ಮನವೊಲಿಸಲು ಯತ್ನಿಸಿದ ನಂತರವೂ ಕೃಷ್ಣ ಅವರು ಸಕಾರಾತ್ಮಕವಾಗಿ ಪ್ರತಿಕ್ರಿಯಿಸದ ಕಾರಣ ಅವರನ್ನು ಪಕ್ಷದಲ್ಲೇ ಉಳಿಸಿಕೊಳ್ಳುವ ಪ್ರಯತ್ನಕ್ಕೆ ಹೈಕ ಮಾಂಡ್ ತಾತ್ಕಾಲಿಕ ವಿರಾಮ ಹಾಕಿದೆ.
Advertisement
ಈ ಹಿನ್ನೆಲೆಯಲ್ಲಿ ಎಸ್. ಎಂ.ಕೃಷ್ಣ ಅವರನ್ನು ಭೇಟಿ ಮಾಡಿ ಮನವೊಲಿಸುವ ಯತ್ನವನ್ನು ಸಿಎಂ ಸಿದ್ದರಾಮಯ್ಯ ಸಹ ಕೈ ಬಿಟ್ಟಿದ್ದಾರೆ.ಕಳೆದ ಒಂದು ವಾರದಿಂದ ಕೃಷ್ಣ ಅವರ ಮೇಲೆ ಪಕ್ಷದಲ್ಲೇ ಇರುವಂತೆ ಒತ್ತಡ ಹೇರುತ್ತಿದ್ದ ಕಾಂಗ್ರೆಸ್ ಮುಖಂಡರು ಈಗ ಒಬ್ಬೊಬ್ಬರೇ ಕೃಷ್ಣ ವಿರುದಟಛಿ ವಾಗ್ಧಾಳಿ ಪ್ರಾರಂಭಿಸಿದ್ದಾರೆ. ಈ ಬೆಳವಣಿಗೆ ನಡುವೆ ಕೆಲವು ಕಾಂಗ್ರೆಸ್ನ ಹಿರಿಯ ಮುಖಂಡರು ಎಸ್.ಎಂ.ಕೃಷ್ಣ ಕಾಂಗ್ರೆಸ್ನಲ್ಲೇ ಇರಬೇಕು. ಅವರು ಪಕ್ಷ ತ್ಯಜಿಸಬಾರದೆಂದು ಹೇಳಿಕೆ ನೀಡುತ್ತಿದ್ದವರು, ಈಗ ರಾಗ ಬದಲಿಸಿ ಕೃಷ್ಣ ಅವರಿಗೆ
ಕಾಂಗ್ರೆಸ್ ಪಕ್ಷ ಎಲ್ಲವನ್ನೂ ಕೊಟ್ಟಿದೆ. ಇನ್ನೂ ಕೊಡಲು ಬಾಕಿ ಏನಿದೆ ಎಂದು ಪ್ರಶ್ನಿಸಿ ಕೃಷ್ಣ ಅವರ ನಡೆಯನ್ನು ಪರಾಮರ್ಶೆಗೆ ಒಳಪಡಿಸಿದ್ದಾರೆ. ಕೃಷ್ಣ ಅವರ ಪರಮಾಪ್ತ, ಹಿರಿಯ ಸಚಿವ ಡಿ.ಕೆ.ಶಿವಕುಮಾರ್ ಹಾಗೂ ಕೆಪಿಸಿಸಿ ಅಧ್ಯಕ್ಷ ಡಾ.ಜಿ.ಪರಮೇಶ್ವರ್ ಸಹ ಮನವೊಲಿಸಲು ವಿಫಲರಾಗಿ ಪ್ರಯತ್ನದಿಂದ ಹಿಂದೆ ಸರಿದಿದ್ದಾರೆ.
ತಮ್ಮ ರಾಜೀನಾಮೆ ನಿರ್ಧಾರದಿಂದ ಯಾವುದೇ ಕಾರಣಕ್ಕೂ ಹಿಂದೆ ಸರಿಯುವುದಿಲ್ಲ ಎಂದು ಸೋನಿಯಾ ಗಾಂಧಿಯವರಿಗೆ ಎಸ್.ಎಂ. ಕೃಷ್ಣ ನೇರವಾಗಿಯೇ ತಿಳಿಸಿದ್ದಾರೆ. ನಿಮ್ಮ ಬಗ್ಗೆ ನನಗೆ ಗೌರವ ಇದೆ, ರಾಜೀನಾಮೆ ವಿಷಯ ಬಿಟ್ಟು ಬೇರೇನಾದರೂ ಮಾತನಾಡಿ, ಆ ವಿಷಯದಲ್ಲಿ ನನ್ನ ನಿರ್ಧಾರ ಬದಲಿಸಲು ಸಾಧ್ಯವಿಲ್ಲ. ನಾನು ಈಗ ಅಸಹಾಯಕ ಎಂದು ಕೃಷ್ಣ ಸ್ಪಷ್ಟಪಡಿಸಿದ್ದಾರೆ. ಈ
ಬೆಳವಣಿಗೆ ಹಿನ್ನೆಲೆಯಲ್ಲಿ ಅವರನ್ನು ಪಕ್ಷಕ್ಕೆ ವಾಪಸ್ ಕರೆತರುವ ಪ್ರಯತ್ನ ಬಹುತೇಕ ಅಂತ್ಯವಾಗಿದೆ ಎನ್ನಲಾಗಿದೆ.