Advertisement

ವಿದ್ಯಾಗಮ ಅನುಷ್ಠಾನ ಪರಿಶೀಲನೆಗೆ ಮಾಗಡಿ ತಾಲೂಕಿಗೆ ಭೇಟಿ ನೀಡಿದ ಸಚಿವ ಸುರೇಶ್ ಕುಮಾರ್

02:03 PM Sep 04, 2020 | keerthan |

ಬೆಂಗಳೂರು: ಮಾಗಡಿ ತಾಲೂಕಿನ ಹಲವೆಡೆ ನಡೆಯುತ್ತಿರುವ ವಿದ್ಯಾಗಮ ಕಲಿಕಾ ಕೇಂದ್ರಗಳಿಗೆ ಶಿಕ್ಷಣ ಸಚಿವ ಸುರೇಶ್‌ಕುಮಾರ್ ಅವರು ಭೇಟಿ ನೀಡಿ ಪರಿಶೀಲನೆ ನಡೆಸಿದರು.

Advertisement

ಮಾಗಡಿ ತಾಲ್ಲೂಕಿನ ಕಲ್ಲೂರು, ವರದೇನಹಳ್ಳಿ, ಬಾಚೇನಹಳ್ಳಿ, ತಗಚುಗುಪ್ಪೆ, ಬಂಟರಕುಪ್ಪೆ ಕಾಲೋನಿ, ಬಂಟರಕುಪ್ಪೆ, ಬೆಳಗುಂಬ ಮತ್ತು ಮಾಗಡಿ ಈ ಸ್ಥಳಗಳ ಆಯ್ದೆಡೆ ನಡೆಯುತ್ತಿರುವ ವಿದ್ಯಾಗಮ ಕಲಿಕಾ ಕೇಂದ್ರಗಳಿಗೆ ಅನಿರೀಕ್ಷಿತ ಭೇಟಿ ನೀಡಿದ ಸಚಿವರು ಮಕ್ಕಳ ಕಲಿಕೆಯನ್ನು ಪರಾಮರ್ಶಿಸಿದರು.

“ಮಕ್ಕಳೊಂದಿಗೆ ಕಲೆತು ಮಾತನಾಡಿದೆ. ಅವರೇನು ಕಲಿಯುತ್ತಿದ್ದಾರೆಂದು ವಿಚಾರಿಸಿದೆ. ಕೆಲ ಪ್ರಶ್ನೆಗಳನ್ನು ಸಹ ಕೇಳಿದೆ. ಕೋವಿಡ್-19 ಕುರಿತು ತೆಗೆದುಕೊಳ್ಳಬೇಕಾದ ಎಚ್ಚರಿಕೆ ಕ್ರಮಗಳ ಬಗ್ಗೆ ಅವರಲ್ಲಿನ ಮಾಹಿತಿ ಪರೀಕ್ಷಿಸಿದೆ. ಎಲ್ಲಾ ಮಕ್ಕಳು ಮಾಸ್ಕ್ ಧರಿಸಿದ್ದು, ಶಾರೀರಿಕ ಅಂತರ ಕಾಪಾಡಿಕೊಂಡಿದ್ದು ಗಮನಾರ್ಹ. ಮಕ್ಕಳೆಲ್ಲಾ ಖುಷಿಯಾಗಿ ಇದ್ದದ್ದನ್ನು ಕಂಡು ಸಂತಸವಾಯಿತು.” ಎಂದು ಅವರು ತಮ್ಮ ಸಾಮಾಜಿಕ ಜಾಲತಾಣದಲ್ಲಿ ಬರೆದುಕೊಂಡಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next