ಡಿ.

08:18 AM Sep 11, 2019 | sudhir |

ಬೆಂಗಳೂರು: ಜಾರಿ ನಿರ್ದೇಶನಾಲಯ ವಶದಲ್ಲಿರುವ ಮಾಜಿ ಸಚಿವ ಡಿ.ಕೆ. ಶಿವಕುಮಾರ್‌ ಅವರಿಗೆ ಮತ್ತೂಂದು ಸಂಕಷ್ಟ ಎದುರಾಗಿದೆ. ಅಕ್ರಮ ಹಣ ವ್ಯವಹಾರ ಆರೋಪದ ಮೇಲೆ ಶಿವಕುಮಾರ್‌ ಅವರ ಪುತ್ರಿ ಐಶ್ವರ್ಯಾಗೆ ಇಡಿ ಸಮನ್ಸ್‌ ಜಾರಿ ಮಾಡಿ, ಸೆ.12ರಂದು ಖುದ್ದು ಹಾಜರಾಗುವಂತೆ ಸೂಚಿಸಿದೆ.

Advertisement

ಬೆಂಗಳೂರಿನ ಸದಾಶಿವನಗರದಲ್ಲಿರುವ ಡಿ.ಕೆ. ಶಿವಕುಮಾರ್‌ ಅವರ ಮನೆಗೆ ಮಂಗಳವಾರ ಅಪರಾಹ್ನ ಆಗಮಿಸಿದ ಇಡಿ ಅಧಿಕಾರಿಗಳು ಮನೆ ಬಾಗಿಲಿಗೆ ಸಮನ್ಸ್‌ ಪ್ರತಿ ಅಂಟಿಸಿ ಹಿಂದಿರುಗಿದ್ದರು. ಅದರಲ್ಲಿ ಸೆ.12ರಂದು ವಿಚಾರಣೆಗೆ ಹಾಜರಾಗುವಂತೆ ಐಶ್ವರ್ಯಾಗೆ ಸೂಚನೆ ನೀಡಲಾಗಿದೆ.

ಸೆ.13ರಂದು ಶಿವಕುಮಾರ್‌ ಅವರ ಇಡಿ ಕಸ್ಟಡಿ ಅಂತ್ಯವಾಗಲಿದೆ. ಅದಕ್ಕೂ ಒಂದು ದಿನ ಮೊದಲೇ ಪುತ್ರಿ ಐಶ್ವರ್ಯಾ ಅವರನ್ನು ವಿಚಾರಣೆಗೆ ಬರಲು ಸೂಚಿಸಲಾಗಿದೆ. ಈ ಬೆಳವಣಿಗೆ ಕುಟುಂಬ ಸದಸ್ಯರಲ್ಲಿ ಮತ್ತಷ್ಟು ಆತಂಕ ಮೂಡಿಸಿದೆ.

ಶಿವಕುಮಾರ್‌ ಅವರ ಆರ್ಥಿಕ ವ್ಯವಹಾರಗಳ ಪರಿಶೀಲನೆ ವೇಳೆ ಮಹತ್ವದ ದಾಖಲೆಗಳು ಪತ್ತೆಯಾಗಿದ್ದವು. ಆ ಪೈಕಿ ಕೆಲವು ವ್ಯವಹಾರಗಳು ಪುತ್ರಿ ಐಶ್ವರ್ಯಾ ಹೆಸರಿನಲ್ಲಿರುವ ಟ್ರಸ್ಟ್‌ವೊಂದರ ಮೂಲಕ ನಡೆಯುತ್ತಿರುವುದು ಸಮನ್ಸ್‌ಗೆ ಕಾರಣವಾಗಿದೆ.

Advertisement

Udayavani is now on Telegram. Click here to join our channel and stay updated with the latest news.

Next