Advertisement

ಶಿಕ್ಷಣ ಕೇವಲ ಒಂದು ಜಾತಿಗೆ ಸೀಮಿತವಾದದ್ದು ಅಲ್ಲ: ಸಿದ್ದರಾಮಯ್ಯ

10:08 PM May 31, 2022 | Team Udayavani |

ಬೆಂಗಳೂರು: ಶಿಕ್ಷಣ ಕೇವಲ ಒಂದು ಜಾತಿಗೆ ಸೀಮಿತವಾದದ್ದು ಅಲ್ಲ. ಹೀಗಾಗಿ ದಲಿತರು, ಹಿಂದುಳಿದ ವರ್ಗದವರು, ಮಹಿಳೆಯರು ಸೇರಿದಂತೆ ಎಲ್ಲ ಸಮುದಾಯದವರು ಉತ್ತಮ ಶಿಕ್ಷಣ ಪಡೆದು ಸಾಮಾಜಿಕ, ಆರ್ಥಿಕ ಮತ್ತು ರಾಜಕೀಯ ಕ್ಷೇತ್ರ ಸೇರಿದಂತೆ ಇನ್ನಿತರ ಕ್ಷೇತ್ರಗಳಲ್ಲಿ ಸಾಧನೆ ತೋರಬೇಕು ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ ಹೇಳಿದ್ದಾರೆ.

Advertisement

ರವೀಂದ್ರಕಲಾ ಕ್ಷೇತ್ರದಲ್ಲಿ ಮಂಗಳವಾರ ಕರ್ನಾಟಕ ರಾಜ್ಯ ಅಹಲ್ಯಾ ಬಾಯಿ ಹೋಳ್ಕರ್‌ ಮಹಿಳಾ ಸಂಘ ಹಮ್ಮಿಕೊಂಡಿದ್ದ 297ನೇ ಅಹಲ್ಯಾ ಬಾಯಿ ಹೋಳ್ಕರ್‌ ಜನ್ಮದಿನೋತ್ಸವ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಶಿಕ್ಷಣ ಕಲಿತರೆ ಮಾತ್ರ ನಾವು ಸ್ವಾಭಿಮಾನ ಗೌರವದಿಂದ ಬದುಕಲು ಸಾಧ್ಯ. ಹೆಣ್ಣಾಗಲಿ, ಗಂಡಾಗಲಿ ಸಮಾಜಕ್ಕೆ ಹೊರೆಯಾಗದೆ ಆಸ್ತಿಯಾಗಬೇಕು ಎಂದು ತಿಳಿಸಿದರು.

ಆಂಧ್ರಪ್ರದೇಶದ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆ ಉಷಾಶ್ರೀ ಚರಣ್‌, ರಾಜ್ಯ ಅಹಲ್ಯಾಬಾಯಿ ಹೋಳ್ಕರ್‌ ಮಹಿಳಾ ಸಂಘದ ರಾಜ್ಯಾಧ್ಯಕ್ಷೆ ಪ್ರಭಾವತಿ ಮತ್ತಿತರರಿದ್ದರು.

Advertisement

Udayavani is now on Telegram. Click here to join our channel and stay updated with the latest news.

Next