Advertisement

ಕನ್ನಡ ಶಾಲೆಯಲ್ಲಿ ತಮಿಳುನಾಡು ಮಕ್ಕಳ ವಿದ್ಯಾಭ್ಯಾಸ

08:12 PM Oct 31, 2022 | Team Udayavani |

ಮಾಸ್ತಿ: ಮಾಲೂರು ತಾಲೂಕಿನ ಮಾಸ್ತಿ ಹೋಬಳಿ ದಿನ್ನಹಳ್ಳಿ ಗ್ರಾಪಂ ವ್ಯಾಪ್ತಿ ಹೊಸಮನೆಗಳು ಗ್ರಾಮದ ಸರ್ಕಾರಿ ಕನ್ನಡ ಕಿರಿಯ ಪ್ರಾಥಮಿಕ ಶಾಲೆಗೆ ತಮಿಳುನಾಡಿನ 5 ಮಕ್ಕಳು ಕನ್ನಡ ಕಲಿಯಲು ಬರುತ್ತಿದ್ದು, ಇದು ಭಾಷಾ ಸಾಮರಸ್ಯಕ್ಕೆ ಸಾಕ್ಷಿಯಾಗಿದೆ.

Advertisement

ದಿನ್ನಹಳ್ಳಿ ಗ್ರಾಪಂ ಗಡಿ ಭಾಗದಲ್ಲಿರುವ ಹೊಸಮನೆಗಳು ಗ್ರಾಮದಲ್ಲಿನ ಸರ್ಕಾರಿ ಕನ್ನಡ ಕಿರಿಯ ಪ್ರಾಥಮಿಕ ಶಾಲೆಯಲ್ಲಿ ಒಟ್ಟು 7 ಮಂದಿ ವಿದಾರ್ಥಿಗಳು ವ್ಯಾಸಂಗ ಮಾಡುತ್ತಿದ್ದಾರೆ. ಶಾಲೆಗೆ ಕೂಗಳತೆ ದೂರದಲ್ಲಿರುವ ನೆರೆಯ ತಮಿಳುನಾಡು ರಾಜ್ಯದ ಹಳ್ಳಿಯಿಂದ 5 ಮಂದಿ ವಿದ್ಯಾರ್ಥಿಗಳು ಗ್ರಾಮದ ಕನ್ನಡ ಶಾಲೆಗೆ ಸೇರಿ, ಕನ್ನಡ ಕಲಿಯುತ್ತಿರುವುದು ಎರಡು ರಾಜ್ಯಗಳ ಬಾಂಧವ್ಯಕ್ಕೆ ಕಾರಣವಾಗಿದೆ.

ಹೊಸಮನೆಗಳು ಶಾಲೆಗೆ ತಮಿಳುನಾಡು ರಾಜ್ಯದ ಕೃಷ್ಣಗಿರಿ ಜಿಲ್ಲೆ ಹೊಸೂರು ತಾಲೂಕಿನ “ಚಾಪರಪಲ್ಲಿ’ ಗ್ರಾಮದ ಐದು ಮಂದಿ ವಿದ್ಯಾರ್ಥಿಗಳು ಕನ್ನಡ ಕಲಿಯಲು ಬರುತ್ತಿದ್ದಾರೆ. ಚಾಪರಪಲ್ಲಿಯಲ್ಲಿ ಶಾಲೆ ಇಲ್ಲ ಎಂದಲ್ಲ.

ಅಲ್ಲಿಯೂ ತಮಿಳು ಶಾಲೆ ಇದ್ದರೂ ಕನ್ನಡ ಶಾಲೆಯಲ್ಲಿ ಕಲಿಯಬೇಕೆನ್ನುವ ದೃಷ್ಟಿಯಿಂದಲೇ ಇಲ್ಲಿಗೆ ಬರುತ್ತಿದ್ದಾರೆ. 1ನೇ ತರಗತಿಗೆ ಜಿ.ಕುಮಾರ್‌, 2ನೇ ತರಗತಿಗೆ ಶಂಕರನ್‌ ಹಾಗೂ ಪ್ರಜ್ವಲ್‌, 3ನೇ ತರಗತಿಗೆ ನಿತೀನ್‌ ಹಾಗೂ 5ನೇ ತರಗತಿಗೆ ದೀಪಾ ಎಂಬ ವಿದ್ಯಾರ್ಥಿಗಳು ತಮಿಳುನಾಡಿನಿಂದ ಕನ್ನಡ ಕಿರಿಯ ಪ್ರಾಥಮಿಕ ಶಾಲೆಗೆ ಬರುತ್ತಿದ್ದಾರೆ. ಕನ್ನಡವನ್ನು ಸ್ಪಷ್ಟವಾಗಿ ಬರೆಯಲು, ಓದಲು ಕಲಿತಿದ್ದಾರೆ ಎಂಬುದು ವಿಶೇಷ.

Advertisement

Udayavani is now on Telegram. Click here to join our channel and stay updated with the latest news.

Next