Advertisement

ಟಿಎಂಸಿ ಸಂಸದ ಅಭಿಷೇಕ್ ಬ್ಯಾನರ್ಜಿ ಪತ್ನಿಗೆ ಇ.ಡಿ ಸಮನ್ಸ್  

03:27 PM Aug 28, 2021 | Team Udayavani |

ಕೋಲ್ಕತ್ತಾ : ತೃಣ ಮೂಲ ಕಾಂಗ್ರೆಸ್ ಸಂಸದ ಹಾಗೂ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರ ಅಳಿಯ ಅಭಿಷೇಕ್ ಬ್ಯಾನರ್ಜಿ ಅವರ ಪತ್ನಿ ರುಜಿರಾ ಅವರಿಗೆ ಇ.ಡಿ ( ಜಾರಿ ನಿರ್ದೇಶನಾಲಯ) ವಿಚಾರಣೆಗೆ ಹಾಜರಾಗುವಂತೆ ನೋಟಿಸ್ ನೀಡಿದೆ.

Advertisement

ಕಲ್ಲಿದ್ದಲು ಹಗರಣದ ವೇಳೆ ನಡೆದ ಅಕ್ರಹ ಹಣ ವರ್ಗಾವಣೆಯ ತನಿಖೆ ಚುರುಕು ಪಡೆದುಕೊಂಡಿದ್ದು, ಈಗಾಗಲೇ ಅಭಿಷೇಕ್ ಬ್ಯಾನರ್ಜಿ ಅವರಿಗೂ ನೋಟಿಸ್ ನೀಡಿರುವ ಇ.ಡಿ  ಸೆಪ್ಟೆಂಬರ್ 6 ರಂದು ವಿಚಾರಣೆಗೆ ಹಾಜರಾಗುವಂತೆ ಸೂಚಿಸಿದೆ. ಅದರಂತೆ ಅವರ ಪತ್ನಿ ರುಜಿರಾಗೂ  ಶನಿವಾರ (ಆ.27) ನೋಟಿಸ್ ಬಂದಿದ್ದು, ಸೆಪ್ಟೆಂಬರ್ 3 ರಂದು ವಿಚಾರಣೆಗೆ ಬರಬೇಕೆಂದು ತಿಳಿಸಿದೆ.

ಅಭಿಷೇಕ್ ಬ್ಯಾನರ್ಜಿ ಅವರ ವಕೀಲ ಸಂಜಯ್ ಬಸು ಅವರು ಸೆಪ್ಟೆಂಬರ್ 3 ರಂದು ವಿಚಾರಣೆಗೆ ಹಾಜರಾಗುವಂತೆ ಸಮನ್ಸ್ ಬಂದಿದೆ. ಇನ್ನುಳಿದಂತೆ ಇಬ್ಬರು ಹಿರಿಯ ಪೊಲೀಸ್ ಅಧಿಕಾರಿಗಳಾದ ಶ್ಯಾಮ್ ಸಿಂಗ್ ಹಾಗೂ ಜ್ಞಾನವಂತ ಸಿಂಗ್ ಅವರಿಗೆ ಸೆಪ್ಟೆಂಬರ್ 8 ಹಾಗೂ 9 ರಂದು ವಿಚಾರಣೆಗೆ ಹಾಜರಾಗುವಂತೆ ಇ.ಡಿ ಸಮನ್ಸ್ ಜಾರಿ ಮಾಡಿದೆ.

2020ರ ನವೆಂಬರ್‌ನಲ್ಲಿ ಈಸ್ಟರ್ನ್ ಕೋಲ್‌ಫೀಲ್ಡ್ಸ್ ಲಿಮಿಟೆಡ್ ಗಣಿಗಳಿಗೆ ಸಂಬಂಧಿಸಿದ ಬಹುಕೋಟಿ ಕಲ್ಲಿದ್ದಲು ಹಗರಣಕ್ಕೆ ಸಂಬಂಧಿಸಿದಂತೆ ಅಭಿಷೇಕ್ ಬ್ಯಾನರ್ಜಿ ಅವರ ವಿರುದ್ಧ ಕೇಂದ್ರೀಯ ತನಿಖಾ ಸಂಸ್ಥೆ(ಸಿಬಿಐ) ಎಫ್‌ಐಆರ್ ದಾಖಲಿಸಿತ್ತು. ನಂತರ ಪಿಎಂಎಲ್ಎ ಕಾಯ್ದೆ ಅಡಿ ಟಿಎಂಸಿ ನಾಯಕನ ವಿರುದ್ಧ ಇಡಿ ಕೇಸ್ ದಾಖಲಿಸಿದೆ.

Advertisement

Udayavani is now on Telegram. Click here to join our channel and stay updated with the latest news.

Next