Advertisement
ಅಕ್ರಮ ಹಣ ವರ್ಗಾವಣೆ ತಡೆ ಕಾಯ್ದೆ (ಪಿಎಂಎಲ್ಎ) ಅಡಿಯಲ್ಲಿ 2014ರವರೆಗೆ 1800 ಕೇಸುಗಳನ್ನು ಇಡಿ ದಾಖಲಿಸಿಕೊಂಡಿತ್ತು. ಆದರೆ ಕೇಂದ್ರದಲ್ಲಿ ನರೇಂದ್ರ ಮೋದಿ ಸರ್ಕಾರ ಅಧಿಕಾರಕ್ಕೆ ಬಂದ ಬಳಿಕ ಇ.ಡಿ 5000ಕ್ಕೂ ಹೆಚ್ಚು ಪ್ರಕರಣಗಳನ್ನು ದಾಖಲಿಸಿಕೊಂಡಿದೆ ಎಂದಿದ್ದಾರೆ.
Related Articles
Advertisement
ತನಿಖಾ ಸಂಸ್ಥೆಗಳು ಸ್ವತಂತ್ರವಾಗಿ ಕೆಲಸ ಮಾಡಲು ಸರ್ಕಾರ ಬಿಡಬೇಕು ಮತ್ತು ಅವರ ರಾಜಕೀಯ ಹಿತಾಸಕ್ತಿಗಳಿಗಾಗಿ ಅವರ ಕೆಲಸಕ್ಕೆ ಅಡ್ಡಿಯಾಗಬಾರದು ಎಂದು ಪ್ರಧಾನಿ ಹೇಳಿದರು.
ಲೋಕಸಭಾ ಚುನಾವಣೆಯ ಬಗ್ಗೆ ಮಾತನಾಡಿದ ಪ್ರಧಾನಿ ಮೋದಿ, 2024ರ ಚುನಾವಣೆಯೂ ಅತ್ಯಂತ ನಿರ್ಣಾಯಕ ಎಂದರು. ಯಾಕೆಂದರೆ ಮೂರು ದಶಕಗಳ ಕಾಲ ಅಸ್ಥಿರ ಸರ್ಕಾರವನ್ನು ಕಂಡಿದ್ದ ದೇಶದ ಮತದಾರರು ಸ್ಥಿರ ಸರ್ಕಾರ ಏನು ಮಾಡಬಹುದು ಎಂದು ನೋಡಿದ್ದಾರೆ ಎಂದರು.
ಇಂತಹ “ಅಸ್ಥಿರ ಸರ್ಕಾರಗಳು” ದೇಶಕ್ಕೆ ಸಾಕಷ್ಟು ಹಾನಿಯನ್ನುಂಟುಮಾಡಿದೆ ಮತ್ತು ಜನರು ತಮ್ಮ ಅನುಭವದ ಆಧಾರದ ಮೇಲೆ ಮತ ಚಲಾಯಿಸುವುದರಿಂದ ನಡೆಯುತ್ತಿರುವ ಸಾರ್ವತ್ರಿಕ ಚುನಾವಣೆಗಳು ಮಹತ್ವದ್ದಾಗಿದೆ ಎಂದು ಪ್ರಧಾನಿ ಹೇಳಿದರು.