Advertisement

ಅಕ್ರಮ ಗಣಿಗಾರಿಕೆ ಪ್ರಕರಣ:ನ.3ಕ್ಕೆ ವಿಚಾರಣೆಗೆ ಹಾಜರಾಗಿ-ಜಾರ್ಖಂಡ್ ಸಿಎಂ ಸೋರೆನ್ ಗೆ ಸಮನ್ಸ್

10:22 AM Nov 02, 2022 | Team Udayavani |

ನವದೆಹಲಿ: ಅಕ್ರಮ ಗಣಿಗಾರಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ನವೆಂಬರ್ 3ರಂದು ವಿಚಾರಣೆಗೆ ಹಾಜರಾಗುವಂತೆ ಜಾರ್ಖಂಡ್ ಮುಖ್ಯಮಂತ್ರಿ ಹೇಮಂತ್ ಸೋರೆನ್ ಗೆ ಜಾರಿ ನಿರ್ದೇಶನಾಲಯ ಬುಧವಾರ(ನ.02) ಸಮನ್ಸ್ ಜಾರಿ ಮಾಡಿದ್ದು, ಇದರಿಂದ ಸೋರೆನ್ ಸಂಕಷ್ಟಕ್ಕೆ ಸಿಲುಕಿದಂತಾಗಿದೆ.

Advertisement

ಇದನ್ನೂ ಓದಿ:ಚಿಕ್ಕೋಡಿ:  ಕರ್ನಾಟಕ ರತ್ನ ಪುನೀತ್ ರಾಜಕುಮಾರ್ ಪುತ್ಥಳಿ ಅನಾವರಣ

ಎಎನ್ ಐ ವರದಿ ಪ್ರಕಾರ, ಪ್ರಕರಣದ ಕುರಿತು ವಿಚಾರಣೆ ನಡೆಸುವ ನಿಟ್ಟಿನಲ್ಲಿ ನ.03ರಂದು ಇ.ಡಿ ಕಚೇರಿಗೆ ಹಾಜರಾಗುವಂತೆ ಸಿಎಂ ಸೋರೆನ್ ಗೆ ಸಮನ್ಸ್ ನೀಡಲಾಗಿದೆ ಎಂದು ತಿಳಿಸಿದೆ.

ಜಾರ್ಖಂಡ್ ರಾಜಧಾನಿ ರಾಂಚಿಯಲ್ಲಿರುವ ಜಾರಿ ನಿರ್ದೇಶನಾಲಯದ ಪ್ರಾದೇಶಿಕ ಕಚೇರಿಗೆ ಗುರುವಾರ ಹಾಜರಾಗುವಂತೆ ಸೂಚಿಸಿದೆ. ಹಣಕಾಸು ವರ್ಗಾವಣೆ ತಡೆ ಕಾಯ್ದೆ(ಪಿಎಂಎಲ್ ಎ)ಯಡಿ ಪ್ರಶ್ನಿಸಲಿದ್ದು, ಈ ಸಂದರ್ಭದಲ್ಲಿ ಸೋರೆನ್ ಹೇಳಿಕೆಯನ್ನು ದಾಖಲು ಮಾಡಿಕೊಳ್ಳಲಾಗುವುದು ಎಂದು ಜಾರಿ ನಿರ್ದೇಶನಾಲಯ ತಿಳಿಸಿದೆ.

ಅಕ್ರಮ ಗಣಿಗಾರಿಕೆ ಪ್ರಕರಣದಲ್ಲಿ ಈವರೆಗೆ ಒಂದು ಸಾವಿರ ಕೋಟಿಗೂ ಅಧಿಕ ವಹಿವಾಟು ನಡೆದಿರುವುದಾಗಿ ಜಾರಿ ನಿರ್ದೇಶನಾಲಯ ಆರೋಪಿಸಿದ್ದು, ಈಗಾಗಲೇ ಪ್ರಕರಣದಲ್ಲಿ ಸೋರೆನ್ ನಿಕಟವರ್ತಿ, ಶಾಸಕ ಪಂಕಜ್ ಮಿಶ್ರಾ ಸೇರಿದಂತೆ ಮೂವರನ್ನು ಬಂಧಿಸಲಾಗಿದೆ.

Advertisement
Advertisement

Udayavani is now on Telegram. Click here to join our channel and stay updated with the latest news.

Next