Advertisement

Katapady ಶ್ರೀ ವಿಶ್ವನಾಥ ಕ್ಷೇತ್ರಕ್ಕೆ ಶಿಕ್ಷಣ ಸಚಿವ ಮಧು ಬಂಗಾರಪ್ಪ ಭೇಟಿ

09:25 AM Dec 04, 2023 | Team Udayavani |

ಕಟಪಾಡಿ: ಬಿಲ್ಲವ, ಈಡಿಗ ಸಹಿತ 26 ಪಂಗಡಗಳ ರಾಜ್ಯಮಟ್ಟದ ಬೃಹತ್ ಜಾಗೃತ ಸಮಾವೇಶದ ಕುರಿತು ಪೂರ್ವಭಾವಿ ಸಭೆ ನಡೆಯಿತು.

Advertisement

ಬೆಂಗಳೂರಿನ ಅರಮನೆ ಮೈದಾನದಲ್ಲಿ ಡಿ.10ರಂದು ನಡೆಯುವ ಕರ್ನಾಟಕ ಪ್ರದೇಶ ಆರ್ಯ ಈಡಿಗರ ಸಂಘದ ಅಮೃತಮಹೋತ್ಸವ ಆಚರಣೆ ಹಾಗೂ ಬಿಲ್ಲವ, ಈಡಿಗ, ನಾಮಧಾರಿ, ಸಹಿತ 26 ಪಂಗಡಗಳ ಬೃಹತ್ ಜಾಗೃತ ಸಮಾವೇಶ ನಡೆಯಲಿದೆ.

ಮಾಜಿ ಸಚಿವ ವಿನಯ ಕುಮಾರ್ ಸೊರಕೆ, ಕಟಪಾಡಿ ಶ್ರೀ ವಿಶ್ವನಾಥ ಕ್ಷೇತ್ರದ ಕ್ಷೇತ್ರಾಡಳಿತ ಮಂಡಳಿ ಅಧ್ಯಕ್ಷ ಬಿ.ಎನ್. ಶಂಕರ ಪೂಜಾರಿ, ರಾಷ್ಟ್ರೀಯ ಬಿಲ್ಲವ ಮಹಾಮಂಡಲದ ಅಧ್ಯಕ್ಷ ರಾಜಶೇಖರ್ ಕೋಟ್ಯಾನ್, ನಾರಾಯಣಗುರು ವಿಚಾರ ವೇದಿಕೆಯ ರಾಜ್ಯಾಧ್ಯಕ್ಷ ಸತ್ಯಜಿತ್ ಸುರತ್ಕಲ್, ಪ್ರಮುಖರಾದ ಡಿ.ಆರ್. ರಾಜು ಕಾರ್ಕಳ, ಕಟಪಾಡಿ ಶಂಕರ ಪೂಜಾರಿ, ಅಶೋಕ್ ಕುಮಾರ್ ಕೊಡವೂರು, ಕ್ಷೇತ್ರಾಡಳಿತ ಮಂಡಳಿ ಉಪಾಧ್ಯಕ್ಷರಾದ ಶ್ರೀಕರ ಅಂಚನ್, ಆನಂದ ಮಾಬಿಯಾನ್, ಜಿಲ್ಲೆಯ ವಿವಿಧ ಸಂಘ ಸಂಸ್ಥೆಗಳ ಮುಖಂಡರು, ಸಮಾಜ ಬಾಂಧವರು ಸಭೆಯಲ್ಲಿ ಪಾಲ್ಗೊಂಡಿದ್ದರು.

Advertisement

Udayavani is now on Telegram. Click here to join our channel and stay updated with the latest news.

Next