Advertisement

ಗೆಲುವಿನ ಎಫೆಕ್ಟ್ : 4 ಉಪ ಚುನಾವಣೆ ಫಿಕ್ಸ್‌

09:56 PM Jun 04, 2024 | Team Udayavani |

ಬೆಂಗಳೂರು: ಈ ಬಾರಿಯ ಲೋಕಸಭೆ ಚುನಾವಣೆಯಲ್ಲಿ ಮೂವರು ಶಾಸಕರು ಹಾಗೂ ಒಬ್ಬ ವಿಧಾನಪರಿಷತ್‌ ಸದಸ್ಯ ಗೆದ್ದಿದ್ದು ಇದೀಗ ಆ ಸ್ಥಾನಗಳಿಗೆ ಉಪ ಚುನಾವಣೆ ಎದುರಾಗಲಿದೆ.

Advertisement

ಶಿಗ್ಗಾಂವಿ ಕ್ಷೇತ್ರದಿಂದ ಶಾಸಕರಾಗಿರುವ ಬಸವರಾಜ ಬೊಮ್ಮಾಯಿ ಅವರು ಹಾವೇರಿ ಲೋಕಸಭೆ ಕ್ಷೇತ್ರದಿಂದ ಗೆದ್ದಿದ್ದಾರೆ. ಅದೇ ರೀತಿ ಚನ್ನಪಟ್ಟಣದಿಂದ ಶಾಸಕರಾಗಿರುವ ಎಚ್‌.ಡಿ. ಕುಮಾರಸ್ವಾಮಿ ಮಂಡ್ಯದಿಂದ ಗೆದ್ದಿದ್ದಾರೆ.

ಸಂಡೂರು ಶಾಸಕ ಇ. ತುಕರಾಮ್‌ ಬಳ್ಳಾರಿ ಕ್ಷೇತ್ರದಿಂದ ಗೆದ್ದಿದ್ದಾರೆ. ಸ್ಥಳೀಯ ಸಂಸ್ಥೆಗಳಿಂದ ವಿಧಾನಪರಿಷತ್‌ ಸದಸ್ಯರಾಗಿ ಆಯ್ಕೆಯಾಗಿ, ಸದ್ಯ ಪ್ರತಿಪಕ್ಷ ನಾಯಕನ ಜವಾಬ್ದಾರಿ ನಿರ್ವಹಿಸುತ್ತಿರುವ ಕೋಟ ಶ್ರೀನಿವಾಸ ಪೂಜಾರಿಯವರು ಉಡುಪಿ-ಚಿಕ್ಕಮಗಳೂರು ಕ್ಷೇತ್ರದಿಂದ ಸಂಸತ್ತು ಪ್ರವೇಶಿಸಿದ್ದಾರೆ.

ಹಾಗಾಗಿ, ಶಿಗ್ಗಾಂವಿ, ಚನ್ನಪಟ್ಟಣ, ಸಂಡೂರು ವಿಧಾನಸಭಾ ಕ್ಷೇತ್ರಗಳಿಗೆ ಮತ್ತು ಉಡುಪಿ-ದಕ್ಷಿಣ ಕನ್ನಡ ಸ್ಥಳೀಯ ಸಂಸ್ಥೆಗಳ ಕ್ಷೇತ್ರಕ್ಕೆ ಉಪ ಚುನಾವಣೆ ನಡೆಯಬೇಕಾಗುತ್ತದೆ. ನಿಯಮದಂತೆ ತೆರವಾದ 6 ತಿಂಗಳೊಳಗೆ ಚುನಾವಣೆ ನಡೆಯಬೇಕು

 

Advertisement
Advertisement

Udayavani is now on Telegram. Click here to join our channel and stay updated with the latest news.

Next