Advertisement

ಆದಷ್ಟು ಬೇಗ ಪಠ್ಯ ಪುಸ್ತಕ ಪರಿಷ್ಕರಣೆ: ಶಿಕ್ಷಣ ಸಚಿವ ನಾಗೇಶ್

12:50 PM Jun 08, 2022 | Team Udayavani |

ಧಾರವಾಡ: ಪಠ್ಯ, ಪುಸ್ತಕಗಳಲ್ಲಾಗಿರುವ ಲೋಪ ದೋಷಗಳನ್ನು ಆದಷ್ಟು ಬೇಗ ಸರಿಪಡಿಸಲಾಗುವುದು. ಅದರಲ್ಲಾದ ತಪ್ಪುಗಳನ್ನು ನಾವು ಒಪ್ಪಿಕೊಳ್ಳುತ್ತೇವೆ ಎಂದು ಶಿಕ್ಷಣ ಸಚಿವ ಬಿ.ಸಿ.ನಾಗೇಶ್ ಹೇಳಿದರು.

Advertisement

ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಪಠ್ಯ, ಪುಸ್ತಕ ಪರಿಷ್ಕರಣೆ ಮಾಡುವಾಗ ದೊಡ್ಡ ತಪ್ಪು ಮಾಡಬಾರದು. ಇಂತದೊಂದು ಜವಾಬ್ದಾರಿ ಸಿಕ್ಕಾಗ ಜಾಗರೂಕರಾಗಿರಬೇಕು. ಈ ರೀತಿಯ ತಪ್ಪು ಆಗಿರುವುದ್ದನ್ನು ಗಮನಿಸಿ ಅದರ ಮರು ಪರಿಷ್ಕರಣೆಗೆ ನಾವು ಮುಂದಾಗಿದ್ದೇವೆ ಎಂದರು.

ಬಸವಣ್ಣನ ಪಠ್ಯದಲ್ಲಿ ಹಲವಾರು ಹೊಸ ವಿಚಾರಗಳನ್ನು ಅಳವಡಿಸಲಾಗಿದೆ. ಈ ರೀತಿಯ ಲೋಪಗಳು ಆದಾಗ ಯಾರೇ ಅದನ್ನು ಕಂಡು ಹಿಡಿದರೆ ಅದನ್ನು ಸರಿಪಡಿಸುತ್ತೇವೆ. ನಾವು ತಪ್ಪನ್ನು ಮುಚ್ಚಿಡುವುದಿಲ್ಲ. ಸದ್ಯ ನಡೆಯುತ್ತಿರುವ ವಾದ, ವಿವಾದಗಳು ಮಕ್ಕಳ ಮೇಲೆ ಪರಿಣಾಮ ಬೀರುವುದು ಬೇಡ. ಹೀಗಾಗಿ ಪಠ್ಯದಲ್ಲಾದ ತಪ್ಪುಗಳನ್ನು ಸರಿಪಡಿಸುವ ಕೆಲಸ ಮಾಡುತ್ತಿದ್ದೇವೆ ಎಂದರು.

ಇದನ್ನೂ ಓದಿ: ಕೋಮುವಾದಿ ಬಿಜೆಪಿ ಸೋಲಿಸಲು ಜೆಡಿಎಸ್ ಕೈ ಜೋಡಿಸಲಿ: ಸಿದ್ದರಾಮಯ್ಯ

ಈಗಾಗಲೇ ಶೇ.84 ರಷ್ಟು ಪರಿಷ್ಕೃತ ಪಠ್ಯ, ಪುಸ್ತಕಗಳು ಬಿಇಓ ಕಚೇರಿ ಸೇರಿವೆ. ಇನ್ನೊಂದು ತಿಂಗಳಲ್ಲಿ ಎಲ್ಲಾ ಪುಸ್ತಕಗಳನ್ನು ಕೊಡುವ ಹಾಗೆ ಮಾಡುತ್ತೇವೆ. ಪಠ್ಯದಲ್ಲಿ ಯಾವುದೇ ಸಾಹಿತಿಗಳನ್ನು ನಾವು ಕಡೆಗಣಿಸಿಲ್ಲ. ಕಾಂಗ್ರೆಸ್ ಅವಧಿಯಲ್ಲಿ ಮಹರಾಜರ ಕಥೆಗಳನ್ನು ತೆಗೆದು ಟಿಪ್ಪು ಸುಲ್ತಾನ್ ಕಥೆ ಹಾಕಲಾಗಿತ್ತು. ಸಿಂಧೂ ಸಂಸ್ಕೃತಿ ಕಿತ್ತು ಹಾಕಿ ನೆಹರೂ ಪಾಠ ಹಾಕಲಾಗಿತ್ತು. ಇಸ್ಲಾಂ ಮತ್ತು ಕ್ರೈಸ್ತರನ್ನು ಮಾತ್ರ ಪುಸ್ತಕದಲ್ಲಿ ತರಲಾಗಿತ್ತು. ಇಂತಹ ನೂರು ಉದಾಹರಣೆಗಳಿವೆ ಎಂದರು.

Advertisement

ದೇವನೂರು ಮಹಾದೇವನವರು ಪಠ್ಯದಲ್ಲಿ ತಪ್ಪುಗಳಾಗಿದ್ದನ್ನು ನಮಗೆ ಹೇಳಬಹುದಿತ್ತು. ಆದರೆ, ಪುಸ್ತಕ ಬಿಡುಗಡೆಯಾದ ಮೇಲೆ ಹೇಳಿದ್ದು ನೋವಾಗಿದೆ. ಬರಗೂರು ರಾಮಚಂದ್ರಪ್ಪನವರ ಕಾಲದಲ್ಲೂ ಪಠ್ಯದಲ್ಲಿ ತಪ್ಪುಗಳಾಗಿದ್ದವು. ಸಿದ್ದರಾಮಯ್ಯ ಸರ್ಕಾರ ಇದ್ದಾಗಲೇ ನಾಡಗೀತೆಗೆ ಅವಮಾನ ಮಾಡಲಾಗಿತ್ತು ಎಂದರು.

ಈ ಸಾರಿ ಅತಿಥಿ ಶಿಕ್ಷಕರನ್ನು ಶಿಕ್ಷಕರನ್ನಾಗಿ ತೆಗೆದುಕೊಳ್ಳುತ್ತಿದ್ದೇವೆ. ಬಿಜೆಪಿ ಸರ್ಕಾರದ ಅವಧಿಯಲ್ಲಿ 27 ಸಾವಿರ ಅತಿಥಿ ಶಿಕ್ಷಕರನ್ನು ತೆಗೆದುಕೊಂಡಿದ್ದೇವೆ ಎಂದರು.

Advertisement

Udayavani is now on Telegram. Click here to join our channel and stay updated with the latest news.

Next