Advertisement

ಮೊಟ್ಟೆ ಪ್ರಕರಣ: ಸಿದ್ದರಾಮಯ್ಯ ಜತೆ ಮಾತಾಡಿದ ಸಿಎಂ ಬೊಮ್ಮಾಯಿ

07:02 PM Aug 19, 2022 | Team Udayavani |

ಬೆಂಗಳೂರು: ಮೊಟ್ಟೆ ಪ್ರಕರಣ ಕುರಿತಾಗಿ ವಿಪಕ್ಷ ನಾಯಕ ಸಿದ್ದರಾಮಯ್ಯ ಜತೆ ಸಿಎಂ ಬಸವರಾಜ್ ಬೊಮ್ಮಾಯಿ ಅವರು ಕರೆ ಮಾಡಿ ಮಾತನಾಡಿದ್ದಾರೆ.

Advertisement

ಸುದ್ದಿಗಾರರೊಂದಿಗೆ ಮಾತನಾಡಿದ ಸಿಎಂ, ಅವರಿಗೆ ಜೀವ ಬೆದರಿಕೆ ಇದೆ ಎಂದು ಮಾಧ್ಯಮಗಳಲ್ಲಿ ಸುದ್ದಿ ಬಂತು.ಇದನ್ನು ನಾವು ಗಂಭೀರವಾಗಿ ಪರಿಗಣಿಸಿದ್ದೇವೆ. ವಿಪಕ್ಷ ನಾಯಕರಿಗೆ ಎಲ್ಲ ರೀತಿಯ ಭದ್ರತೆ ಕೊಡುತ್ತೇವೆ. ನಾನು ನೇರವಾಗಿ ಸಿದ್ದರಾಮಯ್ಯ ಜತೆಗೇ ಮಾತಾಡಿದೆ. ನಿಮಗೆ ಯಾರಿಂದಾದರೂ ಬೆದರಿಕೆ ಕರೆ ಬಂದಿದೆಯಾ ಅಂತ ವಿಚಾರಿಸಿದೆ. ಪೊಲೀಸ್ ಅಧಿಕಾರಿಗಳಿಗೆ ಸೂಚನೆ ನೀಡಿದ್ದೇನೆ.ವಿರೋಧ ಪಕ್ಷದ ನಾಯಕರಿಗೆ ಸೂಕ್ತ ಭದ್ರತೆ ಕೊಡುವಂತೆ ಸೂಚಿಸಿದ್ದೇನೆ. ಇವತ್ತು ಡಿಜಿಪಿಯವರನ್ನು ಕರೆಸಿ ಪ್ರಕರಣದ ಬಗ್ಗೆ ಮಾಹಿತಿ ಪಡೆದಿದ್ದೇನೆ. ಕಾನೂನು ಸುವ್ಯವಸ್ಥೆ ಕಾಪಾಡಲು ಡಿಜಿಪಿಗೆ ಸೂಚಿಸಿದ್ದೇನೆ ಎಂದರು.

ಪ್ರತ್ಯೇಕ ಲಿಂಗಾಯತ ಧರ್ಮ ಹೋರಾಟದ ಕುರಿತು ರಂಭಾಪುರಿ ಶ್ರೀಗಳ ಬಳಿ ಸಿದ್ದರಾಮಯ್ಯ ಪಶ್ಚತ್ತಾಪ ಮಾತು ವಿಚಾರಡಾ ಕುರಿತು,ಇದರ ಬಗ್ಗೆ ನಾನು ಪ್ರತಿಕ್ರಿಯೆ ನೀಡುವುದಿಲ್ಲ.ಆ ಬಗ್ಗೆ ನಾನು ನಾಳೆ ಮಾತನಾಡುತ್ತೇನೆ ಎಂದು ಸಿಎಂ ಬೊಮ್ಮಾಯಿ ಹೇಳಿದರು.

Advertisement

Udayavani is now on Telegram. Click here to join our channel and stay updated with the latest news.

Next