Advertisement

3 ವರ್ಷಗಳಲ್ಲಿ ಶಿಕ್ಷಣ ಅನುದಾನ ಬಳಕೆ ಇಷ್ಟು…

04:07 PM Jun 23, 2017 | Team Udayavani |

ಉಡುಪಿ: ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣಕ್ಕಾಗಿ 2013-14ರಿಂದ 2016-17ನೇ ಸಾಲಿನವರೆಗೆ 35,000 ಕೋಟಿ ರೂ. ಅನುದಾನ ಹಂಚಿಕೆಯಾಗಿದ್ದು, ಇದರಲ್ಲಿ 33,000 ಕೋಟಿ ರೂ. ಅನುದಾನ ಮಾತ್ರ ಬಳಕೆಯಾಗಿದೆ ಎಂದು ಸಚಿವ ತನ್ವೀರ್‌ ಸೇಠ್ ಅವರು ವಿಧಾನ ಪರಿಷತ್ತಿನಲ್ಲಿ ಕೋಟ ಶ್ರೀನಿವಾಸ ಪೂಜಾರಿ ಅವರಿಗೆ ತಿಳಿಸಿದರು.

Advertisement

ರಾಜ್ಯದಲ್ಲಿ ಆರ್‌ಟಿಇ ಕಾಯ್ದೆಯಡಿ 2012-13ರಿಂದ 2016-17ರ ವರೆಗೆ 685 ಕೋಟಿ ರೂ. ಖರ್ಚಾಗಿದೆ. 2016-17ನೇ ಶೈಕ್ಷಣಿಕ ಸಾಲಿನಲ್ಲಿ ಲಭ್ಯವಿದ್ದ ಸೀಟುಗಳ ಸಂಖ್ಯೆ 1,15,237 ಇದ್ದು, ದಾಖಲಾದ ವಿದ್ಯಾರ್ಥಿಗಳ ಸಂಖ್ಯೆ 97,991. ಪ್ರವೇಶ ಪ್ರಕ್ರಿಯೆಗಾಗಿ ಹೊಸದಾಗಿ ತಂತ್ರಾಂಶ ಅಭಿವೃದ್ಧಿ ಪಡಿಸಲಾಗಿದೆ. ಅರ್ಜಿದಾರರಿಗೆ ಯಾವುದೇ ರೀತಿಯ ಪಕ್ಷಪಾತ ಮಾಡದೆ ಪಾರದರ್ಶಕ ರೀತಿಯಲ್ಲಿ ಪತ್ರಿಕಾ ಹಾಗೂ ವಿದ್ಯುನ್ಮಾನ ಮಾಧ್ಯಮಗಳ ಸಮ್ಮುಖದಲ್ಲಿ ಲಾಟರಿ ಪ್ರಕ್ರಿಯೆ ನಡೆಸಲಾಗಿದೆ. ಕಳೆದ 3 ವರ್ಷದಲ್ಲಿ ಯಾವುದೇ ಸರಕಾರಿ ಪ್ರಾಥಮಿಕ ಮತ್ತು ಪ್ರೌಢಶಾಲೆಗಳನ್ನು ಮುಚ್ಚಿಲ್ಲ. 

ಸರಕಾರಿ ಶಾಲೆಯಲ್ಲಿ ಆಮೂಲಾಗ್ರ ಬದಲಾವಣೆ ತಂದು ಹೆಚ್ಚು ಹೆಚ್ಚು ಮಕ್ಕಳು ಸರಕಾರಿ ಶಾಲೆಗೆ ಸೇಪರ್ಡೆಗೊಳಿಸುವ ನಿಟ್ಟಿನಲ್ಲಿ ವಿದ್ಯಾವಿಕಾಸ ಯೋಜನೆಯಡಿ ಮಕ್ಕಳಿಗೆ ಉಚಿತ ಪಠ್ಯಪುಸ್ತಕ, ಸಮವಸ್ತ್ರ, ಶೂ ಮತ್ತು ಸಾಕ್ಸ್‌ ಎಂಟನೇ ತರಗತಿ ಮಕ್ಕಳಿಗೆ ಉಚಿತ ಬೈಸಿಕಲ್‌ ಮೊದಲಾದ ಪ್ರೋತ್ಸಾಹ, ಮಧ್ಯಾಹ್ನದ ಬಿಸಿಯೂಟ, ಹಾಲು ಮುಂತಾದ ಕಾರ್ಯಕ್ರಮಗಳನ್ನು ಕೈಗೊಳ್ಳಲಾಗುತ್ತಿದೆ ಎಂದು ಸಚಿವರು ಉತ್ತರಿಸಿದರು. 

Advertisement

Udayavani is now on Telegram. Click here to join our channel and stay updated with the latest news.

Next